(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಪರಿಷತ್ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‍ನ 25 ಸ್ಥಾನಗಳಿಗೆ ನಡೆಯುವ ಚುನಾವಣೆ ಸಂಬಂಧ ಮೂರು ಪಕ್ಷಗಳಲ್ಲಿ ಚಟುವಟಿಕೆ ಆರಂಭವಾಗಿದ್ದು, ಮುಂದಿನ ವಾರದಲ್ಲಿ ಅಧಿಸೂಚನೆ ಪ್ರಕಟವಾಗುವ ಸಾಧ್ಯತೆ ಇದೆ...

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‍ನ 25 ಸ್ಥಾನಗಳಿಗೆ ನಡೆಯುವ ಚುನಾವಣೆ ಸಂಬಂಧ ಮೂರು ಪಕ್ಷಗಳಲ್ಲಿ ಚಟುವಟಿಕೆ ಆರಂಭವಾಗಿದ್ದು, ಮುಂದಿನ ವಾರದಲ್ಲಿ ಅಧಿಸೂಚನೆ ಪ್ರಕಟವಾಗುವ ಸಾಧ್ಯತೆ ಇದೆ.

ಸ್ಥಳೀಯ ಸಂಸ್ಥೆಗಳಿಂದ ಮೇಲ್ಮನೆಗೆ ನಡೆಯುವ ಈ ಚುನಾವಣೆ ಕಾಂಗ್ರೆಸ್‍ಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದರೂ, ಆಂತರಿಕ ಹೊಯ್ದಾಟವೇ ಬಿಸಿ ತುಪ್ಪವಾಗಿ ಪರಿಣಮಿಸಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಚುನಾವಣೆ ಪೂರ್ವಭಾವಿ ಸಭೆಯನ್ನು ನಡೆಸುವುದಕ್ಕೆ ಉತ್ಸಾಹ ತೋರುವ ಬದಲು ದಿನ ಮುಂದಕ್ಕೆ ಹಾಕುವ ಪ್ರಯತ್ನ ನಡೆಸುತ್ತಿದ್ದಾರೆ.

ಇನ್ನೊಂದೆಡೆ ಬಿಜೆಪಿ ನಾಯಕರು ಹಲವು ಸುತ್ತಿನ ಸಭೆ ನಡೆಸಿದ್ದು 15 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಖೈರುಗೊಳಿಸಿದ್ದಾರೆ. ಈ ಪೈಕಿ ಕಳೆದ ಬಾರಿ ಗೆಲುವು ಸಾಧಿಸಿದ್ದ ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಿಸುವ ತೀರ್ಮಾನಕ್ಕೆ ಬಂದಿದೆ. ಉಳಿದಿರುವ 10 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಕಸರತ್ತು ನಡೆದಿದೆ. ಇನ್ನು ವಿಧಾನ ಪರಿಷತ್‍ನಲ್ಲಿ ಸದ್ಯಕ್ಕೆ ಬಿಜೆಪಿ ಮತ್ತು ಜೆಡಿಎಸ್ ಸಂಖ್ಯಾ ಬಲವೇ ಅಧಿಕವಾಗಿರುವುದರಿಂದ ಪರಿಷತ್ ನಲ್ಲಿ ಮೇಲುಗೈ ಸಾಧಿಸುವ ಅನಿವಾರ್ಯತೆ ಕಾಂಗ್ರೆಸ್ ನಾಯಕತ್ವದ ಮುಂದೆ ಇದ್ದರೂ, ಆಂತರಿಕ ಬೇಗುದಿಯ ಶಮನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಹೀಗಾಗಿ ಈ ಚುನಾವಣೆಯ ಅಭ್ಯರ್ಥಿ ಆಯ್ಕೆಯೂ ಅಂತಿಮವಾಗಿ ದೆಹಲಿಗೆ ವರ್ಗಾವಣೆಗೊಳ್ಳುವ ಸಾಧ್ಯತೆ ಇದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯ ಹೆಚ್ಚಿನ ಜವಾಬ್ದಾರಿಯನ್ನು ಸ್ಥಳೀಯ ಮುಖಂಡರಿಗೆ ನೀಡಲಾಗಿದೆ ಎಂದು ರಾಜ್ಯ ನಾಯಕರು ಹೇಳುತ್ತಿದ್ದರೂ, ಜಿಲ್ಲಾ ಮಟ್ಟದಲ್ಲಿ ಕಾಂಗ್ರೆಸ್ ಮುಖಂಡತ್ವ ವಿಭಜನೆಯಾಗಿರುವುದು ಸುಳ್ಳಲ್ಲ. ಹೀಗಾಗಿ ಸಂಸದರು, ಶಾಸಕರು, ಪರಾಜಿತ ಅಭ್ಯರ್ಥಿಗಳು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದ ಸಮಿತಿಗೆ ಮೂವರು ಸಂಭಾವ್ಯಾ ಅಭ್ಯರ್ಥಿಗಳ ಪಟ್ಟಿ ಕಳುಹಿಸಿಕೊಡುವಂತೆ ಕೋರಲಾಗಿದೆ. ಇದಕ್ಕೆ ಪೂರಕವಾಗಿ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ಕಳೆದ ಎರಡು ದಿನಗಳಿಂದ ಲಘು ಚಾಲನೆ ಪ್ರಾರಂಭವಾಗಿದೆ. ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲಾ ನಾಯಕರ ಸಭೆ ನಡೆದಿದೆ. ಈ ವಾರಾಂತ್ಯದವರೆಗೂ ಈ ಸಭೆ ಮುಂದುವರಿಯಲಿದೆ.

ಅಪಸ್ವರ: ಈ ಮಧ್ಯೆ ಟಿ.ಜಾನ್ ಹಾಗೂ ನಿಸಾರ್ ಅಹ್ಮದ್ ಅವರಿಗೆ ಟಿಕೆಟ್ ತಪ್ಪಿಸಿ ಅಲ್ಪಸಂಖ್ಯಾತ ಸಮುದಾಯದ ಯುವಕರಿಗೆ ಅವಕಾಶ ನೀಡಬೇಕೆಂಬ ಚಿಂತನೆ ಕಾಂಗ್ರೆಸ್‍ನಲ್ಲಿ ನಡೆಯುತ್ತಿದೆ. ಈ ಪ್ರಯತ್ನದ ಮಧ್ಯೆಯೇ ಮೂಲ ಮತ್ತು ವಲಸಿಗ ಕಾಂಗ್ರೆಸಿಗರ ಮಧ್ಯೆ ಭಿನ್ನಾಭಿಪ್ರಾಯ ಸೃಷ್ಟಿಸ ಬಹುದಾದ ಪ್ರಯತ್ನವೊಂದು ಸದ್ದಿಲ್ಲದೇ ನಡೆಯುತ್ತಿದೆ. ನಸೀರ್ ಅಹ್ಮದ್ ಅವರಿಗೆ ಟಿಕೆಟ್ ತಪ್ಪಿಸಿದರೆ ಅಲ್ಪಸಂಖ್ಯಾತ ಸಮುದಾಯದ ವರಿಗೆ ಆ ಕ್ಷೇತ್ರದಿಂದ ಟಿಕೆಟ್ ನೀಡಬೇಕೆಂಬುದು ಮೂಲ ಕಾಂಗ್ರೆಸ್ ನವರ ಆಶಯವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT