ಜಿಲ್ಲಾ ಸುದ್ದಿ

ಅಸಹಿಷ್ಣುತೆ ಪ್ರತಿಭಟನಾಕಾರರ ವಿರುದ್ಧ ನ.7 ರಂದು ಕ್ರಿಯೇಟಿವ್ ಇಂಡಿಯಾದಿಂದ ಕಾಲ್ನಡಿಗೆ ಜಾಥ

ಭಾರತದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿದೆ ಎಂದು ಆರೋಪಿಸಿ ಪ್ರಶಸ್ತಿ ವಾಪಸ್ ನೀಡುತ್ತಿರುವವರ ವಿರುದ್ಧ ಕ್ರಿಯೇಟೀವ್ ಇಂಡಿಯಾ ಸಂಘಟನೆ ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿದೆ.

ಬೆಂಗಳೂರು: ಭಾರತದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿದೆ ಎಂದು ಆರೋಪಿಸಿ ಪ್ರಶಸ್ತಿ ವಾಪಸ್ ನೀಡುತ್ತಿರುವವರ ವಿರುದ್ಧ ಕ್ರಿಯೇಟೀವ್ ಇಂಡಿಯಾ ಸಂಘಟನೆ ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿದೆ.
ನವೆಂಬರ್ 7 ರಂದು ಬೆಳಿಗ್ಗೆ 11 ಕ್ಕೆ ಫ್ರೀಡಂ ಪಾರ್ಕ್ ನಿಂದ ಪ್ರಾರಂಭವಾಗಲಿರುವ ಕಾಲ್ನಡಿಗೆ ಜಾಥ, ರಾಜಭವನದವರೆಗೆ ನಡೆಯಲಿದೆ. ನಂತರ ಪ್ರಶಸ್ತಿ ಹಿಂತಿರುಗಿಸುವಿಕೆ ಹಾಗೂ ಅಸಹಿಷ್ಣುತೆ ಇದೆ ಎಂದು ಆರೋಪಿಸುತ್ತಿರುವವರ ವಿರುದ್ಧ ರಾಜ್ಯಪಾಲರಿಗೆ ಮನವಿಪತ್ರ ಸಲ್ಲಿಸಲಾಗುತ್ತದೆ.
ಪ್ರಶಸ್ತಿ ಹಿಂತಿರುಗಿಸುವುದು ಹಾಗೂ ಅಸಹಿಷ್ಣುತೆ ಇದೆ ಎಂದು ಆರೋಪಿಸುತ್ತಿರುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆಯನ್ನು ಕುಗ್ಗಿಸಲು ಸಂಚು ರೂಪಿಸಲಾಗಿದೆ ಎಂದು ಕಾಲ್ನಡಿಗೆ ಜಾಥದಲ್ಲಿ ಪಾಲ್ಗೊಳ್ಳಲಿರುವ ಸದಸ್ಯರು ಆರೋಪಿಸಿದ್ದಾರೆ.
ಕಾಲ್ನಡಿಗೆ ಜಾಥದಲ್ಲಿ ಶತವಾಧಾನಿ ಗಣೇಶ್, ಡಾ.ಚಿದಾನಂದ ಮೂರ್ತಿ,ಸುಮತೀಂದ್ರ ನಾಡಿಗ,ಚಿತ್ರ ನಟರಾದ ಅವಿನಾಶ್,ಜಗ್ಗೇಶ್,ತಾರಾ,ಮಾಳವಿಕ,ಜೈ ಜಗದೀಶ್ ಸೇರಿದಂತೆ ವಿವಿಧ ರಂಗದ ಕಲಾವಿದರು, ಬರಹಗಾರರು,ಸಮಾಜ ಸೇವಕರು ಭಾಗವಹಿಸಲಿದ್ದಾರೆ.
ಇದೆ ಮಾದರಿಯಲ್ಲಿ ಬಾಲಿವುಡ್ ನ ಹಿರಿಯ ನಟ ಅನುಪಮ್ ಖೇರ್ ಸಹ ದೆಹಲಿಯಲ್ಲಿ ನ.7 ರಂದು ಇಂಡಿಯಾ ಇಸ್ ಟಾಲರೆಂಟ್ ಅಡಿ ಬರಹದಲ್ಲಿ ಅಸಹಿಷ್ಣುತೆ ಪ್ರತಿಭಟನಾಕಾರರ ವಿರುದ್ಧ  ಮಾರ್ಚ್ ಫಾರ್ ಇಂಡಿಯಾ ಪ್ರತಿಭಟನೆ ಮೆರವಣಿಗೆ ನಡೆಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ