ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಬೆಂಗಳೂರಿನಲ್ಲಿ ಧಾರಾಕಾರ ಮಳೆ, ಕುಸಿದು ಬಿದ್ದ ಜೆಡಿಎಸ್ ಪೆಂಡಾಲ್

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶನಿವಾರ ಮಧ್ಯಾಹ್ನದಿಂದಲೇ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆಯಿಂದಾಗ ಮೆಜೆಸ್ಟಿಕ್ ಸೇರಿದಂತೆ...

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶನಿವಾರ ಮಧ್ಯಾಹ್ನದಿಂದಲೇ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆಯಿಂದಾಗ ಮೆಜೆಸ್ಟಿಕ್ ಸೇರಿದಂತೆ ಹಲವು ಕಡೆ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.

ಮೆಜೆಸ್ಟಿಕ್, ಗಾಂಧಿನಗರದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಸಂಚಾರ ದಟ್ಟಣೆ ಉಂಟಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ವಾಹನ ಸವಾರರು ಮನೆ ತಲುಪಲು ಪರದಾಡುತ್ತಿದ್ದಾರೆ.

ಶಾಂತಿನಗರ, ಶೇಷಾದ್ರಿಪುರ, ಬಾಪೂಜಿನಗರ, ಈಜಿಪುರ, ಮಾಗಡಿರಸ್ತೆ, ಇಂದಿರಾನಗರ, ಚಾಮರಾಜಪೇಟೆ, ರಾಜಾಜಿನಗರ, ಕೆ.ಆರ್,ವೃತ್ತ, ಬಸವೇಶ್ವರ ನಗರ, ಸೇರಿದಂತೆ ನಗರದ ಬಹುತೇಕ ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ.

ರಸ್ತೆಗಳು ಹಳ್ಳಗಳಂತಾದರೆ, ತಗ್ಗು ಪ್ರದೇಶಗಳು ಕೆರೆಗಳಾಗಿದ್ದು, ರಸ್ತೆ ಯಾವುದು, ಹೊಂಡ ಯಾವುದು ಎಂದು ಗುರುತಿಸಲು ಸಾಧ್ಯವಾಗದೆ ವಾಹನ ಸವಾರರು ಪರದಾಡುತ್ತಿದ್ದಾರೆ.

ಕುಸಿದು ಬಿದ್ದ ಜೆಡಿಎಸ್ ಪೆಂಡಾಲ್:
ನಗರದ ಫ್ರೀಡಂ ಪಾರ್ಕ್ ನಲ್ಲಿ  ನಾಳೆ ನಡೆಯಬೇಕಿರುವ ಜೆಡಿಎಸ್ ಅಹವಾಲು ಸ್ವೀಕಾರ ಸಮಾರಂಭಕ್ಕಾಗಿ ಬೃಹತ್ ಪೆಂಡಾಲ್ ಹಾಕಲಾಗಿತ್ತು. ಧಾರಾಕಾರ ಸುರಿದ ಪರಿಣಾಮ ಪೆಂಡಾಲ್ ಕುಸಿದುಬಿದ್ದ ಘಟನೆ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ಕಿತ್ತಾಟದ ನಡುವೆ ರಾಜ್ಯಕ್ಕೆ ಹವಾಮಾನ ಇಲಾಖೆ ಸಿಹಿ ಸುದ್ದಿ ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಸಾಧ್ಯತೆ!

ಬಿಜೆಪಿಗೆ ಆಘಾತ! ಉಪಸಭಾಪತಿ ಎಂ.ಕೆ. ಪ್ರಾಣೇಶ್ ಆಯ್ಕೆ ಅಸಿಂಧು; ಮರು ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ವಿಜಯಭೇರಿ

ಕಾವೇರಿ ಜಲ ವಿವಾದ: ತಮಿಳುನಾಡು CM Vijay ಭೇಟಿಗೆ ಬ್ರೇಕ್! ಎಲ್ಲ ಅಂಕಿ-ಅಂಶ ನ್ಯಾಯಾಲಯದಲ್ಲಿದೆ, ಮೇಲ್ಮನವಿ ಸಲ್ಲಿಸಿದ್ದೇವೆ; Video

ಬೆಳ್ಳಂಬೆಳಗ್ಗೆ ಉದ್ಯಮಿಗೆ ಗುಂಡಿಕ್ಕಿ ಹತ್ಯೆ; ಬೆಚ್ಚಿಬಿದ್ದ ಕುಂದಾಪುರ

'ನೀವೇನ್ ಬಿಜೆಪಿಯವ್ರಾ?'; ಪತ್ರಕರ್ತನ ಪ್ರಶ್ನೆಗೆ ರಾಹುಲ್ ಗಾಂಧಿ ಗರಂ, ಇಷ್ಟಕ್ಕೂ ಆಗಿದ್ದೇನು? Video