ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ವಾಟಾಳ್ ನಾಗರಾಜ್, ಸಾ.ರಾ ಗೋವಿಂದ್ ಮತ್ತು ಇನ್ನಿತರ ಕನ್ನಡ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು. 
ಜಿಲ್ಲಾ ಸುದ್ದಿ

ಅತ್ಯಾಚಾರದ ವಿರುದ್ಧ ಕಠಿಣ ಕಾಯ್ದೆ ಜಾರಿಗೆ ವಾಟಾಳ್ ಆಗ್ರಹ

ಅತ್ಯಾಚಾರದ ವಿರುದ್ಧ ಲೋಕಸಭೆಯಲ್ಲಿ ಕಠಿಣ ಕಾಯ್ದೆ ಜಾರಿಗೆ ತರಬೇಕು ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್...

ಬೆಂಗಳೂರು: ಅತ್ಯಾಚಾರದ ವಿರುದ್ಧ ಲೋಕಸಭೆಯಲ್ಲಿ ಕಠಿಣ ಕಾಯ್ದೆ ಜಾರಿಗೆ ತರಬೇಕು ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.

ಇತ್ತೀಚೆಗಷ್ಟೆ ಮುಂಬೈನ ಕೆಇಎಂ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಕರ್ನಾಟಕ ಮೂಲದ ದಾದಿ ಅರುಣಾ ಶಾನಬಾಗ್ ಗೆ ಕನ್ನಡ ಚಳುವಳಿ ವಾಟಾಳ್ ಪಕ್ಷ ಬೆಂಗಳೂರಿನಲ್ಲಿ ಶ್ರದ್ಧಾಂಜಲಿ ಸಲ್ಲಿಸಿತು. ನಂತರ ಮಾತನಾಡಿದ ವಾಟಾಳ್ ನಾಗರಾಜ್, 42 ವರ್ಷಗಳ ಕಾಲ ಕೋಮದಲ್ಲಿದ್ದ ಅರುಣಾ ಶಾನಬಾಗ್ ಸಾವು ದೇಶವೇ ತಲೆ ತಗ್ಗಿಸುವಂತಾಗಿದೆ. ಅತ್ಯಾಚಾರವನ್ನು ತಡೆಗಟ್ಟಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಲೋಕಸಭೆಯಲ್ಲಿ ಕಠಿಣ ಕಾಯ್ದೆ ಜಾರಿಗೆ ತರಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಅರುಣಾ ಶಾನಬಾಗ್ ಹೆಸರಿನಲ್ಲಿ ರಾಜ್ಯ ಸರ್ಕಾರ ರು.1 ಕೋಟಿ ರಾಷ್ಟ್ರೀಯ ಪ್ರಶಸ್ತಿಯನ್ನು ಇಡಬೇಕು. ಈ ಪ್ರಶಸ್ತಿಯನ್ನು ಅತ್ಯಾಚಾರ ವಿರುದ್ಧ ಹೋರಾಟ ಮಾಡಿದ ವೀರ ಮಹಿಳೆಯರಿಗೆ ಮೀಸಲಿಡಬೇಕು ಎಂದ ಅವರು, ಹೊನ್ನಾವರದ ಹಳದಿಪುರದಲ್ಲಿ ಇರುವ ಅವರ ಮನೆ ದೊಡ್ಡ ಸ್ಮಾರಕವಾಗಬೇಕು ಎಂದು ಹೇಳಿದ್ದಾರೆ.

ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ವಾಟಾಳ್ ನಾಗರಾಜ್, ಸಾ.ರಾ ಗೋವಿಂದ್ ಮತ್ತು ಇನ್ನಿತರ ಕನ್ನಡ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT