ಬೆಂಕಿ ಕಾಣಿಸಿಕೊಂಡ ಬೆಳ್ಳಂದೂರು ಕೆರೆ 
ಜಿಲ್ಲಾ ಸುದ್ದಿ

ಬೆಳ್ಳಂದೂರು ಕೆರೆಯಲ್ಲಿ ಮತ್ತೊಮ್ಮೆ ಬೆಂಕಿ: ಸ್ಥಳೀಯರಲ್ಲಿ ಆತಂಕ

ಬೆಳ್ಳಂದೂರಿನ ಅಮಾನಿ ಕೆರೆಯ ಕೋಡಿಯಲ್ಲಿ ಮತ್ತೊಮ್ಮೆ ಬೆಂಕಿ ಕಾಣಿಸಿಕೊಂಡಿದ್ದು...

ಬೆಂಗಳೂರು : ಬೆಳ್ಳಂದೂರಿನ ಅಮಾನಿ ಕೆರೆಯ ಕೋಡಿಯಲ್ಲಿ  ಮತ್ತೊಮ್ಮೆ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರಲ್ಲಿ ಆತಂಕ ಉಂಟು ಮಾಡಿದೆ.

ಕೆರೆಯಲ್ಲಿ ಸೇರುತ್ತಿರುವ ರಾಸಾಯನಿಕಗಳ ಪರಿಣಾಮ ಬೆಂಕಿ ಕಾಣಿಸಿಕೊಂಡಿದ್ದು ಕಳೆದ ರಾತ್ರಿಯಿಂದಳು ಬೆಂಕಿ ಹೊತ್ತಿ ಉರಿಯುತ್ತಿದೆ. ಕರಿಯಮ್ಮನ ಅಗ್ರಹಾರ ರಸ್ತೆಯಲ್ಲಿ ಸಂಚರಿಸುವ ಸವಾರರಿಗೆ ತೊಂದರೆಯುಂಟಾಗುತ್ತಿದೆ. ಕರೆಯ ನೀರಿನಲ್ಲಿ ನೊರೆ ಶೇಖರಣೆಯಾಗಿದ್ದು, ರಾಸಾಯನಿಕದ ಪ್ರಮಾಣ ಹೆಚ್ಚಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ. ಕೆರೆ ಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಕಟ್ಟಗಳನ್ನು ನಿರ್ಮಿಸಿರುವ ಕಾರಣ ಕೆರೆ ನೀರು ರಸ್ತೆ ಮೇಲೆ ಹರಿಯುತ್ತಿದ್ದು ಸುಗಮ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಇಷ್ಟಾದರೂ ಬಿಡಿಎ, ಬಿಬಿಎಂಪಿ ಅಧಿಕಾರಿಗಳು ಪರಿಶೀಲನೆ ನಡೆಸದೆ ಇರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಮೇ.17ರಂದೂ ಇಂತದ್ದೆ ಘಟನೆ ನಡೆದಿತ್ತು.  ಕೆರೆಯಲ್ಲಿ ರಾಸಾಯನಿಕಗಳು ಸೇರದಂತೆ ಕ್ರಮ ಕೈಗೊಂಡಿರುವ ಬಗ್ಗೆ ಉಪಲೋಕಾಯುಕ್ತರು ಬಿಬಿಎಂಪಿ, ಬಿಡಿಎ ಅಧಿಕಾರಿಗಳಿಗೆ ನೊಟೀಸ್ ಜಾರಿ ಮಾಡಿದ್ದರೂ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ ಎಂದು ಆರೋಪಿಸುರುವ ನಾಗರಿಕರು ಅಧಿಕಾರಿಗಳ ನಿರ್ಲಕ್ಷವನ್ನು ಖಂಡಿಸಿ ಮೇ.20 ರಂದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ . 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತದ AI ಸಾಮರ್ಥ್ಯವನ್ನು ಹೈಲೈಟ್ ಮಾಡಿದ ಗೂಗಲ್ ಸಿಇಒ ಸುಂದರ್ ಪಿಚ್ಚೈ: ಯುಎಸ್- ಭಾರತ ಸಹಯೋಗದ ಪ್ರಾಜೆಕ್ಟ್ ಘೋಷಣೆ!

'ನಾನು ನೆಹರು, ರಾಜೀವ್ ವಾದಿ' ಆದ್ರೆ ರಾಹುಲ್ ವಾದಿಯಲ್ಲ- ಮಣಿಶಂಕರ್ ಅಯ್ಯರ್

T20 World Cup 2026: ಸತತ 3ನೇ ಪಂದ್ಯದಲ್ಲೂ ಡಕೌಟ್, ಕೋಚ್ ಗಂಭೀರ್ ದಾಖಲೆ ಸೇರಿ ಹಲವು ಹೀನಾಯ ದಾಖಲೆ ಬರೆದ Abhishek Sharma!

T20 ವಿಶ್ವಕಪ್ 2026: 'ಮಾಡು ಇಲ್ಲವೇ ಮಡಿ', ನಮೀಬಿಯಾ ವಿರುದ್ಧ ಪಾಕಿಸ್ತಾನಕ್ಕೆ ದಾಖಲೆಯ ಜಯ, ಸೂಪರ್ 8ಗೆ ಲಗ್ಗೆ!

ಭಾರತದ ಜೊತೆಗೆ ಮಧ್ಯಂತರ ವ್ಯಾಪಾರ ಒಪ್ಪಂದ ಬೆನ್ನಲ್ಲೇ ಅಮೆರಿಕ, ಚೀನಾ ವಿರುದ್ಧ ಮೋಹನ್ ಭಾಗವತ್ ವಾಗ್ದಾಳಿ! ಯಾಕೆ ಗೊತ್ತಾ?

SCROLL FOR NEXT