ಆಂಜನೇಯ 
ಜಿಲ್ಲಾ ಸುದ್ದಿ

ಆಂಜನೇಯ ವಿರುದ್ಧ ರಾಜ್ಯಾದ್ಯಂತ ಹೆಚ್ಚಿದ ಆಕ್ರೋಶ

ಸಮಾಜ ಕಲ್ಯಾಣ ಇಲಾಖೆಯ ಟೆಂಡರ್ ವಿಚಾರದಲ್ಲಿ ಸ್ವತಃ ಸಚಿವ ಆಂಜನೇಯ ಅವರ ಪತ್ನಿಯೇ ಲಂಚ ಪಡೆಯುತ್ತಿದ್ದ ಪ್ರಕರಣ ಬೆಳಕಿಗೆ ಬಂದ ಬೆನ್ನಿಗೇ ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ.

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ಟೆಂಡರ್ ವಿಚಾರದಲ್ಲಿ ಸ್ವತಃ ಸಚಿವ ಆಂಜನೇಯ ಅವರ ಪತ್ನಿಯೇ ಲಂಚ ಪಡೆಯುತ್ತಿದ್ದ ಪ್ರಕರಣ ಬೆಳಕಿಗೆ ಬಂದ ಬೆನ್ನಿಗೇ ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ರಾಜಿನಾಮೆಗಾಗಿ ಪ್ರಬಲ ಸೊಲ್ಲೆದ್ದಿದ್ದು, ಎಲ್ಲೆಡೆ ಪ್ರತಿಭಟನೆಯ ಕೂಗು ಕೇಳಿಬರುತ್ತಿದೆ.
ಇಲಾಖೆಯ ಅವ್ಯವಹಾರವನ್ನು ಸಚಿವ ಆಂಜನೇಯ ಅವರ ಮನೆಯಲ್ಲೇ ಸುವರ್ಣ ನ್ಯೂಸ್ ಕುಟುಕು ಕಾರ್ಯಾಚರಣೆ ನಡೆಸಿ ಬಯಲಿಗೆಳೆದಿತ್ತು. ಈ ಹಿನ್ನೆಲೆಯಲ್ಲಿ ಪ್ರಮುಖ ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳು, ನಾಗರಿಕ ವೇದಿಕೆಗಳು ರಾಜ್ಯದ ಹಲವೆಡೆ  ಪ್ರತಿಭಟನೆ ನಡೆಸಿವೆ. ಸಚಿವರ ತವರು ಜಿಲ್ಲೆ ಚಿತ್ರದುರ್ಗದಲ್ಲೂ ಸಂಘ ಸಂಸ್ಥೆಗಳು ಬೀದಿಗಿಳಿದಿದ್ದವು. ಚಿತ್ರದುರ್ಗ ಹಾಗೂ ದಾವಣಗೆರೆಯಲ್ಲಿ ಪ್ರತಿಭಟಿಸಿ ಸಿಒಡಿ ತನಿಖೆಗೆ ಒತ್ತಾಯಿಸಿವೆ. ವಿಜಯಪುರ ಹಾಗೂ ಬಾಗಲಕೋಟೆ, ಮೈಸೂರು, ತುಮಕೂರು ಭಾಗದಲ್ಲಿಯೂ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಬಿಜೆಪಿ ಹಾಗೂ ಎಬಿವಿಪಿ ಪ್ರತಿಭಟಿಸಿದೆ. ಬೆಳಗಾವಿಯ ಮಾದಿಗ ಮೀಸಲಾತಿ ಹೋರಾಟ ಸಮಿತಿ ಸಚಿವರ ಪರವಾಗಿದ್ದು, ಆಂಜನೇಯ ಅವರನ್ನು ಸಂಪುಟದಿಂದ ಕೈಬಿಟ್ಟರೆ ಹೋರಾಟ ನಡೆಸುವುದಾಗಿ ಡಿಸಿಗೆ ಮನವಿ ಸಲ್ಲಿಸಿತು. ಇನ್ನೂ ಕೆಲವು ಕಡೆ ಸಚಿವರ ಪರವಾಗಿಯೂ ಪ್ರತಿಭಟನೆಗಳು ನಡೆದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT