ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಲಾಟರಿ ಹಗರಣದಲ್ಲಿ ಪೊಲೀಸ್ ಅಧಿಕಾರಿಗಳ ಹೆಸರು: ಸಿಐಡಿ ವರದಿ

ಲಾಟರಿ ಹಗರಣದಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಮತ್ತು ಪೊಲೀಸ್ ಮಹಾನಿರ್ದೇಶಕ(ಐಜಿಪಿ) ಸೇರಿದಂತೆ ಹಲವಾರು ಹಿರಿಯ ಪೊಲೀಸ್...

ಬೆಂಗಳೂರು: ಲಾಟರಿ ಹಗರಣದಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಮತ್ತು ಪೊಲೀಸ್ ಮಹಾನಿರ್ದೇಶಕ(ಐಜಿಪಿ) ಸೇರಿದಂತೆ ಹಲವಾರು ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರು ಕೇಳಿಬಂದಿದೆ ಎಂದು ಮೂಲಗಳು ತಿಳಿಸಿವೆ.

ಶುಕ್ರವಾರ ಸಿಐಡಿ ಪೊಲೀಸರು ಲಾಟರಿ ಹಗರಣ ಪ್ರಕರಣದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ವರದಿಯಲ್ಲಿ ಎಡಿಜಿಪಿ ಮತ್ತು ಐಜಿಪಿ ಸೇರಿದಂತೆ ಹಲವಾರು ಹಿರಿಯ ಪೊಲೀಸ್ ಅಧಿಕಾರಿಗಳು ಲಾಟರಿ ಹಗರಣದ ಪ್ರಮುಖ ಆರೋಪಿ ಪಾರಿ ರಾಜನ್‌ ಜತೆ ಮೊಬೈಲ್‌ನಲ್ಲಿ ನಿರಂತರ "ಸಂಪರ್ಕ' ಹೊಂದಿದ್ದರು ಎಂದು ಹೇಳಲಾಗಿದೆ.

ರಾಜನ್‌ನ ಮೊಬೈಲ್‌ ಕರೆಗಳ ಕುರಿತು ಮಾಹಿತಿ ಸಂಗ್ರಹಿಸಿದಾಗ ಆತನೊಂದಿಗೆ ಹಿರಿಯ ಅಧಿಕಾರಿಗಳು ಹೊಂದಿದ್ದ "ಸ್ನೇಹ' ಬಯಲಾಗಿದೆ. ಅದರಲ್ಲೂ ಪ್ರಮುಖವಾಗಿ ಆತನ ಸಂಪರ್ಕದಲ್ಲಿ ಓರ್ವ ಎಡಿಜಿಪಿ, ಐಜಿಪಿ, ಎಸ್ಪಿ ಸೇರಿ ಹಿರಿಯ ಅಧಿಕಾರಿಗಳಿದ್ದರು.

ಈ ಸಂಬಂಧ ಪ್ರತಿಕ್ರಯಿಸಿರುವ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರು, ಸಿಐಡಿ ಪೊಲೀಸರಿಂದ ವರದಿಯನ್ನು ಸ್ವೀಕರಿಸಲಾಗಿದ್ದು, ಪೂರ್ಣ ಮಾಹಿತಿ ಪಡೆದುಕೊಳ್ಳುವವರೆಗೆ ಯಾವುದೇ ಅಧಿಕಾರಿಗಳ ಹೆಸರನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ. ಈ ಪ್ರಕರಣದಲ್ಲಿ ಉನ್ನತ ಮಟ್ಟದ ಅಧಿಕಾರಿಗಳು ಶಾಮೀಲಾಗಿರುವ ಹಿನ್ನಲೆಯಲ್ಲಿ, ಕೂಲಂಕುಶವಾಗಿ ಪರಿಶೀಲನೆ ನಡೆಸಿ, ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ವರದಿಯ ಪ್ರಕಾರ ಸುಮಾರು 25 ಪೊಲೀಸರ ಹೆಸರು ಈ ಹಗರಣದಲ್ಲಿ ಕೇಳಿಬಂದಿದೆ. ರಾಜ್ಯಾದ್ಯಂತ ಇಬ್ಬರು ಎಡಿಜಿಪಿ, 3 ಐಜಿಪಿ, ನಿವೃತ್ತ ಡಿಜಿಪಿ, ಎಸ್ಪಿ ಮತ್ತು ಡಿವೈಎಸ್ ಪಿ ಭಾಗಿಯಾಗಿದ್ದಾರೆ. ಈಗಾಗಲೇ ಈ ಆರೋಪದ ಮೇಲೆ ಎಸ್ಪಿ ಧರಣೇಶ್‌ ಅಮಾನತುಗೊಂಡಿದ್ದಾರೆ.

ಈ ಸಂಬಂಧ ಮಾತನಾಡಿರುವ ಎಡಿಜಿಪಿ ಅಲೋಕ್ ಕುಮಾರ್ ಅವರು, ನಾನು ಈ ಹಗರಣದಲ್ಲಿ ಭಾಗಿಯಾಗಿದ್ದೇನೆಂದು ಗಾಳಿಮಾತು ಹಬ್ಬುತ್ತಿದೆ. ರಾಜನ್ ಅವರು ನನಗೆ ಹಿತೈಷಿಯಾಗಿದ್ದರು. ಕಳೆದ ಕೆಲವು ವರ್ಷಗಳ ಹಿಂದೆಯಷ್ಟೇ ಇಬ್ಬರು ಸಂಪರ್ಕದಲ್ಲಿದ್ದೇವೆ. ಆದರೆ, ಅವರು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದಿರಲಿಲ್ಲ. ಯಾವುದೇ ತನಿಖೆ ಎದುರಿಸಲು ನಾನು ಸಿದ್ಧನಿದ್ದೇನೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT