ಎಚ್.ಎಸ್. ಪಾರ್ವತಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಹಿರಿಯ ಲೇಖಕಿ ಎಚ್ ಎಸ್ ಪಾರ್ವತಿ ನಿಧನ

ದಶಕಗಳ ಕಾಲ ಉಲಿದಿದ್ದ ಧ್ವನಿಯೊಂದು ಶಾಶ್ವತವಾಗಿ ಉಡುಗಿಹೋಗಿದೆ. ಲೇಖಕಿ ಹಾಗೂ ಆಕಾಶವಾಣಿಯ ಕಾರ್ಯ ನಿರ್ವಾಹಕಿಯಾಗಿ ಕೆಲಸ ನಿರ್ವಹಿಸಿದ್ದ ಎಚ್.ಎಸ್. ಪಾರ್ವತಿ (81) ಸೋಮವಾರ ನಿಧನರಾಗಿದ್ದಾರೆ. ಅವರು ಪುತ್ರಿ ಡಾ. ಎಂ.ಎಸ್. ವಿದ್ಯಾ ಹಾಗೂ ಪುತ್ರ ಎಂ.ಎಸ್.ರವಿ ಅವರನ್ನು ಅಗಲಿದ್ದಾರೆ...

ಬೆಂಗಳೂರು; ದಶಕಗಳ ಕಾಲ ಉಲಿದಿದ್ದ ಧ್ವನಿಯೊಂದು ಶಾಶ್ವತವಾಗಿ ಉಡುಗಿಹೋಗಿದೆ. ಲೇಖಕಿ ಹಾಗೂ ಆಕಾಶವಾಣಿಯ ಕಾರ್ಯ ನಿರ್ವಾಹಕಿಯಾಗಿ ಕೆಲಸ ನಿರ್ವಹಿಸಿದ್ದ ಎಚ್.ಎಸ್. ಪಾರ್ವತಿ (81) ಸೋಮವಾರ ನಿಧನರಾಗಿದ್ದಾರೆ. ಅವರು ಪುತ್ರಿ ಡಾ. ಎಂ.ಎಸ್. ವಿದ್ಯಾ ಹಾಗೂ ಪುತ್ರ ಎಂ.ಎಸ್.ರವಿ ಅವರನ್ನು ಅಗಲಿದ್ದಾರೆ.

ಶಾಸ್ತ್ರಿ ನಗರದ ಮನೆಯಲ್ಲಿ ಪಾರ್ಥಿವ ಶರೀರ ಇಡಲಾಗಿದ್ದು, ಅಮೆರಿಕಾದಲ್ಲಿರುವ ಸಹೋದರ ಬಂದ ನಂತರ ಅಂತ್ಯಕ್ರಿಯೆ ನಡೆಸಲಾಗುವುದು ವಿದ್ಯಾ ತಿಳಿಸಿದ್ದಾರೆ. ಹಿಂದಿ ಭಾಷೆಯಲ್ಲೇ ಹೆಚ್ಚಿನ ವ್ಯಾಸಂಗ ಮಾಡಿದ್ದರೂ ಪಾರ್ವತಿ ಅವರು ಲೇಖಕಿ ಹಾಗೂ ಅನುವಾದಕಿಯಾಗಿ ಕನ್ನಡ ಸಾಹಿತ್ಯ ಲೋಕಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಹಲವು ಪ್ರಶಸ್ತಿಗಳಿಗೂ ಭಾಜನರು.

ಆಕಾಶವಾಣಿ ನಿರೂಪಕಿ: ಪಾರ್ವತಿ ಅವರು, ಬೆಂಗಳೂರು ಹಾಗೂ ಮೈಸೂರು ಆಕಾಶವಾಣಿಗಳಲ್ಲಿ ಕಾರ್ಯಕ್ರಮ ನಿರ್ವಾಹಕಿಯಾಗಿ ಕಾರ್ಯನಿರ್ವಹಿಸಿದ್ದರು.

1958ರಲ್ಲಿ ಆಕಾಶವಾಣಿ ಬೆಂಗಳೂರು ವಿಭಾಗದಲ್ಲಿ ಉದ್ಯೋಗ ಪಡೆದ ಅವರು ಭಾಷಾಂತರ ಪರಿಣತರಾಗಿದ್ದರು. ಮಕ್ಕಳಿಗಾಗಿ ರೂಪಿಸಲಾದ `ಕೇಳಿ ಗಿಳಿಗಳೇ', ಕನ್ನಡದ ಕವಿಗಳ ಕುರಿತ ಚಿಂತನ, ಹೀಗೆ ಹಲವು ಕಾರ್ಯಕ್ರಮಗಳು ಪಾರ್ವತಿಯವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆದಿದ್ದವು. 1990ರಲ್ಲಿ ಅವರು ಸ್ವಯಂ ನಿವೃತ್ತಿ ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT