ಟಿಪ್ಪರ್ ಲಾರಿಗಳು (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಕದ್ದ ಟಿಪ್ಪರ್ ಮಾರುತ್ತಿದ್ದ ಆರು ಆರೋಪಿಗಳು ತ.ನಾಡಲ್ಲಿ ಸೆರೆ

ಕಳ್ಳತನ ಮಾಡಿದ ಟಿಪ್ಪರ್ ಲಾರಿಗಳಿಗೆ ಸಾರಿಗೆ ಅಧಿಕಾರಿಗಳ ನೆರವಿನೊಂದಿಗೆ ನಕಲಿ ದಾಖಲೆ ಸೃಷ್ಟಿಸಿ ನಗರದಲ್ಲಿ ಮಾರಾಟಕ್ಕೆ ಯತ್ನಿಸುತ್ತಿದ್ದ ಅಂತಾ-ರಾಜ್ಯ ಕಳ್ಳರ ತಂಡದ 6 ಮಂದಿಯನ್ನು ತಮಿಳುನಾಡಿನ ಸೇಲಂನಲ್ಲಿ..

ಬೆಂಗಳೂರು: ಕಳ್ಳತನ ಮಾಡಿದ ಟಿಪ್ಪರ್ ಲಾರಿಗಳಿಗೆ ಸಾರಿಗೆ ಅಧಿಕಾರಿಗಳ ನೆರವಿನೊಂದಿಗೆ ನಕಲಿ ದಾಖಲೆ ಸೃಷ್ಟಿಸಿ ನಗರದಲ್ಲಿ ಮಾರಾಟಕ್ಕೆ ಯತ್ನಿಸುತ್ತಿದ್ದ ಅಂತಾ-ರಾಜ್ಯ ಕಳ್ಳರ ತಂಡದ 6  ಮಂದಿಯನ್ನು ತಮಿಳುನಾಡಿನ ಸೇಲಂನಲ್ಲಿ ಬಂಧಿಸಿರುವ ಬಸವನಗುಡಿ ಪೊಲೀಸರು ಒಂದೂವರೆ ಕೋಟಿ ಮೌಲ್ಯದ ಐದು ಟಿಪ್ಪರ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ತಮಿಳುನಾಡು ಮೂಲದ ರಾಜ ಅಲಿಯಾಸ್ ಪಳನಿ, ಬಾಲಕೃಷ್ಣ, ಪೂವರಗನ್, ರಾಜಾ, ಜಯಕುಮಾರ್ ಹಾಗೂ ಧನಪಾಲ್ ಬಂಧಿತರು. ಹೆದ್ದಾರಿಗಳಲ್ಲಿ, ನಿರ್ಮಾಣ ಹಂತದ ಕಟ್ಟಡಗಳ ಬಳಿ,  ಮನೆ ಮುಂದೆ ನಿಲ್ಲಿಸಿರುವ ಐದು ಟಿಪ್ಪರ್‍ಗಳನ್ನು ಆರೋಪಿಗಳು ಕಳವು ಮಾಡಿದ್ದರು. ಬಳಿಕ ತಮಿಳುನಾಡು ಸಾರಿಗೆ ಇಲಾಖೆ ಅಧಿಕಾರಿಗಳ ನೆರವಿನೊಂದಿಗೆ ಕದ್ದ ವಾಹನಗಳನ್ನು ಮರು ನೋಂದಣಿ  ಮಾಡಿಸಿಕೊಂಡಿದ್ದರು. ಅದಕ್ಕಾಗಿ ಅಲ್ಲಿನ ಸಾರಿಗೆ ಅಧಿಕಾರಿಗಳಿಗೆ ಪ್ರತಿ ವಾಹನ ಮರು ನೋಂದಣಿಗೆ ರು.40 ಸಾವಿರ ಹಣ ನೀಡುತ್ತಿದ್ದರು ಎಂದು ಅಧಿಕಾರಿ ಹೇಳಿದರು.

ಕೆಲ ವ್ಯಕ್ತಿಗಳು ಟಿಪ್ಪರ್‍ಗಳನ್ನು ಅನುಮಾನಾಸ್ಪದವಾಗಿ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಮಾಹಿತಿ ಬಂದಿತ್ತು. ಈ ಹಿನ್ನೆಲೆಯಲ್ಲಿ ತಂಡವೊಂದನ್ನು ತಮಿಳುನಾಡಿಗೆ ಕಳುಹಿಸಿ  ಆರೋಪಿಗಳನ್ನು ಬಂಧಿಸಿ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ವಾಹನಗಳನ್ನು ಎಲ್ಲಿ ಕಳ್ಳತನ ಮಾಡಲಾಗಿದೆ ಹಾಗೂ ಅದರ ಮಾಲೀಕರು ಯಾರು ಎನ್ನುವ ಬಗ್ಗೆ ಪರಿಶೀಲನೆ ನಡೆದಿದೆ  ಎಂದು ಅಧಿಕಾರಿ ಹೇಳಿದರು.

ದೊಡ್ಡ ಅಧಿಕಾರಿಗಳ ಕೈವಾಡ: ಆರೋಪಿಗಳು ತಮಿಳುನಾಡು ಸಾರಿಗೆ ಇಲಾಖೆಯ ದೊಡ್ಡಮಟ್ಟದ ಅಧಿಕಾರಿಗಳೊಂದಿಗೆ ಸಂಪರ್ಕ ಹೊಂದಿರುವ ಸಾಧ್ಯತೆ ಇದೆ. ಕಳವು ಮಾಡಿದ್ದ ವಾಹನಗಳಿಗೆ  ನಕಲಿ ದಾಖಲೆಗಳನ್ನು ಬೇರೆ ಬೇರೆ ವ್ಯಕ್ತಿಗಳ ಹೆಸರಿನಲ್ಲಿ ಸೃಷ್ಟಿಸಿ ನೋಂದಣಿ ಮಾಡಲು ನೆರವಾಗುತ್ತಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ  ಅಧಿಕಾರಿಗಳನ್ನು ಸಂಪರ್ಕಿಸಿ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡುವಂತೆ ಕೋರಲಾಗಿದೆ. ಅಲ್ಲದೇ, ಪ್ರಕರಣದಲ್ಲಿ ಭಾಗಿಯಾಗಿರುವ ಸಾರಿಗೆ ಇಲಾಖೆ ಅಧಿಕಾರಿಗಳ ಪತ್ತೆ ಕಾರ್ಯ ನಡೆದಿದೆ.

ಅವರು ಪತ್ತೆಯಾದರೆ, ಈ ರೀತಿ ಎಷ್ಟು ವಾಹನಗಳನ್ನು ಅಕ್ರಮವಾಗಿ ನೋಂದಣಿ ಮಾಡಿಸಿಕೊಟ್ಟಿದ್ದಾರೆನ್ನುವುದು ಬಹಿರಂಗವಾಗಲಿದೆ ಎಂದು ಅಧಿಕಾರಿ ಹೇಳಿದರು. ಆರೋಪಿಗಳು  ವೃತ್ತಿಪರರಾಗಿದ್ದು ಬೇರೆ ಬೇರೆ ರಾಜ್ಯಗಳಲ್ಲಿ ಇವರ ವಿರುದ್ಧ ಕೇಸ್‍ಗಳು ದಾಖಲಾಗಿವೆ. ಇವರು ಬೆಂಗಳೂರಿನಲ್ಲೂ ಯಾವುದಾದರೂ ವಾಹನ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದಾರಾ ಎನ್ನುವ  ಬಗ್ಗೆ ಪರಿಶೀಲನೆ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT