ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಸಂಡೂರಿನಲ್ಲಿ ಚಿರತೆ ದಾಳಿಗೆ ವ್ಯಕ್ತಿ ಬಲಿ

ಮೇಕೆ ಮೇಯಿಸಲು ತೆರಳಿದ್ದ ವ್ಯಕ್ತಿಯನ್ನು ನರಭಕ್ಷಕ ಚಿರತೆ ಬಲಿ ಪಡೆದ ಘಟನೆ ಬುಧವಾರ ಸಂಡೂರು ತಾಲೂಕಿನ...

ಬಳ್ಳಾರಿ: ಮೇಕೆ ಮೇಯಿಸಲು ತೆರಳಿದ್ದ  ವ್ಯಕ್ತಿಯನ್ನು ನರಭಕ್ಷಕ ಚಿರತೆ ಬಲಿ ಪಡೆದ ಘಟನೆ ಬುಧವಾರ ಸಂಡೂರು ತಾಲೂಕಿನ ಸಿದ್ಧಾಪುರ ಗ್ರಾಮದಲ್ಲಿ ನಡೆದಿದೆ. ಇದರೊಂದಿಗೆ ಕಳೆದ ಎರಡು ತಿಂಗಳಲ್ಲಿ ಚಿರತೆ ದಾಳಿಗೆ ಬಲಿಯಾದವರ ಸಂಖ್ಯೆ ಮೂರಕ್ಕೇರಿದಂತಾಗಿದೆ.

ಚಿರತೆ ದಾಳಿಗೆ ಬಲಿಯಾದ ವಕ್ತಿಯನ್ನು ಭರಮಲಿಂಗಪ್ಪ(52) ಎಂದು ಗುರುತಿಸಲಾಗಿದ್ದು, ಭರಮಲಿಂಗಪ್ಪ ಅವರು ಇಂದು ಬೆಳಗ್ಗೆ ಮೇಕೆಗಳನ್ನು ಮೇಯಿಸಲು ತೆರಳಿದ್ದರು. ಈ ವೇಳೆ ಬೇಟೆಗಾಗಿ ಹೊಂಚು ಹಾಕಿ ಕುಳಿತಿದ್ದು ಚಿರತೆ ಮೇಕೆ ಮೇಲೆ ದಾಳಿ ಮಾಡಿದೆ. ಈ ಸಂದರ್ಭದಲ್ಲಿ ಮೇಕೆಯನ್ನು ರಕ್ಷಿಸಲು ಮುಂದಾದ ಭರಮಲಿಂಗಪ್ಪ ಅವರನ್ನೇ ನರಭಕ್ಷಕ ಚಿರತೆ ಬಲಿ ಪಡೆದಿದೆ.

ಘಟನಾ ಸ್ಥಳಕ್ಕೆ ಸಂಡೂರು ಪೊಲೀಸರು ಮತ್ತು ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ತಿಂಗಳು ಅರಣ್ಯಾಧಿಕಾರಿಗಳು ನಡೆಸಿದ ಕೂಂಬಿಂಗ್ ಕಾರ್ಯಾಚರಣೆಯಲ್ಲಿ ನರಭಕ್ಷಕ ಚಿರತೆಯೊಂದನ್ನು ಹತ್ಯೆ ಮಾಡಲಾಗಿತ್ತು.

ಕಳೆದ ತಿಂಗಳಷ್ಟೇ ಚಿರತೆ ದಾಳಿಗೆ ಸುಶೀಲನಗರದ ಮಾಬೂಸಾಬ್(55) ಹಾಗೂ ಪ್ರಕಾಶ್ ನಾಯ್ಕ್(14) ಎಂಬ ಹುಡುಗ ಚಿರತೆ ದಾಳಿಗೆ ಬಲಿಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kerala: ಕಾಂಗ್ರೆಸ್ ಸಂಸದ Shashi Tharoor ಬೆಂಗಾವಲು ಪಡೆ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

ಆತಂಕ ಸೃಷ್ಟಿಸಿದ ಇರಾನ್ ನಡೆ; ಹಾರ್ಮುಜ್ ನಂತರ, ಜಾಗತಿಕ ಆರ್ಥಿಕತೆಯ ಜೀವನಾಡಿ 'ಬಾಬ್ ಅಲ್-ಮಂಡೇಬ್' ಜಲಸಂಧಿ ಬಂದ್ ಮಾಡುವ ಸುಳಿವು!

ಅಮೆರಿಕದೊಂದಿಗೆ ಮಾತುಕತೆಗೆ ಇರಾನ್ ನಕಾರ; 'ಯುದ್ಧ ನಿಲ್ಲಿಸುವ ಪ್ರಯತ್ನಗಳಿಗೆ ಹಿನ್ನಡೆಯಾಗಿಲ್ಲ': ಮಾಧ್ಯಮ ವರದಿಗಳನ್ನು ತಿರಸ್ಕರಿಸಿದ ಪಾಕಿಸ್ತಾನ!

ಅಮೆರಿಕಾ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ನಾವು ಯುದ್ಧದಲ್ಲಿದ್ದೇವೆ; ಟ್ರಂಪ್ ಮಾರ್ಮಿಕ ನುಡಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

ಪೆಟ್ರೋಲ್ ದರ ಏರಿಕೆ, ದೇಶಾದ್ಯಂತ ವ್ಯಾಪಕ ಪ್ರತಿಭಟನೆ; ಬೆಚ್ಚಿಬಿದ್ದ Pak ಸರ್ಕಾರ, ಲೀಟರ್ ಗೆ 80 ರೂ ಗಳಷ್ಟು ಬೆಲೆ ಕಡಿತ!

SCROLL FOR NEXT