ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಚಿಕ್ಕಕೆರೆಗೆ ಕಸದ ಗಂಡಾಂತರ

ಪಟ್ಟಣದ ಅಂಚಿನಲ್ಲಿರುವ ಚಿಕ್ಕಕೆರೆ ಒಂದೆಡೆ ಒತ್ತುವರಿಯಿಂದ, ಮತ್ತೊಂದೆಡೆ ಕುಂಬಳಹಳ್ಳಿ ಗ್ರಾಮಕ್ಕೆ ಅಕ್ರಮ ಸಂಪರ್ಕ ರಸ್ತೆ ನಿರ್ಮಾಣದಿಂದ ಅಳಿವು ಉಳಿವಿಗಾಗಿ ಹೋರಾಡುತ್ತಿದ್ದರೆ ಇದೀಗ ನಗರಸಭೆ ತ್ಯಾಜ್ಯ ವಸ್ತುಗಳನ್ನು ಸುರಿಯುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ...

ಹೊಸಕೋಟೆ: ಪಟ್ಟಣದ ಅಂಚಿನಲ್ಲಿರುವ ಚಿಕ್ಕಕೆರೆ ಒಂದೆಡೆ ಒತ್ತುವರಿಯಿಂದ, ಮತ್ತೊಂದೆಡೆ ಕುಂಬಳಹಳ್ಳಿ ಗ್ರಾಮಕ್ಕೆ ಅಕ್ರಮ ಸಂಪರ್ಕ ರಸ್ತೆ ನಿರ್ಮಾಣದಿಂದ ಅಳಿವು ಉಳಿವಿಗಾಗಿ ಹೋರಾಡುತ್ತಿದ್ದರೆ ಇದೀಗ ನಗರಸಭೆ ತ್ಯಾಜ್ಯ ವಸ್ತುಗಳನ್ನು ಸುರಿಯುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ.

ಕೆಲವು ವರ್ಷಗಳ ಹಿಂದೆ ಇದೇ ರೀತಿ ತ್ಯಾಜ್ಯ ಸುರಿಯುತ್ತಿದ್ದ ಸಂದರ್ಭದಲ್ಲಿ ಸ್ಥಳೀಯರು ಪ್ರತಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿತ್ತು. ಈಗ ಪುನಃ ನಗರಸಭೆಯ ಟ್ರ್ಯಾಕ್ಟರ್‍ನಲ್ಲಿ ತ್ಯಾಜ್ಯ ಸುರಿಯಲಾಗುತ್ತಿದ್ದು ಮತ್ತೊಮ್ಮೆ ಸಮಸ್ಯೆ ಸೃಷ್ಟಿಗೊಂಡಿದೆ. ಕೆರೆ ಅಂಗಳದಲ್ಲಿ ಪಟ್ಟಣದ ಸಮೀಪದ ಸೊನ್ನದೇನಹಳ್ಳಿ, ಸೋಂಪುರ ಗ್ರಾಮಗಳಿಗೆ ಕಾಲುದಾ ರಿಯಿದ್ದು ಅದರ ಪಕ್ಕದಲ್ಲಿನ ಪೇದೆಗಳ ಬಳಿ ತ್ಯಾಜ್ಯ ಸುರಿಯುತ್ತಿದ್ದು ಅಕ್ಕಪಕ್ಕದ ತೋಟಗಳಲ್ಲಿ ಬೆಳೆ ಬೆಳೆಯುವ ರೈತರಿಗೆ ದುರ್ವಾಸನೆ ಸಹಿಸಲು ಸಾಧ್ಯವಾಗುತ್ತಿಲ್ಲ.

ಅನೇಕ ಸಾಂಕ್ರಾಮಿಕ ರೋಗಗಳು ಸಹ ಹರಡುವ ಭೀತಿ ಉಂಟಾಗಿದೆ. ಇದರೊಂದಿಗೆ ಕೆರೆಯಲ್ಲಿನ ಅಲ್ಲಲ್ಲಿ ಕಂಡುಬರುವ ಹಸಿರು ಹುಲ್ಲನ್ನು ಮೇಯಲು ಬರುವ ರಾಸುಗಳು ಸಹ ತ್ಯಾಜ್ಯ ವಸ್ತುಗಳನ್ನು ತಿಂದು ಅನಾಹುತಗಳು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಈ ಬಗ್ಗೆ ನಗರಸಭೆ ಅಧಿಕಾರಿಗಳಿಗೆ ಸುತ್ತ ಮುತ್ತಲಿನ ರೈತರು, ನಿವಾಸಿಗಳು ಮನವಿ ಮಾಡಿದ್ದಾಗ್ಯೂ ಯಾವುದೇ ಪ್ರಯೋಜನವಾಗಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT