ಬಿಬಿಎಂಪಿ ಪ್ರಧಾನ ಕಚೇರಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಬಿಬಿಎಂಪಿ: ಮಥಾಯ್ ವಿರುದ್ಧ ದೂರು

ಬಿಬಿಎಂಪಿ ಜಾಹೀರಾತು ವಿಭಾಗದ ಸಹಾಯಕ ಆಯುಕ್ತ ಕೆ.ಮಥಾಯ್ ವಿರುದ್ಧ ಪೂರ್ವ ವಿಭಾಗದ ಕಂದಾಯಾಧಿಕಾರಿಗಳು, ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಸಂಘಕ್ಕೆ ದೂರು ಸಲ್ಲಿಸಿದ್ದಾರೆ....

ಬೆಂಗಳೂರು: ಬಿಬಿಎಂಪಿ ಜಾಹೀರಾತು ವಿಭಾಗದ ಸಹಾಯಕ ಆಯುಕ್ತ ಕೆ.ಮಥಾಯ್ ವಿರುದ್ಧ ಪೂರ್ವ ವಿಭಾಗದ ಕಂದಾಯಾಧಿಕಾರಿಗಳು, ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಸಂಘಕ್ಕೆ ದೂರು  ಸಲ್ಲಿಸಿದ್ದಾರೆ.

ಶಾಂತಲಾನಗರ ವಾರ್ಡ್ ನಲ್ಲಿ ಜಾಹೀರಾತು ಫಲಕಗಳಿಂದ ರು.4 ಕೋಟಿ ತೆರಿಗೆ ವಸೂಲಿ ಮಾಡುವ ವಿಶೇಷ ಕಾರ್ಯಾಚರಣೆಯನ್ನು ಕೆ.ಮಥಾಯ್ ಆರಂಭಿಸಿದ್ದರು. ಇದಕ್ಕಾಗಿ ಪೂರ್ವ  ವಲಯದ ಕಂದಾಯಾಧಿಕಾರಿಗಳಾದ ಜಿ.ವಿ.ನಾಗರಾಜು, ಎಸ್.ನರಸಿಂಹಮೂರ್ತಿ, ಎನ್.ನರಸಿಂಹ ಅವರಿಗೆ ತೆರಿಗೆ ವಸೂಲಿ ಮಾಡಲು ಸೂಚಿಸಲಾಗಿತ್ತು. ಆದರೆ, ಅಧಿಕಾರಿ ಮಥಾಯ್ ಅವರು  ಅಸಭ್ಯವಾಗಿ ಮಾತನಾಡುತ್ತಿದ್ದು, ನಮ್ಮನ್ನು ಬೇರೆ ವಿಭಾಗಕ್ಕೆ ವರ್ಗಾವಣೆ ಮಾಡಬೇಕು ಎಂದು ಮೂವರು ಕಂದಾಯಾಧಿಕಾರಿಗಳು ದೂರು ನೀಡಿದ್ದಾರೆ.

ನಿಂದನೆ, ಬೆದರಿಕೆ ಆರೋಪ
ವಿಶೇಷ ಕಾರ್ಯಾಚರಣೆಯಲ್ಲಿ ಸಿಬ್ಬಂದಿ ಕೊರತೆ ಉಂಟಾಗಿದ್ದರಿಂದ ಸಹಾಯಕ ಆಯುಕ್ತರ ಕಚೇರಿಗೆ ಹೋಗಿ ಹೆಚ್ಚಿನ ಸಿಬ್ಬಂದಿ ನೇಮಿಸುವಂತೆ ಮನವಿ ಮಾಡಲಾಗಿತ್ತು. ಆದರೆ, ಅವಾಚ್ಯ  ಶಬ್ದಗಳಿಂದ ನಿಂದಿಸಿದ ಸಾಹಾಯಕ ಆಯುಕ್ತರು, ಕಚೇರಿಯಿಂದ ಹೊರ ಹೋಗುವಂತೆ ಹೇಳಿದ್ದರು. ನಂತರ ನಿಗದಿತ ಅವಧಿಯಲ್ಲಿ ತೆರಿಗೆ ವಸೂಲಿ ಮಾಡದಿದ್ದರೆ ಬಿಎಂಟಿಎಫ್ ನಲ್ಲಿ ಪ್ರಕರಣ  ದಾಖಲಿಸಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ.

ಬಿಬಿಎಂಪಿಯಲ್ಲಿ ಸುಮಾರು 20 ವರ್ಷಗಳಿಂದ ಕೆಲಸ ಮಾಡುತ್ತಿದ್ದು, ಅಧಿಕಾರಿ ಮಥಾಯ್ ಅಸಭ್ಯವಾಗಿ ಮಾತನಾಡುತ್ತಿರುವುದರಿಂದ ಜಾಹೀರಾತು ವಿಭಾಗದಲ್ಲಿ ಕೆಲಸ ಮಾಡಲು ಕಷ್ಟವಾಗಿದೆ.  ಹೀಗಾಗಿ ಬೇರೆ ಕಚೇರಿಗೆ ವರ್ಗಾಯಿಸಬೇಕು ಹಾಗೂ ಸಹಾಯಕ ಆಯುಕ್ತ ಮಥಾಯ್ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಕೋರಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT