ವಿನೋದ್ ಆಳ್ವ 
ಜಿಲ್ಲಾ ಸುದ್ದಿ

ನಟ ವಿನೋದ್ ಆಳ್ವಾ ಜಾಮೀನು ಅರ್ಜಿ ವಜಾ, ನ.21ರವರೆಗೆ ನ್ಯಾಯಾಂಗ ಬಂಧನ

ಕೊಲೆಗೆ ಸಂಚು ಹಾಗೂ ಕೊಲೆ ಯತ್ನ ಆರೋಪದಡಿ ಬಂಧನಕ್ಕೊಳಗಾಗಿರುವ ಬಹುಭಾಷಾ ನಟ ವಿನೋದ್ ಆಳ್ವ ಅವರ ಜಾಮೀನು ಅರ್ಜಿಯನ್ನು...

ಮಂಗಳೂರು: ಕೊಲೆಗೆ ಸಂಚು ಹಾಗೂ ಕೊಲೆ ಯತ್ನ ಆರೋಪದಡಿ ಬಂಧನಕ್ಕೊಳಗಾಗಿರುವ ಬಹುಭಾಷಾ ನಟ ವಿನೋದ್ ಆಳ್ವ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು, ಆರೋಪಿಯನ್ನು ನವೆಂಬರ್ 21ರವರೆಗೆ ನ್ಯಾಯಾಂಗ ಬಂಧನಕ್ಕ ಆದೇಶಿಸಿದೆ.

ಆಳ್ವ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಪುತ್ತೂರು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ನಾಗರಾಜ್ ಅವರು, ಆಳ್ವಗೆ ನ..21ರವರೆಗೆ ನ್ಯಾಯಾಂಗ ಬಂಧನ ವಿಧಿಸಿದರು.

ಆಳ್ವ ಅವರ ಮ್ಯಾನೇಜರ್ ಆಗಿದ್ದ ಸಚ್ಚಿದಾನಂದ್ ಅವರು ವಿನೋದ್ ಆಳ್ವ ಅವರು ತಮ್ಮ ಕೊಲೆಗೆ ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಸಂಪ್ಯಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿನೋದ್ ಅವರನ್ನು ನಿನ್ನೆ ಪೊಲೀಸರು ಬಂಧಿಸಿದ್ದರು.

ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಸಚ್ಚಿದಾನಂದ್ ಅವರು, ವಿನೋದ್ ಆಳ್ವರ ತೋಟದ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಇತ್ತೀಚಿಗೆ ಇಬ್ಬರ ಮಧ್ಯೆ ವೈಮನಸ್ಸು ಉಂಟಾದ ಕಾರಣ ಸಚ್ಚಿದಾನಂದ್ ಅವರು ಕಳೆದ ಮಾರ್ಚ್ 7ರಂದು ತೋಟದ ವ್ಯವಹಾರವನ್ನು ಕೈಬಿಟ್ಟಿದ್ದರು. ಬಳಿಕ ನ್ಯಾಯಾಲಯಕ್ಕೆ ದೂರು ನೀಡಿ ಅಧಿಕಾರ ಪತ್ರ ಇರುವ ಕಾರಣ ನ್ಯಾಯೋಚಿತ ಸವಲತ್ತು ನೀಡುವಂತೆ ಮನವಿ ಮಾಡಿದ್ದರು ಎನ್ನಲಾಗಿದೆ.

ಈ ನಡುವೆ ಭಾನುವಾರ ಸಚ್ಚಿದಾನಂದ್ ಅವರು ಈಶ್ವರಮಂಗಲ ಡೈರಿಗೆ ಬೈಕ್‌ನಲ್ಲಿ ಹಾಲು ಕೊಂಡೊಯ್ಯುತ್ತಿದ್ದ ವೇಳೆ ಎದುರಿನಿಂದ ಜೀಪು ಚಲಾಯಿಸಿಕೊಂಡು ಬಂದ ಆಳ್ವರ ಚಾಲಕ ಉದಯ್ ಚೆಕ್ಕಿತ್ತಾಯ ಬೈಕ್‌ಗೆ ಹಿಂಭಾಗದಿಂದ ಡಿಕ್ಕಿ ಹೊಡೆಸಿದ್ದರು. ಈ ವೇಳೆ ಸಚ್ಚಿದಾನಂದ್ ಬೈಕ್ ಸಹಿತ ರಸ್ತೆ ಪಕ್ಕದ ಚರಂಡಿಗೆ ಬಿದ್ದಿದ್ದರು. ಬಳಿಕ ವಿನೋದ್ ಆಳ್ವ ಮತ್ತು ಅವರ ಚಾಲಕ ಉದಯ ಚೆತ್ತಿತ್ತಾರಿಂದ ಜೀವಭಯವಿದ್ದು, ರಕ್ಷಣೆ ನೀಡುವಂತೆ ದೂರು ಸಚ್ಚಿದಾನಂದ್ ದೂರು ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ : ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

SCROLL FOR NEXT