ಕರ್ನಾಟಕ ವೃತ್ತಿ ನಿರತ ಪತ್ರಕರ್ತರ ಸಂಘ ಎನ್‍ಜಿಒ ಸಭಾಂಗಣದಲ್ಲಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ದೊರೆಸ್ವಾಮಿ ಮತ್ತಿತರರು. 
ಜಿಲ್ಲಾ ಸುದ್ದಿ

ಗಣಿ ಅಕ್ರಮ ವರದಿ ಮರು ಪರಿಶೀಲಿಸುತ್ತಾರಂತೆ!

ರಾಜ್ಯದಲ್ಲಿ ನಡೆದಿರುವ ಕೋಟ್ಯಾಂತರ ರುಪಾಯಿ ಗಣಿ ಹಗರಣದ ಬಗ್ಗೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸಮಗ್ರ ವರದಿ ನೀಡಿದರೆ ಅದನ್ನು...

ಬೆಂಗಳೂರು: `ರಾಜ್ಯದಲ್ಲಿ ನಡೆದಿರುವ ಕೋಟ್ಯಾಂತರ ರುಪಾಯಿ ಗಣಿ ಹಗರಣದ ಬಗ್ಗೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸಮಗ್ರ ವರದಿ ನೀಡಿದರೆ ಅದನ್ನು ಪೊಲೀಸ್ ಅಧಿಕಾರಿಯಿಂದ ಮರು ಪರಿಶೀಲಿಸುತ್ತಾರಂತೆ... ಎಂತಾ ಗೌರವ ಇದು...' ಹೀಗೆಂದು ಭಾವುಕರಾಗಿ ಹೇಳಿದ್ದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ.

ಕರ್ನಾಟಕ ವೃತ್ತಿ ನಿರತ ಪತ್ರಕರ್ತರ ಸಂಘ ಎನ್‍ಜಿಒ ಸಭಾಂಗಣದಲ್ಲಿ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ಮೂವರು ಮುಖ್ಯಮಂತ್ರಿಗಳು, 9 ಮಂತ್ರಿಗಳು, ನೂರಾರು ಅಧಿಕಾರಿಗಳು, ಗಣಿ ಕಂಪನಿಗಳ ಕುರಿತ ಈ ವರದಿಯಲ್ಲಿ ಮಾಹಿತಿ ಇದೆ. ನಾಲ್ಕು ಲಕ್ಷ ಬ್ಯಾಂಕ್ ಖಾತೆ ಪರಿಶೀಲಿಸಿ ವರದಿ ನೀಡಿದ್ದೇವೆ.

ಈಗ ಅದನ್ನು ಮರು ಮಾಡುತ್ತಾರಂತೆ ಎಂದು ಬೇಸರಿಸಿದರು. ಇದನ್ನು ಬದಲಿಸಲು ವಿಧೇಯಕ ತರಲು ಹೊರಟಿದ್ದಾರೆ. ಕೇವಲ ಭ್ರಷ್ಚಚಾರ ನಿಗ್ರಹಿಸುವ ಗುರಿಯೊಂದಿಗೆ ಸಾರ್ವಜನಿಕರಿಗೆ ಸ್ಪಂದಿಸದ ರೀತಿಯಲ್ಲಿನ ವ್ಯವಸ್ಥೆ ತಂದು 9 ಮಂದಿ ಲೋಕಾಯುಕ್ತರನ್ನು ನೇಮಿಸುತ್ತಾರಂತೆ.
ಇರುವ ವ್ಯವಸ್ಥೆಯನ್ನು ಚೆನ್ನಾಗಿ ಮಾಡಿದರೆ ಅನುಕೂಲ.

ಲೋಕಾಯುಕ್ತದಲ್ಲಿದ್ದಾಗ ಸರ್ಕಾರಿ ವ್ಯವಸ್ಥೆಯಲ್ಲಿ ನಾನು ಕಂಡ ಅನ್ಯಾಯ, ಭ್ರಷ್ಟಾಚಾರ ಇನ್ಯಾರೂ ಕಂಡಿರಲಿಕ್ಕೆ ಸಾಧ್ಯವಿಲ್ಲ. ಐದು ವರ್ಷದಲ್ಲಿ 20,300 ದೂರುಗಳು ಬಂದಿದ್ದವು. 600ಕ್ಕೂ ಹೆಚ್ಚು ಭ್ರಷ್ಟಾಚಾರ ಪ್ರಕರಣಗಳು ಬಂದವು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

kerala: ಸ್ಕೂಟರ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿ: 4 ಮಂದಿಗೆ ಗಂಭೀರ ಗಾಯ, Video

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ; ಕಾರಣ ನಿಗೂಢ!

ನಿಂಬೆಹಣ್ಣು ಕತ್ತರಿಸಿ, ಮಳೆ ನಿಲ್ಲಿಸಿದೆ: ವಿವಾದವನ್ನು ಮೈ ಮೇಲೆ ಎಳೆದುಕೊಂಡ ಬಿಜೆಪಿ ಸಂಸದ! ಕಾಂಗ್ರೆಸ್, ನೆಟ್ಟಿಗರ ಲೇವಡಿ