ಸಹಕಾರ ಸಪ್ತಾಹದಲ್ಲಿ ಮುಖ್ಯಮಂತ್ರಿ( ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

14 ರಿಂದ ಸಹಕಾರ ಸಪ್ತಾಹ

ಶತಮಾನಗಳಷ್ಟು ಭವ್ಯ ಇತಿಹಾಸ ಹೊಂದಿರುವ ಸಹಕಾರ ಕ್ಷೇತ್ರವನ್ನು ಮತ್ತಷ್ಟು ಪರಿಚಯಿಸಲು ಮತ್ತು ವಿಸ್ತರಿಸುವ ಸಲುವಾಗಿ 62ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ನವೆಂಬರ್ 14ರಿಂದ 20ರವರೆಗೆ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರು: ಶತಮಾನಗಳಷ್ಟು ಭವ್ಯ ಇತಿಹಾಸ ಹೊಂದಿರುವ ಸಹಕಾರ ಕ್ಷೇತ್ರವನ್ನು ಮತ್ತಷ್ಟು ಪರಿಚಯಿಸಲು ಮತ್ತು ವಿಸ್ತರಿಸುವ ಸಲುವಾಗಿ 62ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ನವೆಂಬರ್ 14ರಿಂದ 20ರವರೆಗೆ ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ 39,627 ಸಹಕಾರ ಸಂಘಗಳಿದ್ದು, 2.24 ಕೋಟಿ ಸದಸ್ಯರಿದ್ದಾರೆ.
ನವೆಂಬರ್ 14ರಂದು ಮೈಸೂರಿನಲ್ಲಿ ಸಪ್ತಾಹದ ಉದ್ಘಾಟನೆ ನೆರವೇರಲಿದ್ದು, ಆ ದಿನವನ್ನು ಉದ್ಯೋಗ ಮತ್ತು ನೈಪುಣ್ಯತೆಯ ಅಭಿವೃದ್ಧಿಯ ದಿನವನ್ನಾಗಿ ಆಚರಿಸಲಾಗುವುದು. ನವೆಂಬರ್ 15ರಂದು ಬೆಂಗಳೂರಿನಲ್ಲಿ ಸಹಕಾರಿ ಸಂಘಗಳು ಮತ್ತು ಆರ್ಥಿಕ ಸಾಕ್ಷರತೆಯ ದಿನಾಚರಣೆ, ನವೆಂಬರ್ 16ರಂದು ಚಿತ್ರದುರ್ಗದಲ್ಲಿ ಸ್ವಚ್ಛ ಭಾರತ ಅಭಿಯಾನ ಮತ್ತು ಶುದ್ದ ಕುಡಿಯುವ ನೀರಿನ ಘಟಕಗಳ ಸ್ಥಾಪನೆಯಲ್ಲಿ ಸಹಕಾರ ಸಂಘಗಳ ಪಾತ್ರದ ದಿನಾಚರಣೆ, ನವೆಂಬರ್ 17ರಂದು ಚಿಕ್ಕಮಗಳೂರಿನಲ್ಲಿ ಸಹಕಾರಿ ಸಂಘಗಳ ನಡುವಿನ ಸಹಕಾರವನ್ನು ಬಲಪಡಿಸುವುದು ಮತ್ತು ಸಹಕಾರ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಪ್ರಯತ್ನವನ್ನು ವಿರೋಧಿಸುವ ದಿನಾಚರಣೆ ಏರ್ಪಾಟಾಗಿದೆ.
ನವೆಂಬರ್ 18ರಂದು ಬೆಂಗಳೂರಿನಲ್ಲಿ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಶ್ರೇಷ್ಠದ ಸಹಕಾರಿಗಳಿಗೆ ಪ್ರದಾನ ಮಾಡುವರು. ನವೆಂಬರ್ 19ರಂದು ಸಹಕಾರಿ ಸಂಘಗಳ ಮೂಲಕ ಪ್ರಕೃತಿ ವಿಕೋಪಗಳ ನಿರ್ವಹಣೆ ಮತ್ತು ರೈತರಲ್ಲಿ ಆತ್ಮಸ್ಥೈರ್ಯ ತುಂಬುವಲ್ಲಿ ಸಹಕಾರ ಸಂಘಗಳ ಪಾತ್ರದ ದಿನಾಚರಣೆ ಹಾಗೂ ನವೆಂಬರ್ 20ರಂದು ಸಹಕಾರ ಸಂಘಗಳ ಬಲವರ್ಧನೆಗಾಗಿ ಕಾನೂನು ಬಲಪಡಿಸುವ ದಿನಾಚರಣೆ ಆಯೋಜಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT