ಸಿದ್ದರಾಮಯ್ಯ 
ಜಿಲ್ಲಾ ಸುದ್ದಿ

ಸಿಎಂ ವಿರುದ್ಧ ಕುಟ್ಟಪ್ಪ ಪುತ್ರನ ಆಕ್ರೋಶ

ಗಲಭೆ ಸಂದರ್ಭದಲ್ಲಿ ಮೃತಪಟ್ಟ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ದೇವಪ್ಪಂಡ ಕುಟ್ಟಪ್ಪ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಮಡಿಕೇರಿ: ಗಲಭೆ ಸಂದರ್ಭದಲ್ಲಿ ಮೃತಪಟ್ಟ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ದೇವಪ್ಪಂಡ ಕುಟ್ಟಪ್ಪ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭ ಕುಟ್ಟಪ್ಪ ಪುತ್ರ ಡಾಲಿ, ತನ್ನ ತಂದೆಯ ಸಾವಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿರುವುದನ್ನು ನಿಲ್ಲಿಸಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾದಾಪುರ ಬಳಿಯ ಇಗ್ಗೋಡ್ಲು ಗ್ರಾಮದಲ್ಲಿನ ದೇವಪ್ಪಂಡ ಕುಟ್ಟಪ್ಪ ಸ್ವಗೃಹಕ್ಕೆ ಭೇಟಿ ನೀಡಿದ ಸಚಿವ ದಿನೇಶ್ ಗುಂಡೂರಾವ್, ಕುಟುಂಬಕ್ಕೆ ಸಾಂತ್ವನ ಹೇಳಿದರು. ಸಚಿವರು, `ಧೈರ್ಯ ತಂದುಕೊಳ್ಳಿ' ಎಂದು ಸಾಂತ್ವನದ ಮಾತನ್ನಾಡಿದರು. ಈ ಸಂದರ್ಭ ಕುಟ್ಟಪ್ಪ ಪತ್ನಿ ಚಿಣ್ಣವ್ವ ದುಃಖದ ಕಟ್ಟೆಯೊಡೆಯಿತು. ಮನೆ ಮಂದಿ ಕಣ್ಣೀರುಗರೆದರು. ಆಕ್ರೋಶ ತೋಡಿಕೊಂಡ ಕುಟ್ಟಪ್ಪ ಪುತ್ರ ಡಾಲಿ, ತನ್ನ ತಂದೆ ಕುಟ್ಟಪ್ಪ ದೇಶಪ್ರೇಮಿ. ದೇಶಕ್ಕಾಗಿಯೇ
ಪ್ರಾಣತೆತ್ತಿದ್ದಾರೆ. ತನ್ನ ತಂದೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಹಿಂದೂ ಸಮಾವೇಶಕ್ಕೆ ತೆರಳುವಾಗ ಪೊಲೀಸರು ಎಲ್ಲಾ  ವಾಹನಗಳ ತಪಾಸಣೆ ಕೈಗೊಳ್ಳುತ್ತಾರೆ. ಆದರೆ ಟಿಪ್ಪು ಜಯಂತಿ ಸಂದರ್ಭ ಮಡಿಕೇರಿಗೆ ಮಾರಕಾಸ್ತ್ರಗಳೊಂದಿಗೆ ತೆರಳುತ್ತಿದ್ದ ಯಾವುದೇ ವಾಹನಗಳನ್ನು ತಪಾಸಣೆ ಮಾಡಿಲ್ಲ ಎಂದೂ ಡಾಲಿ ಆರೋಪಿಸಿದರು. ತನ್ನ ತಂದೆ ಕುಟ್ಟಪ್ಪ ಕಾಂಪೌಂಡ್‍ನಿಂದ ಜಾರಿ ಸತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿರುವುದನ್ನು ನಿಲ್ಲಿಸಲಿ. ಜೊತೆಗೆ, ತಂದೆ ಸಾವಿಗೆ ಕಾರಣರಾದ ವರಿಗೆ ಕಠಿಣ ಶಿಕ್ಷೆಯಾಗಬೇಕೆಂದೂ ಡಾಲಿ ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT