ವಿಧಾನಸೌಧ 
ಜಿಲ್ಲಾ ಸುದ್ದಿ

ಇಂದಿನಿಂದ ರಾಜ್ಯ ಸದನ ಕದನ ಶುರು

ರಾಜಕೀಯ ರಣಾಂಗಣಕ್ಕೆ ವೇದಿಕೆಯಾಗುವ ವಿಧಾನ ಮಂಡಲದ 10 ದಿನಗಳ ಅಧಿವೇಶನ ಸೋಮವಾರದಿಂದ...

ಬೆಂಗಳೂರು: ರಾಜಕೀಯ ರಣಾಂಗಣಕ್ಕೆ ವೇದಿಕೆಯಾಗುವ ವಿಧಾನ ಮಂಡಲದ 10 ದಿನಗಳ ಅಧಿವೇಶನ ಸೋಮವಾರದಿಂದ ಆರಂಭವಾಗುತ್ತಿದೆ. 
ಬೆಳಗ್ಗೆ 11 ಗಂಟೆಗೆ ವಿಧಾನಸಭೆಹಾಗೂ ಮಧ್ಯಾಹ್ನ 12.15ಕ್ಕೆ ವಿಧಾನಪರಿಷತ್ತು ಅಧಿವೇಶನ ಪ್ರಾರಂಭವಾಗಲಿವೆ. ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಅರ್ಪಿಸಿದ ನಂತರ ವಿಧಾನಸಭೆ ಮಂಗಳವಾರಕ್ಕೆ ಮುಂದೂಡಲ್ಪಡುತ್ತದೆ. 
ಪರಿಷತ್‍ನಲ್ಲಿ ಶ್ರದ್ಧಾಂಜಲಿ ಸಲ್ಲಿಕೆ ತರುವಾಯ ಪ್ರತಿಪಕ್ಷ ಬಿಜೆಪಿಯು ರಾಜ್ಯದ ಕಾನೂನು ಸುವ್ಯವಸ್ಥೆ ವಿಚಾರವಾಗಿ ನಿಲುವಳಿ ಸೂಚನೆ ಮಂಡಿಸಲು ಉದ್ದೇಶಿಸಿದೆ. ಈ ವಿಚಾರವಾಗಿ ಚರ್ಚೆಗೆ ಅವಕಾಶ ನೀಡುವಂತೆ ಪಟ್ಟು ಹಿಡಿಯುವುದು ಬಹುತೇಕ ಖಚಿತ. 
ಸರ್ಕಾರ ಚರ್ಚೆಗೆ ಸಿದ್ಧವಾಗದೇ ಇದ್ದಲ್ಲಿ ಮೊದಲ ದಿನವೇ ಸರ್ಕಾರದ ವಿರುದ್ಧ ಹೋರಾಟದ ಹಾದಿ ತುಳಿಯುವ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆದಿದೆ. ಸೋಮವಾರ ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಅಲ್ಲಿ ಮುಂದಿನ ಹೆಜ್ಜೆ ಬಗ್ಗೆ ಮುಖಂಡರು ತೀರ್ಮಾನಿಸುವರು.
ಪೊಲೀಸ್ ಅಧಿಕಾರಿಗಳ ಮೇಲಿನ ಹಲ್ಲೆ, ಜೈಲಲ್ಲಿ ಕೊಲೆ, ಅತ್ಯಾಚಾರ ಪ್ರಕರಣ, ಸರಗಳ್ಳತನದ ವಿಚಾರವಾಗಿಯೂ ಸರ್ಕಾರವನ್ನು ಕಟ್ಟಿಹಾಕಲು ಬಿಜೆಪಿ ಸಿದ್ಧವಾಗಿದೆ. ರೈತರ ಆತ್ಮ ಹತ್ಯೆವಿಚಾರದಲ್ಲಿ ಸರ್ಕಾರದ ಸ್ಪಂದನೆ, ಸಚಿವ ಆಂಜನೇಯ ಅವ್ಯವಹಾರ ಪ್ರಕರಣವನ್ನು ಕೈಗೆತ್ತಿಕೊಳ್ಳಲು ಬಿಜೆಪಿ ನಿರ್ಧರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT