ಡಾ.ಚಂದ್ರಶೇಖರ್ ಕಂಬಾರ 
ಜಿಲ್ಲಾ ಸುದ್ದಿ

ಕಾಂಗ್ರೆಸ್ ಗೆ ಪರ್ಯಾಯ ಬೇಕಿಲ್ಲ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಪರ್ಯಾಯವಾದದ್ದು ಬೇರೊಂದು ಬೇಕಿಲ್ಲ ಎಂದು ಜ್ಞಾನಪೀಠ ಪ್ರಶಸ್ತಿ...ಪುರಸ್ಕೃತ

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಪರ್ಯಾಯವಾದದ್ದು ಬೇರೊಂದು    ಬೇಕಿಲ್ಲ ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರ ಅಭಿಪ್ರಾಯಪಟ್ಟರು.

ಕರ್ನಾಟಕ ಸಾಹಿತ್ಯ ವೇದಿಕೆ ವತಿಯಿಂದ ಏರ್ಪಡಿಸಿದ್ದ ಕಾರ್ಯ ಕ್ರಮದಲ್ಲಿ ತುಮಕೂರು  ಮಹದೇವಯ್ಯ ಮತ್ತು ಪತ್ರಕರ್ತ ಜಿ.ಜಿ. ನಾಗರಾಜ ಅವರ ಸಂಪಾದಕತ್ವದ ಮುಖ್ಯಮಂತ್ರಿ  ಸಿದ್ದರಾಮಯ್ಯನವರ ರಾಜಕೀಯ ಬದುಕು, ಜನಪರ ಯೋಜನೆಗಳ ಕುರಿತ 'ಇಟ್ಟಗುರಿ- ದಿಟ್ಟಹೆಜ್ಜೆ' ಪುಸ್ತಕ ಲೋಕಾರ್ಪಣೆಗೊಳಿಸಿ ಅವರು ಮಾತನಾಡುತ್ತಿದ್ದರು.

ಸಿದ್ದರಾಮಯ್ಯನವರು ರಾಜ್ಯದ ಏಳಿಗೆ ಬಗ್ಗೆ ಬಹಳ ಹಿಂದಿನಿಂದಲೂ ಅಪಾರ ಕನಸು ಕಂಡಿದ್ದಾರೆ.  ಜೊತೆಗೆ ಅವರ ತೀರ್ಮಾನಗಳನ್ನು ಗಮನಿಸಿದರೆ, ಈ ಸರ್ಕಾರಕ್ಕೆ ಪರ್ಯಾಯವಾದದ್ದು ಮತ್ತೊಂದು ಇಲ್ಲ. ಹೀಗಾಗಿ ಸಿದ್ದರಾಮಯ್ಯನವರ ಬಗ್ಗೆ ಇಂದಿಗೂ ಅಭಿಮಾನ, ಪ್ರೀತಿಯಿದೆ  ಎಂದು ಕೊಂಡಾಡಿದರು.

ಆಹಾರ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಸಿದ್ದರಾಮಯ್ಯನವರು ತಮ್ಮ  ಹೋರಾಟದ ಹಿನ್ನೆಲೆಯಿಂದಲೇ ಮುಖ್ಯಮಂತ್ರಿಯಾಗಿದ್ದರೆ ಹೊರತು, ಯಾರೂ ಅವರನ್ನು ಸಿಎಂ ಸ್ಥಾನಕ್ಕೆ ಕೂರಿಸಿಲ್ಲ. ಮುಂದಿನ ಅವಧಿಗೂ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ. ರಾಜ್ಯದ ಜನತೆಗೆ ಕಾಂಗ್ರೆಸ್‍ನಿಂದ ಸಿಗುತ್ತಿರುವ ಆಶ್ರಯ, ಬೇರಾವ ಪಕ್ಷದಿಂದಲೂ ಸಿಗೋದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹೈಕಮಾಂಡ್ ಕಟ್ಟಿಹಾಕಿದೆ: ಸಿಎಂ ಸಿದ್ದರಾಮಯ್ಯನವರದು ಕ್ರಿಯಾಶೀಲ ವ್ಯಕ್ತಿತ್ವ. ಆದರೆ,  ಇವರನ್ನು ಪಕ್ಷದ ಹೈಕಮಾಂಡ್ ಕಟ್ಟಿಹಾಕುತ್ತಿದ್ದು, ಸ್ವತಂತ್ರವಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಸಾಹಿತಿಗಳು ಸಿದ್ದರಾಮಯ್ಯನವರ ಬಗ್ಗೆ ಬರೆಯುವುದು, ವಿಶ್ವಾಸ  ವ್ಯಕ್ತಪಡಿಸುತ್ತಿರುವುದು ಕೊಂಡುಕೊಳ್ಳುವಿಕೆಯಿಂದಲ್ಲ. ಬದಲಿಗೆ ಅವರ ಜನಪರ ಕೆಲಸದಿಂದ. ಯಡಿಯೂರಪ್ಪ ಸಿಎಂ ಆಗಿದ್ದಾಗ ಮಠಗಳಿಗೆ ನೂರಾರು ಕೋಟಿ ರು.ಕೊಟ್ಟಾಗ, ಯಾರೂ ಚಕಾರವೆತ್ತಲಿಲ್ಲ. ಆದರೆ, ಸಿದ್ದರಾಮಯ್ಯನವರು ಗ್ರಾಮೀಣ ಮಕ್ಕಳ ಪ್ರವಾಸಕ್ಕೆ ತೀರ್ಮಾನಿಸಿದಾಗ, ದೊಡ್ಡ ಗಲಾಟೆ ಎಬ್ಬಿಸಿದ್ದರು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ  ಅಧ್ಯಕ್ಷ ಬಂಜಗೆರೆ ಜಯಪ್ರಕಾಶ್ ವಿಶ್ಲೇಷಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Grok ರಚಿಸಿದ ಅಸಭ್ಯ, ಕಾನೂನುಬಾಹಿರ ವಿಷಯಗಳ ತೆಗೆದುಹಾಕಿ': Elon Musk ಎಕ್ಸ್‌ಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ!

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಬಳ್ಳಾರಿ ಫೈರಿಂಗ್: ನಿನ್ನೆಯಷ್ಟೇ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅಮಾನತು

ಭಾರತ ತಂಡಕ್ಕೆ ಭಾರಿ ಆಘಾತ; ಸ್ಟಾರ್ ಆಟಗಾರನ ಮೂಳೆ ಮುರಿತ, ದೀರ್ಘಕಾಲ ಕ್ರಿಕೆಟ್‌ನಿಂದ ದೂರ!

EVM Survey: ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುತ್ತಿರುವುದು ವಿಷಾದನೀಯ - ಸಿಎಂ ಸಿದ್ದರಾಮಯ್ಯ

SCROLL FOR NEXT