ರಾಘವೇಶ್ವರ ಭಾರತಿ ಸ್ವಾಮಿಜಿ 
ಜಿಲ್ಲಾ ಸುದ್ದಿ

ರಾಘವೇಶ್ವರ ಶ್ರೀ ಮಧ್ಯಂತರ ಅರ್ಜಿ ವಜಾ

ರಾಮಚಂದ್ರಾಪುರದ ರಾಘವೇಶ್ವರ ಭಾರತಿ ಸ್ವಾಮಿಜಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ನಗರದ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಸಿಐಡಿ ಪೊಲೀಸರ ಸುಪರ್ದಿಯಲ್ಲಿದ್ದು, ಅವುಗಳನ್ನು ನ್ಯಾಯಾಲಯದ ವಶಕ್ಕೆ ನೀಡಬೇಕು ಎಂದು ರಾಮಚಂದ್ರಾಪುರದ ರಾಘವೇಶ್ವರ ಭಾರತಿ ಸ್ವಾಮಿಜಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ನಗರದ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ. ಪ್ರಕರಣ ಸಂಬಂಧಿತ ದಾಖಲೆಗಳು, ವಿಧಿವಿಜ್ಞಾನ ಪ್ರಯೋಗಾಲಯ ನೀಡಿದ್ದ ವರದಿ ಹಾಗೂ ತನಿಖಾ ಸಂದರ್ಭದಲ್ಲಿ ಸಂಗ್ರಹಿಸಿದ್ದ ಸಾಕ್ಷಿಗಳ ಹೇಳಿಕೆಗಳು ಸಿಐಡಿ ವಶದಲ್ಲಿವೆ. ಸಾಕ್ಷ್ಯಗಳನ್ನು ತಿರುಚುವ ಸಾಧ್ಯತೆ ಇದೆ. ಆದ್ದರಿಂದ ಅವುಗಳನ್ನು ನ್ಯಾಯಾಲಯ ತನ್ನ ಸುಪರ್ದಿಗೆ ಪಡೆಯಬೇಕು ಎಂದು ಕೋರಿ ಸ್ವಾಮಿಜಿ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಮಹವರ್ಕರ್, ಪ್ರಕರಣದ ಸಂಬಂಧ ತನಿಖೆ ನಡೆಸಿರುವ ಸಿಐಡಿ ಪೊಲೀಸರು ಈಗಾಗಲೇ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಈ ಹಂತದಲ್ಲಿ ಸಾಕ್ಷಗಳನ್ನು ತಿರುಚುವುದಕ್ಕೆ ಅಸಾಧ್ಯ ಎಂದು ಅಭಿಪ್ರಾಯಪಟ್ಟರು. ಅಲ್ಲದೇ ಅರ್ಜಿಯನ್ನು ವಜಾಗೊಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT