ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಚಿಕ್ಕಕೆರೆಗೆ ಕಸದ ಗಂಡಾಂತರ

ಪಟ್ಟಣದ ಅಂಚಿನಲ್ಲಿರುವ ಚಿಕ್ಕಕೆರೆ ಒಂದೆಡೆ ಒತ್ತುವರಿಯಿಂದ, ಮತ್ತೊಂದೆಡೆ ಕುಂಬಳಹಳ್ಳಿ ಗ್ರಾಮಕ್ಕೆ ಅಕ್ರಮ ಸಂಪರ್ಕ ರಸ್ತೆ ನಿರ್ಮಾಣದಿಂದ ಅಳಿವು ಉಳಿವಿಗಾಗಿ ಹೋರಾಡುತ್ತಿದ್ದರೆ ಇದೀಗ ನಗರಸಭೆ ತ್ಯಾಜ್ಯ ವಸ್ತುಗಳನ್ನು ಸುರಿಯುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ...

ಹೊಸಕೋಟೆ: ಪಟ್ಟಣದ ಅಂಚಿನಲ್ಲಿರುವ ಚಿಕ್ಕಕೆರೆ ಒಂದೆಡೆ ಒತ್ತುವರಿಯಿಂದ, ಮತ್ತೊಂದೆಡೆ ಕುಂಬಳಹಳ್ಳಿ ಗ್ರಾಮಕ್ಕೆ ಅಕ್ರಮ ಸಂಪರ್ಕ ರಸ್ತೆ ನಿರ್ಮಾಣದಿಂದ ಅಳಿವು ಉಳಿವಿಗಾಗಿ ಹೋರಾಡುತ್ತಿದ್ದರೆ ಇದೀಗ ನಗರಸಭೆ ತ್ಯಾಜ್ಯ ವಸ್ತುಗಳನ್ನು ಸುರಿಯುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ.

ಕೆಲವು ವರ್ಷಗಳ ಹಿಂದೆ ಇದೇ ರೀತಿ ತ್ಯಾಜ್ಯ ಸುರಿಯುತ್ತಿದ್ದ ಸಂದರ್ಭದಲ್ಲಿ ಸ್ಥಳೀಯರು ಪ್ರತಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿತ್ತು. ಈಗ ಪುನಃ ನಗರಸಭೆಯ ಟ್ರ್ಯಾಕ್ಟರ್‍ನಲ್ಲಿ ತ್ಯಾಜ್ಯ ಸುರಿಯಲಾಗುತ್ತಿದ್ದು ಮತ್ತೊಮ್ಮೆ ಸಮಸ್ಯೆ ಸೃಷ್ಟಿಗೊಂಡಿದೆ. ಕೆರೆ ಅಂಗಳದಲ್ಲಿ ಪಟ್ಟಣದ ಸಮೀಪದ ಸೊನ್ನದೇನಹಳ್ಳಿ, ಸೋಂಪುರ ಗ್ರಾಮಗಳಿಗೆ ಕಾಲುದಾ ರಿಯಿದ್ದು ಅದರ ಪಕ್ಕದಲ್ಲಿನ ಪೇದೆಗಳ ಬಳಿ ತ್ಯಾಜ್ಯ ಸುರಿಯುತ್ತಿದ್ದು ಅಕ್ಕಪಕ್ಕದ ತೋಟಗಳಲ್ಲಿ ಬೆಳೆ ಬೆಳೆಯುವ ರೈತರಿಗೆ ದುರ್ವಾಸನೆ ಸಹಿಸಲು ಸಾಧ್ಯವಾಗುತ್ತಿಲ್ಲ.

ಅನೇಕ ಸಾಂಕ್ರಾಮಿಕ ರೋಗಗಳು ಸಹ ಹರಡುವ ಭೀತಿ ಉಂಟಾಗಿದೆ. ಇದರೊಂದಿಗೆ ಕೆರೆಯಲ್ಲಿನ ಅಲ್ಲಲ್ಲಿ ಕಂಡುಬರುವ ಹಸಿರು ಹುಲ್ಲನ್ನು ಮೇಯಲು ಬರುವ ರಾಸುಗಳು ಸಹ ತ್ಯಾಜ್ಯ ವಸ್ತುಗಳನ್ನು ತಿಂದು ಅನಾಹುತಗಳು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಈ ಬಗ್ಗೆ ನಗರಸಭೆ ಅಧಿಕಾರಿಗಳಿಗೆ ಸುತ್ತ ಮುತ್ತಲಿನ ರೈತರು, ನಿವಾಸಿಗಳು ಮನವಿ ಮಾಡಿದ್ದಾಗ್ಯೂ ಯಾವುದೇ ಪ್ರಯೋಜನವಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರ ಕುಸಿತ: 5ನೇ ತರಗತಿವರೆಗಿನ ವಿದ್ಯಾರ್ಥಿಗಳ ದೈಹಿಕ ತರಗತಿಗಳಿಗೆ ಬ್ರೇಕ್!

ಪಹಲ್ಗಾಮ್ ಉಗ್ರ ದಾಳಿ: 1,597 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ NIA; ಉನ್ನತ LeT ಕಮಾಂಡರ್ ಸಾಜಿದ್ ಜಾಟ್ ಹೆಸರು ಉಲ್ಲೇಖ!

Gold Rate: ಮತ್ತೆ ಗಗನಕ್ಕೇರಿದ ಚಿನ್ನದ ದರ, ಒಂದೇ ದಿನ ಬರೊಬ್ಬರಿ 4 ಸಾವಿರ ರೂ ಏರಿಕೆ, ಎಷ್ಟು ಗೊತ್ತಾ?

Video: ಯಶವಂತಪುರ ನಿಲ್ದಾಣದಲ್ಲಿ ಹೈಡ್ರಾಮಾ: RPF ಸಿಬ್ಬಂದಿ ಮೇಲೆ ಪುಂಡರ ಹಲ್ಲೆ, ರೈಲು ವಿಳಂಬ! ಆಗಿದ್ದೇನು?

ನವೆಂಬರ್‌ನಲ್ಲಿ ನಿರುದ್ಯೋಗ ದರ ಶೇ. 4.7 ಕ್ಕೆ ಇಳಿಕೆ, ಉದ್ಯೋಗ ಮಾರುಕಟ್ಟೆ ಚೇತರಿಕೆ!

SCROLL FOR NEXT