ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಸಂಡೂರಿನಲ್ಲಿ ಚಿರತೆ ದಾಳಿಗೆ ವ್ಯಕ್ತಿ ಬಲಿ

ಮೇಕೆ ಮೇಯಿಸಲು ತೆರಳಿದ್ದ ವ್ಯಕ್ತಿಯನ್ನು ನರಭಕ್ಷಕ ಚಿರತೆ ಬಲಿ ಪಡೆದ ಘಟನೆ ಬುಧವಾರ ಸಂಡೂರು ತಾಲೂಕಿನ...

ಬಳ್ಳಾರಿ: ಮೇಕೆ ಮೇಯಿಸಲು ತೆರಳಿದ್ದ  ವ್ಯಕ್ತಿಯನ್ನು ನರಭಕ್ಷಕ ಚಿರತೆ ಬಲಿ ಪಡೆದ ಘಟನೆ ಬುಧವಾರ ಸಂಡೂರು ತಾಲೂಕಿನ ಸಿದ್ಧಾಪುರ ಗ್ರಾಮದಲ್ಲಿ ನಡೆದಿದೆ. ಇದರೊಂದಿಗೆ ಕಳೆದ ಎರಡು ತಿಂಗಳಲ್ಲಿ ಚಿರತೆ ದಾಳಿಗೆ ಬಲಿಯಾದವರ ಸಂಖ್ಯೆ ಮೂರಕ್ಕೇರಿದಂತಾಗಿದೆ.

ಚಿರತೆ ದಾಳಿಗೆ ಬಲಿಯಾದ ವಕ್ತಿಯನ್ನು ಭರಮಲಿಂಗಪ್ಪ(52) ಎಂದು ಗುರುತಿಸಲಾಗಿದ್ದು, ಭರಮಲಿಂಗಪ್ಪ ಅವರು ಇಂದು ಬೆಳಗ್ಗೆ ಮೇಕೆಗಳನ್ನು ಮೇಯಿಸಲು ತೆರಳಿದ್ದರು. ಈ ವೇಳೆ ಬೇಟೆಗಾಗಿ ಹೊಂಚು ಹಾಕಿ ಕುಳಿತಿದ್ದು ಚಿರತೆ ಮೇಕೆ ಮೇಲೆ ದಾಳಿ ಮಾಡಿದೆ. ಈ ಸಂದರ್ಭದಲ್ಲಿ ಮೇಕೆಯನ್ನು ರಕ್ಷಿಸಲು ಮುಂದಾದ ಭರಮಲಿಂಗಪ್ಪ ಅವರನ್ನೇ ನರಭಕ್ಷಕ ಚಿರತೆ ಬಲಿ ಪಡೆದಿದೆ.

ಘಟನಾ ಸ್ಥಳಕ್ಕೆ ಸಂಡೂರು ಪೊಲೀಸರು ಮತ್ತು ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ತಿಂಗಳು ಅರಣ್ಯಾಧಿಕಾರಿಗಳು ನಡೆಸಿದ ಕೂಂಬಿಂಗ್ ಕಾರ್ಯಾಚರಣೆಯಲ್ಲಿ ನರಭಕ್ಷಕ ಚಿರತೆಯೊಂದನ್ನು ಹತ್ಯೆ ಮಾಡಲಾಗಿತ್ತು.

ಕಳೆದ ತಿಂಗಳಷ್ಟೇ ಚಿರತೆ ದಾಳಿಗೆ ಸುಶೀಲನಗರದ ಮಾಬೂಸಾಬ್(55) ಹಾಗೂ ಪ್ರಕಾಶ್ ನಾಯ್ಕ್(14) ಎಂಬ ಹುಡುಗ ಚಿರತೆ ದಾಳಿಗೆ ಬಲಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT