ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಮಾದಕವಸ್ತು ಮಾರಾಟ ಮೂವರ ಬಂಧನ

ಯಶವಂತಪುರದಲ್ಲಿ ಮಾದಕ ವಸ್ತು ಚರಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು 4 ಕೆ.ಜಿ. ಚರಸ್ ವಶಪಡಿಸಿಕೊಂಡಿದ್ದಾರೆ...

ಬೆಂಗಳೂರು: ಯಶವಂತಪುರದಲ್ಲಿ ಮಾದಕ ವಸ್ತು ಚರಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು 4 ಕೆ.ಜಿ. ಚರಸ್ ವಶಪಡಿಸಿಕೊಂಡಿದ್ದಾರೆ.

ಹಾಸನ ಜಿಲ್ಲೆಯ ಬೇಲೂರಿನ ರಘು (34), ದಾಸರಕೊಪ್ಪಲು ಗ್ರಾಮದ ಕಿರಣ್ (29) ಹಾಗೂ ಹಳೇ ಕೊಪ್ಪಲು ಪ್ರದೇಶದ ಹೇಮಂತ್ ಕುಮಾರ್ (34) ಬಂಧಿತರು. ಇವರಿಂದ ರು.8 ಲಕ್ಷ ಮೌಲ್ಯದ 4 ಕೆ.ಜಿ. ಚರಸ್ 3 ಮೊಬೈಲ್ ಫೋನ್ ಹಾಗೂ ರು.900 ನಗದು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹಾಗೂ ಐಟಿಬಿಟಿ ಉದ್ಯೋಗಿಗಳಿಗೆ ಚರಸ್ ಪೂರೈಸುತ್ತಿದ್ದರು. ಯಶವಂತಪುರದಲ್ಲಿರುವ ಸ್ಟಾರ್ ಲಾಡ್ಜ್ ನ ಕೊಠಡಿಯಲ್ಲಿ ಚರಸ್ ಇರಿಸಿಕೊಂಡು ಮಾರಾಟಕ್ಕೆ ಯತ್ನಿಸುತ್ತಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದರು. ಆಂಧ್ರಪ್ರದೇಶದ ವಿಶಾಖ ಪಟ್ಟಣದಲ್ಲಿ ಕೊಂಡರಾಜ ಎಂಬಾತನಿಂದ ಚರಸ್ ನಗರಕ್ಕೆ ತಂದು ಎಲ್ಲರೂ ಮಾರಾಟ ಮಾಡುತ್ತಿದ್ದೆವೆಂದು ವಿಚಾರಣೆ ವೇಳೆ ಆರೋಪಿಗಳು ಒಪ್ಪಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT