ಪ್ರಧಾನಮಂತ್ರಿ ನರೇಂದ್ರ ಮೋದಿ 
ಜಿಲ್ಲಾ ಸುದ್ದಿ

ಮೋದಿ ಸರ್ಕಾರದ ಸಾಧನೆ ವಿವರಿಸಲು ಕಾರ್ಯಾಗಾರ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಒಂದು ವರ್ಷದ ಸಾಧನೆ ಕುರಿತು ಮನವರಿಕೆ ಮಾಡಿಕೊಡಲು ರಾಜ್ಯ ಬಿಜೆಪಿ ಮಾಧ್ಯಮ ಘಟಕವು ಒಂದು ದಿನದ ಕಾರ್ಯಾಗಾರವನ್ನು ಶುಕ್ರವಾರ ಹಮ್ಮಿಕೊಂಡಿದೆ...

ಬೆಂಗಳೂರು: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಒಂದು ವರ್ಷದ ಸಾಧನೆ ಕುರಿತು ಮನವರಿಕೆ ಮಾಡಿಕೊಡಲು ರಾಜ್ಯ ಬಿಜೆಪಿ ಮಾಧ್ಯಮ ಘಟಕವು ಒಂದು ದಿನದ ಕಾರ್ಯಾಗಾರವನ್ನು ಶುಕ್ರವಾರ ಹಮ್ಮಿಕೊಂಡಿದೆ.

ಒಂದು ವರ್ಷದ ಸಾಧನೆಯ ಅಂಶ, ಅಂಕಿ ಸಂಖ್ಯೆಗಳನ್ನು ಪಕ್ಷದ ಜಿಲ್ಲಾ ಮಟ್ಟದ ವಕ್ತಾರರು, ಸಹ ವಕ್ತಾರರಿಗೆ ಮತ್ತು ಜಿಲ್ಲಾ ಘಟಕದ ಅಧ್ಯಕ್ಷರು, ಪ್ರಧಾನಕಾರ್ಯದರ್ಶಿಗಳಿಗೆ ನೀಡಲಾ ಗುತ್ತದೆ. ಮೊದಲ ಗೋಷ್ಠಿಯಲ್ಲಿ ಕೇಂದ್ರ ಸಚಿವ ಅನಂತ ಕುಮಾರ್ ಅವರು ಪವರ್ ಪಾಯಿಂಟ್ ಪ್ರೆಸೆಂಟೇಶನ್ ಮೂಲಕ ಮಾಹಿತಿ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಎರಡನೇ ಗೋಷ್ಠಿಯನ್ನು ಪಕ್ಷದ ರಾಷ್ಟ್ರೀಯ ವಕ್ತಾರ ಜಿವಿಎಲ್ ನರಸಿಂಹ ರಾವ್ ಮುನ್ನೆಡೆಸಲಿದ್ದು, ಸರ್ಕಾರದ ವಿರುದ್ಧ ಕೇಳಿಬಂದ ವಿವಾದಾತ್ಮಕ ಅಂಶ, ಟೀಕೆ ಬಗ್ಗೆ ಸ್ಪಷ್ಟೀಕರಣ ನೀಡುವರು. ಮೂರನೇ ಅವಧಿಯು ಪ್ರಶ್ನೋತ್ತರ ಇರಲಿದ್ದು, ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರು ಅಧ್ಯಕ್ಷತೆವಹಿಸುವರು.

ಈ ಸಂದರ್ಭದಲ್ಲಿ ರಾಜ್ಯ ವಕ್ತಾರ ಸುರೇಶ್ ಕುಮಾರ್, ಅಶ್ವತ್ಥ ನಾರಾಯಣ ಮತ್ತು ಮಾಧ್ಯಮ ಪ್ರಮುಖ ಎಸ್.ಪ್ರಕಾಶ್ ಉಪಸ್ಥಿತರಿರುವರು. ಪಕ್ಷದ ಪರವಾಗಿ ಟಿವಿ ಮಾಧ್ಯಮದಲ್ಲಿ
ಕಾಣಿಸಿಕೊಳ್ಳುವ ನಾಯಕರು, ಶಾಸಕರೂ ಸಹ ಕಾರ್ಯಾಗಾರದಲ್ಲಿ ಹಾಜರಿರುವರು. ಬಿ.ಎಸ್.ಯಡಿಯೂರಪ್ಪನವರು ಸಮಾರೋಪದಲ್ಲಿ ಪಾಲ್ಗೊಳ್ಳುವರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT