ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಚಿಕ್ಕಕೆರೆಗೆ ಕಸದ ಗಂಡಾಂತರ

ಪಟ್ಟಣದ ಅಂಚಿನಲ್ಲಿರುವ ಚಿಕ್ಕಕೆರೆ ಒಂದೆಡೆ ಒತ್ತುವರಿಯಿಂದ, ಮತ್ತೊಂದೆಡೆ ಕುಂಬಳಹಳ್ಳಿ ಗ್ರಾಮಕ್ಕೆ ಅಕ್ರಮ ಸಂಪರ್ಕ ರಸ್ತೆ ನಿರ್ಮಾಣದಿಂದ ಅಳಿವು ಉಳಿವಿಗಾಗಿ ಹೋರಾಡುತ್ತಿದ್ದರೆ ಇದೀಗ ನಗರಸಭೆ ತ್ಯಾಜ್ಯ ವಸ್ತುಗಳನ್ನು ಸುರಿಯುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ...

ಹೊಸಕೋಟೆ: ಪಟ್ಟಣದ ಅಂಚಿನಲ್ಲಿರುವ ಚಿಕ್ಕಕೆರೆ ಒಂದೆಡೆ ಒತ್ತುವರಿಯಿಂದ, ಮತ್ತೊಂದೆಡೆ ಕುಂಬಳಹಳ್ಳಿ ಗ್ರಾಮಕ್ಕೆ ಅಕ್ರಮ ಸಂಪರ್ಕ ರಸ್ತೆ ನಿರ್ಮಾಣದಿಂದ ಅಳಿವು ಉಳಿವಿಗಾಗಿ ಹೋರಾಡುತ್ತಿದ್ದರೆ ಇದೀಗ ನಗರಸಭೆ ತ್ಯಾಜ್ಯ ವಸ್ತುಗಳನ್ನು ಸುರಿಯುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ.

ಕೆಲವು ವರ್ಷಗಳ ಹಿಂದೆ ಇದೇ ರೀತಿ ತ್ಯಾಜ್ಯ ಸುರಿಯುತ್ತಿದ್ದ ಸಂದರ್ಭದಲ್ಲಿ ಸ್ಥಳೀಯರು ಪ್ರತಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿತ್ತು. ಈಗ ಪುನಃ ನಗರಸಭೆಯ ಟ್ರ್ಯಾಕ್ಟರ್‍ನಲ್ಲಿ ತ್ಯಾಜ್ಯ ಸುರಿಯಲಾಗುತ್ತಿದ್ದು ಮತ್ತೊಮ್ಮೆ ಸಮಸ್ಯೆ ಸೃಷ್ಟಿಗೊಂಡಿದೆ. ಕೆರೆ ಅಂಗಳದಲ್ಲಿ ಪಟ್ಟಣದ ಸಮೀಪದ ಸೊನ್ನದೇನಹಳ್ಳಿ, ಸೋಂಪುರ ಗ್ರಾಮಗಳಿಗೆ ಕಾಲುದಾ ರಿಯಿದ್ದು ಅದರ ಪಕ್ಕದಲ್ಲಿನ ಪೇದೆಗಳ ಬಳಿ ತ್ಯಾಜ್ಯ ಸುರಿಯುತ್ತಿದ್ದು ಅಕ್ಕಪಕ್ಕದ ತೋಟಗಳಲ್ಲಿ ಬೆಳೆ ಬೆಳೆಯುವ ರೈತರಿಗೆ ದುರ್ವಾಸನೆ ಸಹಿಸಲು ಸಾಧ್ಯವಾಗುತ್ತಿಲ್ಲ.

ಅನೇಕ ಸಾಂಕ್ರಾಮಿಕ ರೋಗಗಳು ಸಹ ಹರಡುವ ಭೀತಿ ಉಂಟಾಗಿದೆ. ಇದರೊಂದಿಗೆ ಕೆರೆಯಲ್ಲಿನ ಅಲ್ಲಲ್ಲಿ ಕಂಡುಬರುವ ಹಸಿರು ಹುಲ್ಲನ್ನು ಮೇಯಲು ಬರುವ ರಾಸುಗಳು ಸಹ ತ್ಯಾಜ್ಯ ವಸ್ತುಗಳನ್ನು ತಿಂದು ಅನಾಹುತಗಳು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಈ ಬಗ್ಗೆ ನಗರಸಭೆ ಅಧಿಕಾರಿಗಳಿಗೆ ಸುತ್ತ ಮುತ್ತಲಿನ ರೈತರು, ನಿವಾಸಿಗಳು ಮನವಿ ಮಾಡಿದ್ದಾಗ್ಯೂ ಯಾವುದೇ ಪ್ರಯೋಜನವಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!