ಸುರೇಶ್ ಕುಮಾರ್ 
ಜಿಲ್ಲಾ ಸುದ್ದಿ

ಡಿಕೆ ರವಿ ಸಾವಿನಲ್ಲಿ ಸರ್ಕಾರ ಕೀಳು ತಂತ್ರ ಅನುಸರಿಸುತ್ತಿದೆ: ಸಿಎಂ ವಿರುದ್ಧ ಬಿಜೆಪಿ ಕಿಡಿ

ಐಎಎಸ್ ಅಧಿಕಾರಿ ಡಿ.ಕೆ ರವಿ ಸಾವಿನ ಪ್ರಕರಣದಲ್ಲಿ ರಾಜ್ಯ ಸಕಾರ ಡರ್ಟಿ ಟ್ರಿಕ್ಸ್ ಅನುಸರಿಸುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ ರವಿ ಸಾವಿನ ಪ್ರಕರಣದಲ್ಲಿ ರಾಜ್ಯ ಸಕಾರ ಡರ್ಟಿ ಟ್ರಿಕ್ಸ್ ಅನುಸರಿಸುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ಮಾಜಿ ಸಚಿವ ಸುರೇಶ್ ಕುಮಾರ್, ಅಪಾರ್ಟ್ ಮೆಂಟ್ ನಲ್ಲಿ   ಡಿ.ಕೆ ರವಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾದ ನಂತರ, ರವಿ ತಮ್ಮ ಬ್ಯಾಚ್ ಮೇಟ್ ಅಧಿಕಾರಿಗೆ 44 ಭಾರಿ ಕರೆ ಮಾಡಿದ್ದರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದರು. ಡಿ.ಕೆ ರವಿ ತಮ್ಮ ಬ್ಯಾಚ್ ಮೇಟ್ ಅಧಿಕಾರಿಗೆ ಕೇವಲ ಒಂದು ಭಾರಿ ಕರೆ ಮಾಡಿದ್ದರು ಎನ್ನುವ ಸತ್ಯ ಸಂಗತಿಯನ್ನ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು ಬಿಚ್ಚಿಟ್ಟಿದ್ದಾರೆ. ಸತ್ತ ವ್ಯಕ್ತಿಯ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸಿದ ಸರ್ಕಾರ ರವಿ ಸಾವಿನ ಪ್ರಕರಣದಲ್ಲಿ ಕೀಳು ರಾಜಕೀಯ ಮಾಡಿತು ಎಂದು ಕಿಡಿ ಕಾರಿದ್ರು.

 ಡಿ.ಕೆ ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ರಾಜ್ಯದ ಜನತೆ ಹಾಗೂ ರವಿ ಪೋಷಕರು ಹೋರಾಟ ನಡೆಸಿದ್ದರೂ ಕೇರ್ ಮಾಡದ ಸಿದ್ದರಾಮಯ್ಯ ಸರ್ಕಾರ ಕಾಂಗ್ರೆಸ್ ಹೈ ಕಮಾಂಡ್ ನಿಂದ ನಿರ್ದೇಶನ ಬಂದ ತಕ್ಷಣವೇ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದರ ಔಚಿತ್ಯವೇನು ಎಂದು ಸುರೇಶ್ ಕುಮಾರ್ ಪ್ರಶ್ನಿಸಿದರು. ಸತ್ತ ವ್ಯಕ್ತಿಗಳ ವ್ಯಕ್ತಿತ್ವ ಬಗ್ಗೆ ಇಲ್ಲ ಸಲ್ಲದ ಗಾಳಿ ಸುದ್ದಿ ಹಬ್ಬಿಸುವ ಬದಲು ಸರ್ಕಾರ ತನ್ನ ಕೆಲಸವನ್ನು ಸರಿಯಾಗಿ ನಿರ್ವಹಿಸುವಂತೆ ಸುರೇಶ್ ಕುಮಾರ್ ಆಗ್ರಹಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT