ವಿ.ಎಸ್.ಉಗ್ರಪ್ಪ, ವಿಧಾನಪರಿಷತ್ ಸದಸ್ಯ 
ಜಿಲ್ಲಾ ಸುದ್ದಿ

ಸರ್ಕಾರಿ ಜಾಹೀರಾತಿನಲ್ಲಿ ರಾಜಕಾರಣಿಗಳ ಭಾವಚಿತ್ರ ನಿಷೇಧಕ್ಕೆ ಉಗ್ರಪ್ಪ ವಿರೋಧ

ಸರ್ಕಾರಿ ಜಾಹೀರಾತಿನಲ್ಲಿ ರಾಜಕಾರಣಿಗಳ ಭಾವಚಿತ್ರ ನಿಷೇಧಿಸಿರುವ ತೀರ್ಪನ್ನು ಸುಪ್ರೀಂಕೋರ್ಟ್ ಹಿಂಪಡೆಯಬೇಕು. ಕೇಂದ್ರ ಸರ್ಕಾರ ಕೂಡಲೇ ಸುಪ್ರೀಂಕೋರ್ಟ್‌ನಲ್ಲಿ ಮರು ಪರಿಶೀಲನೆ ಅರ್ಜಿ ಸಲ್ಲಿಸಬೇಕು...

ಬೆಂಗಳೂರು: ಸರ್ಕಾರಿ ಜಾಹೀರಾತಿನಲ್ಲಿ ರಾಜಕಾರಣಿಗಳ ಭಾವಚಿತ್ರ ನಿಷೇಧಿಸಿರುವ ತೀರ್ಪನ್ನು ಸುಪ್ರೀಂಕೋರ್ಟ್ ಹಿಂಪಡೆಯಬೇಕು. ಕೇಂದ್ರ ಸರ್ಕಾರ ಕೂಡಲೇ ಸುಪ್ರೀಂಕೋರ್ಟ್‌ನಲ್ಲಿ ಮರು ಪರಿಶೀಲನೆ ಅರ್ಜಿ ಸಲ್ಲಿಸಬೇಕು. ಇಲ್ಲವೇ ಕಾನೂನಿಗೆ ತಿದ್ದುಪಡಿ ತರುವ ಮೂಲಕ ಇದನ್ನು ತಡೆಯಬೇಕೆಂದು ವಿಧಾನಪರಿಷತ್ ಸದಸ್ಯ ವಿ.ಎಸ್. ಉಗ್ರಪ್ಪ ಆಗ್ರಹಿಸಿದ್ದಾರೆ.

ಸರ್ಕಾರಿ ಜಾಹೀರಾತುಗಳಲ್ಲಿ ರಾಷ್ಟ್ರಪತಿ, ಪ್ರಧಾನಿ ಮತ್ತು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರ ಭಾವಚಿತ್ರವನ್ನು ಮಾತ್ರ ಪ್ರಕಟಿಸಿದರೆ ಅದು ಸಂವಿಧಾನದ ಆಶಯಕ್ಕೆ ವಿರುದ್ಧವಾಗುತ್ತದೆ. ಹಾಗೆಯೇ ದೇಶದ ಒಕ್ಕೂಟ ವ್ಯವಸ್ಥೆಗೂ ಧಕ್ಕೆಯಾಗಲಿದೆ. ಆದ್ದರಿಂದ ಸುಪ್ರೀಂಕೋರ್ಟ್ ಈ ತೀರ್ಪನ್ನು ಪುನರ್‌ಪರಿಶೀಲಿಸಬೇಕು  ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.

 ಜಾಹೀರಾತಿನಲ್ಲಿ ಭಾವಚಿತ್ರ ಪ್ರಕಟಿಸುವ ಸಂಬಂಧ ರಚಿಸಿದ್ದ ಮಾಧವನ್ ಸಮಿತಿ ವರದಿ ಪ್ರಕಾರ ಸರ್ಕಾರದ ಜಾಹೀರಾತುಗಳಲ್ಲಿ ಯಾವುದೇ ರಾಜಕಾರಣಿಗಳು ಮತ್ತು ಗಣ್ಯರ ಭಾವಚಿತ್ರ ಹಾಕುವಂತಿಲ್ಲ. ಹೀಗಿರುವಾಗ ರಾಷ್ಟ್ರಪತಿಯಾಗಲಿ, ಪ್ರಧಾನಿ ಭಾವಚಿತ್ರಗಳನ್ನೇಕೆ ಹಾಕಬೇಕು ? ಅಷ್ಟೇ ಏಕೆ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಭಾವಚಿತ್ರವನ್ನಾದರೂ ಏಕೆ ಪ್ರಕಟಿಸಬೇಕು? ಆದ್ದರಿಂದ ಈ ನಿಯಮವನ್ನು ವಾಪಸ್ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಸರ್ಕಾರಿ ಜಾಹೀರಾತಿನಲ್ಲಿ ಯಾವ ಗಣ್ಯರ ಭಾವಚಿತ್ರವನ್ನೂ ಹಾಕದಂತೆ ಮಾಡಬೇಕು ಎಂದು ಉಗ್ರಪ್ಪ ವಾದಿಸಿದರು. ಮುಖ್ಯ ಸಚೇತಕ ಪಿ.ಎಂ. ಅಶೋಕ್ ಹಾಜರಿದ್ದರು.

ಕಳ್ಳ ಲಾಟರಿ ಮಾಫಿಯಾವನ್ನು ಸರ್ಕಾರ ಪ್ರೋತ್ಸಾಹಿಸುತ್ತಿದೆ. ಈ ಬಗ್ಗೆ ನನ್ನಲ್ಲಿ ಮಾಹಿತಿ ಇದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳುತ್ತಿದ್ದಾರೆ. ಕಾನೂನಿನ ಪ್ರಕಾರ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದ ಮಾಹಿತಿ ಇದ್ದಾಗ್ಯೂ, ಸಂಬಂಂಧಿಸಿದ ಇಲಾಖೆಗೆ ತಿಳಿಸದೆ ಮುಚ್ಚಿಡುವುದು ಅಪರಾಧ. ಲಾಟರಿ ದಂಧೆಯಿಂದ ಯಾರಿಗೆ ಎಷ್ಟೆಲ್ಲ ಹಣ ಹೋಗಿದೆ ಎಂದು ಕುಮಾರಸ್ವಾಮಿ ಹೇಳುವುದಾದರೆ ಅವರು ಅಧಿಕಾರದಲ್ಲಿದ್ದಾಗ ಇದು ನಡೆಯುತ್ತಿದ್ದಂತೆ ಕಾಣುತ್ತದೆ. ಈ ಅನುಭವದಲ್ಲಿಯೇ ಅವರು ಆರೋಪಿಸಿದ್ದಾರೆ. 

ವಿ.ಎಸ್.ಉಗ್ರಪ್ಪ
ವಿಧಾನಪರಿಷತ್ ಸದಸ್ಯ


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT