ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಮಂಗಮ್ಮನಪಾಳ್ಯದಲ್ಲಿ ತಾಯಿ-ಮಗನ ಕೊಲೆ ಪ್ರಕರಣ: 10 ಮಂದಿ ಬಂಧನ

ಮಂಗಮ್ಮನಪಾಳ್ಯದಲ್ಲಿ ಮನೆಗೆ ನುಗ್ಗಿ ತಾಯಿ-ಮಗನನ್ನು ಭೀಕರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿವಾಳ ಪೊಲೀಸರು ಗುರುವಾರ 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ...

ಬೆಂಗಳೂರು: ಮಂಗಮ್ಮನಪಾಳ್ಯದಲ್ಲಿ ಮನೆಗೆ ನುಗ್ಗಿ ತಾಯಿ-ಮಗನನ್ನು ಭೀಕರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿವಾಳ ಪೊಲೀಸರು ಗುರುವಾರ 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಮಂಗಮ್ಮನಪಾಳ್ಯದ ಮದೀನಾ ನಗರದ ಮೆಕ್ಕಾಂ ಮಸೀದಿ ಬಳಿ ವಾಸಿವಿದ್ದ ಅಸ್ಮಾತಾಜ್ ಅವರ ಪತಿ ಮಹಮ್ಮದ್ ಇರ್ಫಾನ್ ಎಂಬುವವರು ಜನವರಿ 15 ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಅಸ್ಮಾತಾಜ್ ಳಿಗೆ ಇಬ್ಬರು ಮಕ್ಕಳಿದ್ದು, ಗಂಡ ನಡೆಸುತ್ತಿದ್ದ ಗುಜರಿ ಅಂಗಡಿಯ ವ್ಯವಹಾರವನ್ನು ಅಸ್ಮಾತಾಜ್ ಮುಂದವರೆಸಿದ್ದರು. ಅಂಗಡಿಯ ಕೆಲಸಕ್ಕಾಗಿ ಅಸ್ಮಾತಾಜ್ ಅವರು 9 ಮಂದಿಯನ್ನು ಇಟ್ಟುಕೊಂಡಿದ್ದರು. ಆದರೆ 9 ಮಂದಿಯೂ ಸರಿಯಾಗಿ ಕೆಲಸ ಮಾಡದಿರುವ ಕಾರಣ ಕೆಲಸದಿಂದ ತೆಗೆದುಹಾಕಿದ್ದರು. ಹೀಗಾಗಿ ಅಸ್ಮಾತಾಜ್ ಅವರ ಮೇಲೆ ಈ 9 ಮಂದಿಯೂ ದ್ವೇಷ ಕಟ್ಟಿಕೊಂಡಿದ್ದರು. ನಂತರ ಹಲವು ಬಾರಿ ಅಸ್ಮಾತಾಜ್ ಳನ್ನು ಕೊಲೆ ಮಾಡಲು ಪ್ರಯತ್ನಿಸಿದರಾದರೂ ವಿಫಲರಾಗಿದ್ದರು ಎನ್ನಲಾಗಿದೆ.

ಆಸ್ತಿ ವಿಚಾರದಲ್ಲಿ ಅಸ್ಮಾತಾಜ್ ಳ ಜೊತೆ ಭಾವ ಮಹಮ್ಮದ್ ಇಷಾನುಲ್ಲಾ ಸಹ ದ್ವೇಷ ಇಟ್ಟುಕೊಂಡಿದ್ದನು. ಇದನ್ನೇ ಅಸ್ತ್ರವಾಗಿ ಬಳಸಿಕೊಂಡ 9 ಮಂದಿ ಆರೋಪಿಗಳು ಮಹಮ್ಮದ್ ಇಷಾನುಲ್ಲಾ ಸಹಾಯ ಪಡೆದು ಕೊಲೆ ಮಾಡಲು ಯೋಜನೆ ರೂಪಿಸಿದ್ದರು ಎಂದು ತಿಳಿದುಬಂದಿದೆ.

ಇದರಂತೆ ಮೇ.25 ರಂದು ಅಸ್ಮಾತಾಜ್ ಳ ಮಗಳು ಕಾಲೇಜಿಗೆ ಹೋಗಿದ್ದಾಗ ಮನೆಯಲ್ಲಿ ಯಾರು ಇಲ್ಲ ಎಂದು ಭಾವಿಸಿದ ಆರೋಪಿಗಳು, ಅಸ್ಮಾತಾಜ್ ಹಾಗೂ ಆಕೆ ಮಗ ರುಮಾನುಲ್ಲಾರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿ ನಂತರ ಪರಾರಿಯಾಗಿದ್ದರು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಮಡಿವಾಳ ಪೊಲೀಸರು ತನಿಖೆಗೆ ತಂಡವೊಂದನ್ನು ರೂಪಿಸಿ ಕಾರ್ಯಾಚರಣೆಗಿಳಿದಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ. ತನಿಖೆ ವೇಳೆ ಆರೋಪಿಗಳು ಅಸ್ಮಾತಾಜ್ ಮೇಲಿದ್ದ ದ್ವೇಷದಿಂದಾಗಿ ಹತ್ಯೆ ಮಾಡಿರುವುದಾಗಿ ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

SCROLL FOR NEXT