ಕುಟ್ಟಪ್ಪ ಮೃತದೇಹ 
ಜಿಲ್ಲಾ ಸುದ್ದಿ

ಮೃತ ವಿಹೆಚ್‍ಪಿ ಮುಖಂಡ ಕುಟ್ಟಪ್ಪ ಕುಟುಂಬಕ್ಕೆ 5 ಲಕ್ಷ ಪರಿಹಾರ

ಮಡಿಕೇರಿಯಲ್ಲಿ ಟಿಪ್ಪು ಜಯಂತಿ ಆಚರಣೆ ವೇಳೆ ನಡೆದ ಗುಂಪು ಘರ್ಷಣೆಯಲ್ಲಿ ಮೃತಪಟ್ಟಿದ್ದ ವಿಹೆಚ್‍ಪಿ ಕಾರ್ಯದರ್ಶಿ ಕುಟ್ಟಪ್ಪ ಕುಟುಂಬಕ್ಕೆ ರಾಜ್ಯ ಸರ್ಕಾರ 5 ಲಕ್ಷ ಪರಿಹಾರ...

ಬೆಂಗಳೂರು: ಮಡಿಕೇರಿಯಲ್ಲಿ ಟಿಪ್ಪು ಜಯಂತಿ ಆಚರಣೆ ವೇಳೆ ನಡೆದ ಗುಂಪು ಘರ್ಷಣೆಯಲ್ಲಿ ಮೃತಪಟ್ಟಿದ್ದ ವಿಹೆಚ್‍ಪಿ ಕಾರ್ಯದರ್ಶಿ ಕುಟ್ಟಪ್ಪ ಕುಟುಂಬಕ್ಕೆ ರಾಜ್ಯ ಸರ್ಕಾರ 5 ಲಕ್ಷ ಪರಿಹಾರ ಘೋಷಿಸಿದೆ. 
ಮಡಿಕೇರಿಯಲ್ಲಿ ನಡೆದ ಘರ್ಷಣೆ ಹಾಗೂ ಕುಟ್ಟಪ್ಪ ಸಾವಿನ ಕುರಿತಂತೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಿದ್ಧರಾಮಯ್ಯ ಅವರು, ಕುಟ್ಟಪ್ಪ ಸಾವಿನ ಕುರಿತಂತೆ ಗೊಂದಲದ ಹೇಳಿಕೆಗಳು ಕೇಳಿಬರುತ್ತಿರುವುದರಿಂದ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆಸುವುದಾಗಿ ಹೇಳಿದ್ದಾರೆ.
ಈ ಕುರಿತಂತೆ ಬಿಜೆಪಿ ಇದೇ ನವೆಂಬರ್ 13 ರಂದು ಬಂದ್ ಗೆ ಕರೆ ನೀಡಿದ್ದು, ಬಂದ್ ನೀಡಿರುವ ಕರೆಯನ್ನು ಹಿಂಪಡೆಯುವಂತೆ ಮುಖ್ಯಮಂತ್ರಿಗಳು ಬಿಜೆಪಿ ಮುಖಂಡರಿಗೆ ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರ ಆಚರಿಸಲು ನಿರ್ಧರಿಸಿದ್ದ ಟಿಪ್ಪು ಜಯಂತಿಯನ್ನು ವಿರೋಧಿಸಿ ಬಿಜೆಪಿ ಸೇರಿದಂತೆ ಹಲವು ಹಿಂದೂ ಪರ ಸಂಘಟನೆಗಳು ನಿನ್ನೆ ಕೊಡಗು ಬಂದ್ ಗೆ ಕರೆ ನೀಡಿದ್ದವು. ಇದರಂತೆ ನಿನ್ನೆ ಮಡಿಕೇರಿಯ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿದ್ದವು. ಪ್ರತಿಭಟನೆ ವೇಳೆ ಘರ್ಷಣೆಗಳು ನಡೆದಿದ್ದವು. ಘರ್ಷಣೆಯಲ್ಲಿ ನಡೆದ ಕಲ್ಲುತೂರಾಟದಲ್ಲಿ ವಿಹೆಚ್ ಪಿ ಮುಖಂಡ ಕುಟ್ಟಪ್ಪ ಸಾವನ್ನಪ್ಪಿದ್ದರು. 
ಇದಲ್ಲದೆ, ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ರಾಜು ಎಂಬ ವ್ಯಕ್ತಿ ಪ್ರತಿಭಟನೆ ನೋಡಲೆಂದು ಬಂದ ವೇಳೆ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT