ಯು.ಟಿ ಖಾದರ್ 
ಜಿಲ್ಲಾ ಸುದ್ದಿ

ಸಂತ್ರಸ್ತರನ್ನು ನಿರ್ಲಕ್ಷಿಸುತ್ತಿಲ್ಲ: ಸಚಿವ ಖಾದರ್‍

ಸರ್ಕಾರ ಎಂಡೋ ಸಲ್ಫಾನ್ ಸಂತ್ರಸ್ತರನ್ನು ನಿರ್ಲಕ್ಷಿಸುತ್ತಿಲ್ಲ. ಕೆಲವರು ಎಂಡೋ ಸಂತ್ರಸ್ತರಲ್ಲದಿದ್ದರೂ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿರುವ ಬಗ್ಗೆ ತಿಳಿದುಬಂದಿದೆ...

ಬೆಂಗಳೂರು: ಸರ್ಕಾರ ಎಂಡೋ ಸಲ್ಫಾನ್ ಸಂತ್ರಸ್ತರನ್ನು ನಿರ್ಲಕ್ಷಿಸುತ್ತಿಲ್ಲ. ಕೆಲವರು ಎಂಡೋ ಸಂತ್ರಸ್ತರಲ್ಲದಿದ್ದರೂ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿರುವ ಬಗ್ಗೆ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ನಿಜವಾದ ಸಂತ್ರಸ್ತರನ್ನು ಗುರುತಿಸಿ ಗುರುತಿನ ಚೀಟಿ ನೀಡಲಾಗುತ್ತಿದೆ.

ಈಗಾಗಲೇ 2693 ಸಂತ್ರಸ್ತರಿಗೆ ಗುರುತಿನ ಚೀಟಿ ನೀಡಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಇದೀಗ ಮತ್ತಷ್ಟು ಸಂತ್ರಸ್ತರ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಹಾಗಾಗಿ 6 ತಿಂಗಳ ಮಾಸಾಶನ ತಡೆಹಿಡಿಯಲಾಗಿದೆ. ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಮಾಸಾಶನದ ಹಣ ಖಜಾನೆಯಲ್ಲಿ ಭದ್ರವಾಗಿದೆ. ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಸಂತ್ರಸ್ತರಿಗೂ ಗುರುತಿನ ಚೀಟಿ ನೀಡಿ, ಅಗತ್ಯ ಸವಲತ್ತುಗಳನ್ನು ಕಲ್ಪಿಸಲಾಗುವುದು. ಸಿಎಂ ಸಿದ್ದರಾಮಯ್ಯ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT