ಮಧುಸೂದನ್‌ ಆರ್‌.ನಾಯಕ್‌ 
ಜಿಲ್ಲಾ ಸುದ್ದಿ

ನೂತನ ಅಡ್ವೋಕೇಟ್ ಜನರಲ್ ನೇಮಕ

ರಾಜ್ಯದ ನೂತನ ಅಡ್ವೋಕೇಟ್‌ ಜನರಲ್‌ ಹುದ್ದೆಗೆ ಹಿರಿಯ ನ್ಯಾಯವಾದಿ ಮಧುಸೂದನ್‌ ಆರ್‌.ನಾಯಕ್‌ ನೇಮಕಗೊಂಡಿದ್ದಾರೆ....

ಬೆಂಗಳೂರು: ರಾಜ್ಯದ ನೂತನ ಅಡ್ವೋಕೇಟ್‌ ಜನರಲ್‌ ಹುದ್ದೆಗೆ ಹಿರಿಯ ನ್ಯಾಯವಾದಿ ಮಧುಸೂದನ್‌ ಆರ್‌.ನಾಯಕ್‌ ನೇಮಕಗೊಂಡಿದ್ದಾರೆ.

ಪ್ರೊ.ರವಿವರ್ಮಕುಮಾರ್‌ ಅಡ್ವೋಕೇಟ್‌ ಜನರಲ್‌ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಅಂಗೀಕರಿಸಿ ನೂತನ ಅಡ್ವೋಕೇಟ್‌ ಜನರಲ್‌ ಆಗಿ ಮಧುಸೂದನ್‌ ಆರ್‌.ನಾಯಕ್‌ ಹೆಸರು ಪರಿಗಣಿಸಲು ಕೋರಿ ರಾಜ್ಯಪಾಲ ವಜೂಭಾಯ್‌ ವಾಲಾ ಅವರಿಗೆ ಸರ್ಕಾರ ಶಿಫಾರಸು ಮಾಡಿತ್ತು. ಅದನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರೊ.ರವಿವರ್ಮ ಕುಮಾರ್‌ ಅವರು ಅಡ್ವೋಕೇಟ್‌ ಜನರಲ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದನ್ನು ಅಂಗೀಕಾರ ಮಾಡಿ ಹೊಸಬರ ನೇಮಕ ಮಾಡಲು ಶಿಫಾರಸು ಮಾಡಲಾಗಿದೆ. ಸದ್ಯದಲ್ಲೇ ಅಧಿಸೂಚನೆ ಹೊರಬೀಳಲಿದೆ ಎಂದು ಹೇಳಿದರು.

ನ್ಯಾಯಾಂಗ ನೇಮಕಾತಿಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತಮ್ಮ ಸಲಹೆ-ಸೂಚನೆ ಪಡೆಯುತ್ತಿಲ್ಲ ಎಂದು ಅಸಮಾಧಾನಗೊಂಡಿದ್ದ ಪ್ರೊ.ರವಿವರ್ಮ ಕುಮಾರ್‌ ಅಕ್ಟೋಬರ್‌ 26ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಸರ್ಕಾರ ನನ್ನ ಮೇಲೆ ವಿಶ್ವಾಸವಿಟ್ಟು ಜವಾಬ್ದಾರಿಯುತ ಹುದ್ದೆಯ ಹೊಣೆಗಾರಿಕೆ ವಹಿಸಿರುವುದು ಸಂತಸ ತಂದಿದೆ. ಆ ಸ್ಥಾನದ ಘನತೆ-ಗೌರವ ಕಾಪಾಡುವುದರ ಜತೆಗೆ ವಹಿಸಿದ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT