ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ರಸ್ತೆ ಗುಂಡಿ ಮುಚ್ಚಲು ಟಾರ್ ಪ್ಲ್ಯಾಂಟ್

ಬೆಂಗಳೂರಿನ ಪ್ರಮುಖ ಸಮಸ್ಯೆಗಳಲ್ಲಿ ಒಂದಾದ ರಸ್ತೆ ಗುಂಡಿ ಮುಚ್ಚಲು ಪಾಲಿಕೆ ಶಾಶ್ವತ ಪರಿಹಾರಕ್ಕೆ...

ಬೆಂಗಳೂರು: ಬೆಂಗಳೂರಿನ ಪ್ರಮುಖ ಸಮಸ್ಯೆಗಳಲ್ಲಿ ಒಂದಾದ ರಸ್ತೆ ಗುಂಡಿ ಮುಚ್ಚಲು ಪಾಲಿಕೆ ಶಾಶ್ವತ ಪರಿಹಾರಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ನಗರದ ಹೊರವಲಯದಲ್ಲಿ ನಾಲ್ಕು ಟಾರ್ ಪ್ಲ್ಯಾಂಟ್‍ಗಳ ನಿರ್ಮಾಣಕ್ಕೆ ನಿರ್ಧರಿಸಿದೆ. 

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮಹಾನಗರ ಪಾಲಿಕೆ ಆಯುಕ್ತ ಜಿ.ಕುಮಾರನಾಯಕ್, ಮುಂದಿನ 23 ದಿನಗಳಲ್ಲಿ ಟಾರ್ ಪ್ಲ್ಯಾಂಟ್ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗುತ್ತಿದೆ. ಆನೇಕಲ್ ತಾಲೂಕು, ರಾಜರಾಜೇಶ್ವರಿ ನಗರ ಸಮೀಪದ ಗೊಲ್ಲಹಳ್ಳಿ, ಮಲ್ಲಸಂದ್ರ ಮತ್ತು ಕಣ್ಣೂರುಗಳಲ್ಲಿ ಪ್ಲ್ಯಾಂಟ್ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ.
ಪ್ಲ್ಯಾಂಟ್ ನಿರ್ಮಾಣವಾದರೆ ನಗರದ ರಸ್ತೆ ಗುಂಡಿಗಳಲ್ಲಿ ತಕ್ಷಣವೇ ಮುಚ್ಚಲು ಸಹಾಯವಾಗುತ್ತದೆ. ಈ ಮೂಲಕ ನಗರದ ರಸ್ತೆಗಳು ಗುಂಡಿ ಬೀಳುವ ಮುನ್ನವೇ ಎಚ್ಚೆತ್ತುಕೊಂಡು ಆರಾಮದಾಯಕ ಸಂಚಾರಕ್ಕೆ ಅನುವು ಮಾಡಿಕೊಡುವುದು ಪಾಲಿಕೆ ಉದ್ದೇಶ ಎಂದು ಹೇಳಿದರು. 
ಪ್ಲ್ಯಾಂಟ್‍ಗಳ ನಿರ್ಮಾಣಕ್ಕೆ ಬೇಕಾಗುವ ಅನುದಾನ ಒದಗಿಸಲು ಪಾಲಿಕೆ ಕ್ರಮ ಕೈಗೊಳ್ಳಲಿದೆ. ಕಳೆದು ಒಂದು ವಾರದಿಂದ ಉಂಟಾದ ಮಳೆ ಮತ್ತು ಹವಾಮಾನ ವೈಪರೀತ್ಯದಿಂದ ರಸ್ತೆಗಳು ಹಾಳಾಗಿವೆ. ರಸ್ತೆ ಗುಣಮಟ್ಟ ಕಾಯ್ದುಕೊಳ್ಳಲು ಮುಖ್ಯ ಎಂಜಿನಿಯರ್ ಜತೆ ಚರ್ಚೆ ನಡೆಸಿದ್ದು, ಆದಷ್ಟು ಶೀಘ್ರದಲ್ಲೇ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

SCROLL FOR NEXT