ಹೊಯ್ಸಳಕ್ಕೂ ಬಂತು ಸಿಸಿಟಿವಿ ಕ್ಯಾಮೆರಾ 
ಜಿಲ್ಲಾ ಸುದ್ದಿ

ಹೊಯ್ಸಳಕ್ಕೂ ಬಂತು ಸಿಸಿಟಿವಿ ಕ್ಯಾಮೆರಾ

ಪರಿಣಾಮಕಾರಿ ಗಸ್ತು ವ್ಯವಸ್ಥೆ ಹಾಗೂ ಅಪರಾಧಿಗಳ ಮೇಲೆ ನಿಗಾ ಇರಿಸುವ ಉದ್ದೇಶದಿಂದ ಪೊಲೀಸ್ ಇಲಾಖೆ ನಗರದಲ್ಲಿ ಗಸ್ತು ತಿರುಗುವ ಪೊಲೀಸ್ ಹೊಯ್ಸಳ ವಾಹನಗಳಿಗೆ ಕ್ಯಾಮೆರಾ ಅಳವಡಿಸಿದೆ...

ಬೆಂಗಳೂರು: ಪರಿಣಾಮಕಾರಿ ಗಸ್ತು ವ್ಯವಸ್ಥೆ ಹಾಗೂ ಅಪರಾಧಿಗಳ ಮೇಲೆ ನಿಗಾ ಇರಿಸುವ ಉದ್ದೇಶದಿಂದ ಪೊಲೀಸ್ ಇಲಾಖೆ ನಗರದಲ್ಲಿ ಗಸ್ತು ತಿರುಗುವ ಪೊಲೀಸ್ ಹೊಯ್ಸಳ ವಾಹನಗಳಿಗೆ ಕ್ಯಾಮೆರಾ ಅಳವಡಿಸಿದೆ.

ಪ್ರಾಯೋಗಿಕವಾಗಿ ಆಗ್ನೇಯ ವಿಭಾಗದ 14 ಠಾಣೆಗಳ ವ್ಯಾಪ್ತಿಯಲ್ಲಿಗಸ್ತು ತಿರುಗುವ 25 ಹೊಯ್ಸಳ ವಾಹನಗಳ ಪೈಕಿ 15 ವಾಹನಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಪೊಲೀಸರು ಯಾವ ಸ್ಥಳದಲ್ಲಿ ಗಸ್ತು ತಿರುಗುತ್ತಾರೆ? ಯಾವ ಸಮಯಕ್ಕೆ, ಯಾವ ಪ್ರದೇಶದಲ್ಲಿರುತ್ತಾರೆ ಎನ್ನುವುದನ್ನು ನಿರಂತರವಾಗಿ ಗಮನಿಸ ಬಹುದು. ಅಲ್ಲದೇ ಪೊಲೀಸರ ಭ್ರಷ್ಟಾಚಾರಕ್ಕೂ ಇದು ಕಡಿವಾಣ ಹಾಕಲಿದೆ ಎನ್ನುತ್ತಾರೆ ಹಿರಿಯ ಅಧಿಕಾರಿಗಳು.

ಮಳೆ, ಬಿಸಿಲಿಗೆ ಹಾನಿಯಾಗದಂತೆ ಪ್ಲಾಸ್ಟಿಕ್ ಕವಚ ಹೊಂದಿರುವ ಕ್ಯಾಮೆರಾವನ್ನು ವಾಹನದ ಮೇಲೆ ಸೈರನ್ ಲೈಟ್ ಗಳ ರಕ್ಷಣೆಗಿರುವ ತಂತಿಗಳ ಮೇಲೆ ಅಳವಡಿಸಲಾಗಿದೆ. ವಿಡಿಯೋ ರೆಕಾರ್ಡಿಂಗ್ ವ್ಯವಸ್ಥೆ ವಾಹನದ ಒಳಭಾಗದಲ್ಲಿದೆ. ಗಸ್ತು ತಿರುಗಿದ ವಾಹನ ವಾಪಸ್ ಠಾಣೆಗೆ ಬಂದ ನಂತರ ಪ್ರತಿ 12 ಗಂಟೆಗಳಿಗೊಮ್ಮೆ ವಾಹನದಲ್ಲಿರುವ ರೆಕಾರ್ಡಿಂಗ್ ಹಾರ್ಡ್ ಡಿಸ್ಕ್ ತೆರೆದು ಅದರಲ್ಲಿರುವ ವಿಡಿಯೋವನ್ನು ಠಾಣೆಯಲ್ಲಿರುವ ಕಂಪ್ಯೂಟರ್‍ಗೆ ಡೌನ್‍ಲೋಡ್ ಮಾಡಿಕೊಳ್ಳುವ ವ್ಯವಸ್ಥೆ ಮಾಡಲಾಗಿದೆ.

ಈ ಕ್ಯಾಮೆರಾ ರಾತ್ರಿಯೂ ಚಿತ್ರೀಕರಿಸಿಕೊಳ್ಳುವ ಸಾಮರ್ಥ್ಯ ಹೊಂದಿದೆ. ದೊಂಬಿ, ಗಲಾಟೆ, ಅನುಮಾನಾಸ್ಪದ ವ್ಯಕ್ತಿಗಳ ಚಲನವಲನಗಳ ಮೇಲೆ ನಿಗಾ ಇಡುವಾಗ ಅವರ ಮುಖ ಚಹರೆ ಕ್ಯಾಮೆರಾದಲ್ಲಿ ಸೆರೆಯಾಗುತ್ತದೆ. ಇದರಿಂದ ಆರೋಪಿಗಳ ಬಂಧನಕ್ಕೂ ಸಹಕಾರಿಯಾಗಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT