ಪತ್ರಿಕಾಗೋಷ್ಟಿ ನಡೆಸಿದ ಟಿಜೆ ಅಬ್ರಾಹಂ ಮತ್ತಿತರರು 
ಜಿಲ್ಲಾ ಸುದ್ದಿ

ಬರ್ನಾಡ್ ಮೋರಸ್ ರನ್ನು ಕರವೇ ಅಧ್ಯಕ್ಷ ನಾರಾಯಣಗೌಡ ಕ್ಷಮೆಯಾಚಿಸಬೇಕು: ಅಬ್ರಹಾಂ

ಆರ್ಚ್ ಬಿಷಪ್ ಡಾ.ಬರ್ನಾಡ್ ಮೋರಸ್ ಅವರನ್ನು ಏಕವಚನದಲ್ಲಿ ಸಂಭೋಧಿಸಿದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡರು...

ಬೆಂಗಳೂರು: ಆರ್ಚ್ ಬಿಷಪ್ ಡಾ.ಬರ್ನಾಡ್ ಮೋರಸ್ ಅವರನ್ನು ಏಕವಚನದಲ್ಲಿ ಸಂಭೋಧಿಸಿದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡರು ಕೂಡಲೇ ಬರ್ನಾಡ್ ಅವರಲ್ಲಿ ಕ್ಷಮೆಯಾಚಿಸಬೇಕು ಎಂದು ಇಂಡಿಯನ್ ಕ್ರಿಶ್ಚಿಯನ್ ಯುನೈಟೆಡ್ ಫೋರಂ ನ ಅಧ್ಯಕ್ಷ ಅಬ್ರಹಾಂ ಟಿ.ಜೆ ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾರಾಯಣ ಗೌಡರು ಕರ್ನಾಟಕ ಕನ್ನಡ ಧರ್ಮಗುರುಗಳ ಬಳಗವು ನಡೆಸಿದ ಚಿಂತನಾ ಸಭೆಯಲ್ಲಿ ಬರ್ನಾಡ್ ಮೋರಸ್ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದಾರೆ. ಕನ್ನಡದ ನೆಲಕ್ಕೆ ಬರ್ನಾಡ್ ಮೋರಸ್ ದ್ರೋಹ ಬಗೆಯುತ್ತಿದ್ದು, ಅವರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ನಾರಾಯಣ ಗೌಡರು ಹೇಳಿದ್ದಾರೆ.

ಈ ರೀತಿ ಏಕವಚನದಲ್ಲಿ ಮಾತನಾಡುವ ನಾರಾಯಣಗೌಡ ಕೆಳಮಟ್ಟದ ಶೈಲಿ ಹೊಂದಿದ್ದಾರೆ. ಇಂತಹವರು ನಮ್ಮ ಧರ್ಮಗುರುಗಳ ಬಗ್ಗೆ ಏಕವಚನದಲ್ಲಿ ಮಾತಾಡಿರುವುದು ಸರಿಯಲ್ಲ. ಕೂಡಲೇ ಅವರು ಸಾರ್ವಜನಿಕವಾಗಿ ಬರ್ನಾಡ್ ಮೋರಸ್ ಅವರನ್ನು ಕ್ಷಮೆಯಾಚಿಸಬೇಕು. ಇಲ್ಲವಾದರೇ, ಅವರ ವಿರುದ್ಧ ನಾವು ಹೋರಾಟ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಸುತ್ತೋಲೆ ಬಗ್ಗೆ ಪುಂಡಲೀಕ ಟೀಕೆ ಸರಿಯಲ್ಲ ಬರ್ನಾಡ್ ಮೋರಸ್ ಹೊರಡಿಸಿರುವ ಸುತ್ತೋಲೆ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ಟೀಕಿಸಿರುವುದು ಸರಿಯಲ್ಲ. ಸುತ್ತೋಲೆಯಲ್ಲಿ ಏನಿದೆ ಎಂಬುದನ್ನು ತಿಳಿಯದೇ, ಸುತ್ತೋಲೆ ಬಗ್ಗೆ ಟೀಕಿಸಿದ್ದಾರೆ. ನಾರಾಯಣ ಗೌಡರು ಬರೆದುಕೊಟ್ಟಂತೆ ಪುಂಡಲೀಕ ಹಾಲಂಬಿ ಹೇಳಿಕೆ ನೀಡಿದ್ದಾರೆ. ಹಾಲಂಬಿ ಅವರ ಈ ನಡೆ ಸರಿಯಲ್ಲ. ಬರ್ನಾಡ್ ಮೋರಸ್ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕು ಹಾಲಂಬಿ ಅವರಿಗೆ ಇಲ್ಲ ಎಂದು ಅಬ್ರಹಾಂ ಟಿ.ಜೆ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!