ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ನಗರದಲ್ಲಿ ಮುಂದುವರೆದ ಸರಗಳ್ಳತನ

ನಗರದಲ್ಲಿ ಸರಗಳ್ಳರ ಹಾವಳಿ ಮುಂದುವರೆದಿದ್ದು ಶನಿವಾರ ಬೆಳಗ್ಗೆ ಮಹಾಲಕ್ಷ್ಮೀ ಬಡಾವಣೆ ಹಾಗೂ ಯಲಹಂಕದಲ್ಲಿ ಸರಗಳ್ಳರು...

ಬೆಂಗಳೂರು: ನಗರದಲ್ಲಿ ಸರಗಳ್ಳರ ಹಾವಳಿ ಮುಂದುವರೆದಿದ್ದು ಶನಿವಾರ ಬೆಳಗ್ಗೆ ಮಹಾಲಕ್ಷ್ಮೀ ಬಡಾವಣೆ ಹಾಗೂ ಯಲಹಂಕದಲ್ಲಿ ಸರಗಳ್ಳರು ಕೃತ್ಯ ಎಸಗಿದ್ದಾರೆ.

ಮಹಾಲಕ್ಷ್ಮೀ ಬಡಾವಣೆ ಸಮೀಪದ ಜೆಸಿ ನಗರಜದಲ್ಲಿ ಜಾನಕಿ(60) ಎಂಬುವರ ಸರವನ್ನು ದುಷ್ಕರ್ಮಿಗಳು ಕಸಿದು ಪರಾರಿಯಾಗಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಜಾನಕಿ ಹೊರಗೆ ಬಂದಾಗ ಬೈಕ್‍ನಲ್ಲಿ ಹಿಂದಿನಿಂದ ಬಂದು 30 ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಯಲಹಂಕ ಸಮೀಪದ ಹುಣಸಮಾರನಹಳ್ಳಿಯಲ್ಲಿ ರಮಾ(35) ಎಂಬುವರ ಸರ ಅಪಹರಿಸಲಾಗಿದೆ. ಬೆಳಗ್ಗೆ 9.45ರ ಸುಮಾರಿಗೆ ನಾಯಿಯನ್ನು ಕರೆದುಕೊಂಡು ಸಮೀಪದ ನೀಲಗಿರಿ ಪ್ರದೇಶದ ಕಡೆ ವಾಯುವಿಹಾರಕ್ಕೆ ತೆರಳಿದ್ದರು. ಈ ವೇಳೆ ಹಿಂದಿನಿಂದ ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ರಮಾ ಅವರ ಮುಖವನ್ನು ಬಟ್ಟೆಯಿಂದ ಮುಚ್ಚಿ ಸರ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಪ್ರತಿರೋಧ ವ್ಯಕ್ತಪಡಿಸಿದ ರಮಾ ಕಿರುಚಾಡುತ್ತಾ ಸರವನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಆದರೂ, ದುಷ್ಕರ್ಮಿಗಳು ಅರ್ಧ ಸರವನ್ನು(30 ಗ್ರಾಂ) ಕಿತ್ತುಕೊಂಡು ಪರಾರಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT