ಹಿರಿಯ ಕಾಂಗ್ರೆಸ್ ನಾಯಕ ಬಿ. ಜನಾರ್ದನ ಪೂಜಾರಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಬಿಹಾರ ಚುನಾವಣೆ ಕೇಂದ್ರದಿಂದ ಪಂಚಾಯ್ತಿವರೆಗೆ ಮಾದರಿ: ಜನಾರ್ದನ ಪೂಜಾರಿ

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಎಲ್ಲರಿಗೂ ಮಾದರಿ. ಪ್ರಧಾನಮಂತ್ರಿಗಷ್ಟೇ ಅಲ್ಲ, ಎಲ್ಲ ಮುಖ್ಯಮಂತ್ರಿಗಳಿಗೂ ಮಾದರಿ. ಕೇಂದ್ರದಿಂದ ಹಿಡಿದು ಪಂಚಾಯ್ತಿವರೆಗೆ ಮಾದರಿ ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ. ಜನಾರ್ದನ ಪೂಜಾರಿ ಹೇಳಿದ್ದಾರೆ...

ಮಂಗಳೂರು: ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಎಲ್ಲರಿಗೂ ಮಾದರಿ. ಪ್ರಧಾನಮಂತ್ರಿಗಷ್ಟೇ ಅಲ್ಲ, ಎಲ್ಲ ಮುಖ್ಯಮಂತ್ರಿಗಳಿಗೂ ಮಾದರಿ. ಕೇಂದ್ರದಿಂದ ಹಿಡಿದು ಪಂಚಾಯ್ತಿವರೆಗೆ ಮಾದರಿ ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ. ಜನಾರ್ದನ ಪೂಜಾರಿ ಹೇಳಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕಾರಣಿಗಳು ಯಾವ ರೀತಿ ನಡೆದುಕೊಳ್ಳಬೇಕು ಎನ್ನುವುದನ್ನು ಈ ಚುನಾವಣೆ ಕಲಿಸಿಕೊಟ್ಟಿದೆ. ಅಧಿಕಾರ ಸಿಕ್ಕಾಗ ತಲೆಗೆ ಮದ ಏರಬಾರದು, ದ್ವೇಷದ ವಿಷಬೀಜ ಬಿತ್ತುವುದು, ಅಸಹಿಷ್ಣುತೆಯನ್ನು ಎಲ್ಲ ಕಡೆ ಸೃಷ್ಟಿ ಮಾಡುವುದು, ಅಸ್ಪೃಶ್ಯತೆಯನ್ನು ಕೂಡ ದೇಶದ ಮೇಲೆ ಹೇರಿದ ಕೇಂದ್ರ ಸರ್ಕಾರಕ್ಕೆ ಬಿಹಾರದ ಜನತೆ ತಕ್ಕ ಉತ್ತರವನ್ನೇ ಕೊಟ್ಟಿದ್ದಾರೆ ಎಂದರು.

``ಗೋಮಾಂಸ ತಿನ್ನುವವರನ್ನು ಹತ್ಯೆ ಮಾಡುತ್ತೇವೆ ಎಂದು ಸಂಘ ಪರಿವಾರದವರು ಹೇಳುತ್ತಾರೆ, ವೇದವನ್ನೇ ತಿರುಚುತ್ತಾರೆ ಇವರು. ಚಿದಾನಂದ ಮೂರ್ತಿಯವರು ಮುಖ್ಯಮಂತ್ರಿಗೆ `ನೀವು ನರ ಮಾಂಸ ತಿನ್ನಿ' ಎಂದು ಹೇಳ್ತಾರೆ. ಬಿಹಾರ ಚುನಾವಣೆಯಲ್ಲಿ ಇದನ್ನೇ ಅಸ್ತ್ರವನ್ನಾಗಿ ಪ್ರಯೋಗ ಮಾಡಿದ್ರು. ಇದು ಬೇಕಿತ್ತೇ ಇವರಿಗೆ? ನಿಮ್ಮಲ್ಲಿ ಸಹಿಷ್ಣುತೆ ಎಂಬುದೇ ಇಲ್ಲವೇ'' ಎಂದು ಸಂಘ ಪರಿವಾರದ ಮುಖಂಡರನ್ನು ಪ್ರಶ್ನಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT