ಜಿಲ್ಲಾ ಸುದ್ದಿ

ಅಸಹಿಷ್ಣುತೆ ಪ್ರತಿಭಟನಾಕಾರರ ವಿರುದ್ಧ ನ.7 ರಂದು ಕ್ರಿಯೇಟಿವ್ ಇಂಡಿಯಾದಿಂದ ಕಾಲ್ನಡಿಗೆ ಜಾಥ

ಭಾರತದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿದೆ ಎಂದು ಆರೋಪಿಸಿ ಪ್ರಶಸ್ತಿ ವಾಪಸ್ ನೀಡುತ್ತಿರುವವರ ವಿರುದ್ಧ ಕ್ರಿಯೇಟೀವ್ ಇಂಡಿಯಾ ಸಂಘಟನೆ ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿದೆ.

ಬೆಂಗಳೂರು: ಭಾರತದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿದೆ ಎಂದು ಆರೋಪಿಸಿ ಪ್ರಶಸ್ತಿ ವಾಪಸ್ ನೀಡುತ್ತಿರುವವರ ವಿರುದ್ಧ ಕ್ರಿಯೇಟೀವ್ ಇಂಡಿಯಾ ಸಂಘಟನೆ ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿದೆ.
ನವೆಂಬರ್ 7 ರಂದು ಬೆಳಿಗ್ಗೆ 11 ಕ್ಕೆ ಫ್ರೀಡಂ ಪಾರ್ಕ್ ನಿಂದ ಪ್ರಾರಂಭವಾಗಲಿರುವ ಕಾಲ್ನಡಿಗೆ ಜಾಥ, ರಾಜಭವನದವರೆಗೆ ನಡೆಯಲಿದೆ. ನಂತರ ಪ್ರಶಸ್ತಿ ಹಿಂತಿರುಗಿಸುವಿಕೆ ಹಾಗೂ ಅಸಹಿಷ್ಣುತೆ ಇದೆ ಎಂದು ಆರೋಪಿಸುತ್ತಿರುವವರ ವಿರುದ್ಧ ರಾಜ್ಯಪಾಲರಿಗೆ ಮನವಿಪತ್ರ ಸಲ್ಲಿಸಲಾಗುತ್ತದೆ.
ಪ್ರಶಸ್ತಿ ಹಿಂತಿರುಗಿಸುವುದು ಹಾಗೂ ಅಸಹಿಷ್ಣುತೆ ಇದೆ ಎಂದು ಆರೋಪಿಸುತ್ತಿರುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆಯನ್ನು ಕುಗ್ಗಿಸಲು ಸಂಚು ರೂಪಿಸಲಾಗಿದೆ ಎಂದು ಕಾಲ್ನಡಿಗೆ ಜಾಥದಲ್ಲಿ ಪಾಲ್ಗೊಳ್ಳಲಿರುವ ಸದಸ್ಯರು ಆರೋಪಿಸಿದ್ದಾರೆ.
ಕಾಲ್ನಡಿಗೆ ಜಾಥದಲ್ಲಿ ಶತವಾಧಾನಿ ಗಣೇಶ್, ಡಾ.ಚಿದಾನಂದ ಮೂರ್ತಿ,ಸುಮತೀಂದ್ರ ನಾಡಿಗ,ಚಿತ್ರ ನಟರಾದ ಅವಿನಾಶ್,ಜಗ್ಗೇಶ್,ತಾರಾ,ಮಾಳವಿಕ,ಜೈ ಜಗದೀಶ್ ಸೇರಿದಂತೆ ವಿವಿಧ ರಂಗದ ಕಲಾವಿದರು, ಬರಹಗಾರರು,ಸಮಾಜ ಸೇವಕರು ಭಾಗವಹಿಸಲಿದ್ದಾರೆ.
ಇದೆ ಮಾದರಿಯಲ್ಲಿ ಬಾಲಿವುಡ್ ನ ಹಿರಿಯ ನಟ ಅನುಪಮ್ ಖೇರ್ ಸಹ ದೆಹಲಿಯಲ್ಲಿ ನ.7 ರಂದು ಇಂಡಿಯಾ ಇಸ್ ಟಾಲರೆಂಟ್ ಅಡಿ ಬರಹದಲ್ಲಿ ಅಸಹಿಷ್ಣುತೆ ಪ್ರತಿಭಟನಾಕಾರರ ವಿರುದ್ಧ  ಮಾರ್ಚ್ ಫಾರ್ ಇಂಡಿಯಾ ಪ್ರತಿಭಟನೆ ಮೆರವಣಿಗೆ ನಡೆಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT