(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಸಿಲಿಂಡರ್ ಸ್ಪೋಟ; ಮೂವರ ಸಾವು

ಸೋರಿಕೆಯಾಗಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ದಂಪತಿ ಹಾಗೂ ಅವರ ನಾಲ್ಕೂವರೆ ವರ್ಷದ ಪುತ್ರ ಮೃತಪಟ್ಟಿರುವ ದಾರುಣ ಘಟನೆ ಕಾಡುಗೋಡಿಯಲ್ಲಿ ನಡೆದಿದೆ...

ಬೆಂಗಳೂರು: ಸೋರಿಕೆಯಾಗಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ದಂಪತಿ ಹಾಗೂ ಅವರ ನಾಲ್ಕೂವರೆ ವರ್ಷದ ಪುತ್ರ ಮೃತಪಟ್ಟಿರುವ ದಾರುಣ ಘಟನೆ ಕಾಡುಗೋಡಿಯಲ್ಲಿ ನಡೆದಿದೆ.

ಕಾಡುಗೋಡಿ ಬೇಳ್ತೂರು ಕಾಲೋನಿಯಲ್ಲಿ ವಾಸವಿದ್ದ ಕೇರಳ ಮೂಲದ ಶಿಬು (35) ಅವರ ಪತ್ನಿ ಅಂಜು ಥಾಮಸ್ (32) ಇವರ ಪುತ್ರ ಅಲ್ವಿನ್ ಮೃತರು.

ನ.7ರ ಬೆಳಗ್ಗೆ 8 ಗಂಟೆ ಸುಮಾರಿಗೆ ಶಿಬು ಚಹಾ ಮಾಡಲು ಅಡುಗೆ ಕೋಣೆಗೆ ಹೋಗಿದ್ದು, ಪತ್ನಿ ಆತನನ್ನು ಹಿಂಬಾಲಿಸಿಕೊಂಡು ಹೋಗಿದ್ದರು. ಈ ವೇಲೆ ಮಗ ಹಾಲ್ ನಲ್ಲಿ ಆಟವಾಡುತ್ತಿದ್ದ. ಚಹಾ ಮಾಡಲು ಸ್ಟೋವ್ ಹಚ್ಚುತ್ತಿದ್ದಂತೆ ಸೋರಿಕೆಯಾಗಿದ್ದ ಗ್ಯಾಸ್ ಸ್ಪೋಟಗೊಂಡಿದೆ. ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನೂ ವಿಕ್ಟೋರಿಯಾ ಆಸ್ಪತ್ರೆ ಸುಟ್ಟ ಗಾಯಗಳ ವಿಭಾಗಕ್ಕೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ, ನ.9ರಂದು ಶಿಬು ಮೃತಪಟ್ಟಿದ್ದರು. ನ.11 ರಂದು ಪತ್ನಿ ಅಂಜು ಮೃತ ಪಟ್ಟಿದ್ದರು. ತೀವ್ರ ನಿಗಾ ಘಟಕದಲ್ಲಿದ್ದ ಬಾಲಕ ಅಲ್ವಿನ್ ಕೂಡ ಗುರುವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾನೆ ಎಂದು ಕಾಡುಗೋಡಿ ಪೊಲೀಸರು ಹೇಳಿದ್ದಾರೆ.

ಮನೆಯಲ್ಲಿದ್ದ ಇಲಿಗಳು ಕೆಲ ದಿನಗಳ ಹಿಂದೆ ಗ್ಯಾಸ್ ಪೈಪ್ ಕಚ್ಚಿದ್ದವು. ಅದನ್ನು ಬದಲಿಸಿ ಹೊಸ ಪೈಪ್ ಹಾಕಿಸುವ ಬದಲು ಶಿಬು, ಇಲಿ ಕಚ್ಚಿದ್ದ ಭಾಗವನ್ನು ಕಟ್ ಮಾಡಿ ಹಾಗೆಯೇ ಸ್ಟೋವ್‍ಗೆ ಪೈಪ್ ಸಂಪರ್ಕ ನೀಡಿದ್ದರು. ಆದರೆ, ಸ್ಟೋವ್‍ಗೆ ಸರಿಯಾಗಿ ಕುಳಿತುಕೊಳ್ಳದ ಪೈಪ್ ನಿಂದ ಗ್ಯಾಸ್ ಸೋರಿಕೆಯಾಗಿತ್ತು. ಗ್ಯಾಸ್ ವಾಸನೆ ಗ್ರಹಿಸಲು ವಿಫಲವಾದ ಶಿಬು ಸ್ಟೋವ್ ಹಚ್ಚಿದ್ದೆ ದುರಂತಕ್ಕೆ ಕಾರಣವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಐದೂವರೆ ವರ್ಷಗಳ ಹಿಂದೆ ಶಿಬು ಹಾಗೂ ಅಂಜು ವಿವಾಹವಾಗಿದ್ದು ಉಪಜೀವನಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಶಿಬು ವೆಲ್ಡಿಂಗ್ ಕೆಲಸ ಮಾಡುತ್ತಿದ್ದು, ಅಂಜು ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಈ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT