ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ನಗರದಲ್ಲಿ ಮುಂದುವರೆದ ಸರಗಳ್ಳತನ

ನಗರದಲ್ಲಿ ಸರಗಳ್ಳರ ಹಾವಳಿ ಮುಂದುವರೆದಿದ್ದು ಶನಿವಾರ ಬೆಳಗ್ಗೆ ಮಹಾಲಕ್ಷ್ಮೀ ಬಡಾವಣೆ ಹಾಗೂ ಯಲಹಂಕದಲ್ಲಿ ಸರಗಳ್ಳರು...

ಬೆಂಗಳೂರು: ನಗರದಲ್ಲಿ ಸರಗಳ್ಳರ ಹಾವಳಿ ಮುಂದುವರೆದಿದ್ದು ಶನಿವಾರ ಬೆಳಗ್ಗೆ ಮಹಾಲಕ್ಷ್ಮೀ ಬಡಾವಣೆ ಹಾಗೂ ಯಲಹಂಕದಲ್ಲಿ ಸರಗಳ್ಳರು ಕೃತ್ಯ ಎಸಗಿದ್ದಾರೆ.

ಮಹಾಲಕ್ಷ್ಮೀ ಬಡಾವಣೆ ಸಮೀಪದ ಜೆಸಿ ನಗರಜದಲ್ಲಿ ಜಾನಕಿ(60) ಎಂಬುವರ ಸರವನ್ನು ದುಷ್ಕರ್ಮಿಗಳು ಕಸಿದು ಪರಾರಿಯಾಗಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಜಾನಕಿ ಹೊರಗೆ ಬಂದಾಗ ಬೈಕ್‍ನಲ್ಲಿ ಹಿಂದಿನಿಂದ ಬಂದು 30 ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಯಲಹಂಕ ಸಮೀಪದ ಹುಣಸಮಾರನಹಳ್ಳಿಯಲ್ಲಿ ರಮಾ(35) ಎಂಬುವರ ಸರ ಅಪಹರಿಸಲಾಗಿದೆ. ಬೆಳಗ್ಗೆ 9.45ರ ಸುಮಾರಿಗೆ ನಾಯಿಯನ್ನು ಕರೆದುಕೊಂಡು ಸಮೀಪದ ನೀಲಗಿರಿ ಪ್ರದೇಶದ ಕಡೆ ವಾಯುವಿಹಾರಕ್ಕೆ ತೆರಳಿದ್ದರು. ಈ ವೇಳೆ ಹಿಂದಿನಿಂದ ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ರಮಾ ಅವರ ಮುಖವನ್ನು ಬಟ್ಟೆಯಿಂದ ಮುಚ್ಚಿ ಸರ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಪ್ರತಿರೋಧ ವ್ಯಕ್ತಪಡಿಸಿದ ರಮಾ ಕಿರುಚಾಡುತ್ತಾ ಸರವನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಆದರೂ, ದುಷ್ಕರ್ಮಿಗಳು ಅರ್ಧ ಸರವನ್ನು(30 ಗ್ರಾಂ) ಕಿತ್ತುಕೊಂಡು ಪರಾರಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್