ಜಿಲ್ಲಾ ಸುದ್ದಿ

ಅಕ್ರಮ ವಾಣಿಜ್ಯ ಕಟ್ಟಡ: ಕ್ರಮಕ್ಕೆ ಹೈ ಸೂಚನೆ

Srinivasamurthy VN

ಬೆಂಗಳೂರು: ಜನವಸತಿ ಪ್ರದೇಶದ ಕಟ್ಟಡಗಳನ್ನು ಕಾನೂನುಬಾಹಿರವಾಗಿ ವಾಣಿಜ್ಯ ಉದ್ದೇಶಗಳಿಗೆ ಬಳಸುವ ಮೂಲಕ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ಸಂಬಂಧ ಸ್ಥಳ ಪರಿಶೀಲಿಸಿ ಅಕ್ರಮವಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ.

ಈ ಸಂಬಂಧ ರಾಜಮಹಲ್ ವಿಲಾಸ್ ನಿವಾಸಿಗಳ ಕಲ್ಯಾಣ ಸಂಸ್ಥೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾ. ಎಸ್.ಕೆ.ಮುಖರ್ಜಿ ಮತ್ತು ನ್ಯಾ.ಬಿ.ವಿ.ನಾಗರತ್ನ ಅವರಿದ್ದ ನ್ಯಾಯಪೀಠ, ಬಿಬಿಎಂಪಿ ಮತ್ತು ಬಿಡಿಎಗೆ ಸೂಚನೆ ನೀಡಿದೆ. ಜನವಸತಿ ಪ್ರದೇಶದಲ್ಲಿ ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡಬೇಕಾದಲ್ಲಿ ನಗರ ಯೋಜನೆ ಕಾಯಿದೆ ಸೆಕ್ಷನ್ 14ರ ಪ್ರಕಾರ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅನುಮತಿ ಪಡೆಯಬೇಕು ಎಂದು ನಿಯಮವಿದೆ.

ಆದರೆ, ಸದಾಶಿವನಗರದ ಆರ್‍ಎಂವಿ ಬಡಾವಣೆಯಲ್ಲಿ ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಜನ ವಸತಿ ಪ್ರದೇಶಗಳಲ್ಲಿ ಶಾಲೆಗಳನ್ನು ನಡೆಸುತ್ತಿದ್ದು, ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿ ರಾಜಮಹಲ್ ವಿಲಾಸ್ ನಿವಾಸಿಗಳ ಕಲ್ಯಾಣ ಸಂಸ್ಥೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು

SCROLL FOR NEXT