ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಅನಿರ್ದಿಷ್ಟಾವಧಿ ಎಪಿಎಂಸಿ ಬಂದ್ ವಾಪಸ್

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಎಪಿಎಂಸಿ ಬಂದ್ ಗೆ ತೆರೆ ಬಿದ್ದಿದೆ....

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಎಪಿಎಂಸಿ ಬಂದ್ ಗೆ ತೆರೆ ಬಿದ್ದಿದೆ. ಸರ್ಕಾರದ ಜೊತೆಗಿನ ಮಾತುಕತೆ ಫಲಪ್ರದವಾದ ಹಿನ್ನೆಲೆಯಲ್ಲಿ ಬಂದ್ ವಾಪಸ್ ಪಡೆದಿರುವುದಾಗಿ ಎಫ್ ಕೆಸಿಸಿಐ ಉಪಾಧ್ಯಕ್ಷ ಎಂ.ಸಿ ದಿನೇಶ್ ಕುಮಾರ್ ತಿಳಿಸಿದ್ದಾರೆ. 

ಸಿಎಂ ಸಿದ್ದರಾಮಯ್ಯ ಅವರನ್ನು ವಿಧಾನ ಸೌಧದಲ್ಲಿ ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ಸಿಎಂ ತಮ್ಮ ಸಮಸ್ಯೆಗಳ ಬಗ್ಗೆ ಗಮನ ಹರಿಸಿ ಬಗೆಹರಿಸುವ ಭರವಸೆ ನೀಡಿದ್ದರ ಹಿನ್ನೆಲೆಯಲ್ಲಿ ಮುಷ್ಕರ ಕೈಬಿಡಲಾಗಿದೆ ಎಂದು ಹೇಳಿದ್ದಾರೆ.

ದಾಸ್ತಾನು ಮಿತಿ ಪರವಾನಗಿ ವಿಷಯದಲ್ಲಿ ತಮ್ಮ ಬೇಡಿಕೆಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದ ಕಾರಣ ಶುಕ್ರವಾರದಿಂದ ವಹಿವಾಟು ಸ್ಥಗಿತಗೊಂಡಿತ್ತು.

ದಾಸ್ತಾನು ಮಿತಿ ಪರವಾನಗಿ ವಿಚಾರದಲ್ಲಿ ಇನ್ನೂ ಗೊಂದಲ, ಅರ್ಜಿ ಸಲ್ಲಿಸಿದವರಿಗೆ ಇಲ್ಲಿವರೆಗೆ ಪರವಾನಗಿ ಸಿಕ್ಕದಿರುವುದು. ಜೊತೆಗೆ ದಾಸ್ತಾನು ಮಳಿಗೆಗಳ ಮೇಲೆ ದಾಳಿ ನಡೆಸಿದ ಆಹಾರ ಇಲಾಖೆ ಅಧಿಕಾರಿಗಳು ಅಕ್ರಮ ದಾಸ್ತಾನು ಎಂದು ಹೇಳಿ ಬೇಳೆಕಾಳುಗಳ ದಾಸ್ತಾನು ಜಪ್ತಿ ಮಾಡಿಕೊಂಡಿರುವುದನ್ನು ವಿರೋಧಿಸಿ ಎಪಿಎಂಸಿ ಬಂದ್ ಗೆ ಕರೆ ನೀಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT