(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಪ್ರತ್ಯೇಕ ಘಟನೆ; ಪ್ರಾಣಿ ದಾಳಿಗೆ ಇಬ್ಬರು ಬಲಿ

: ಪ್ರತ್ಯೇಕ ಕಡೆ ಬುಧವಾರ ಕರಡಿ ಹಾಗೂ ಚಿರತೆ ದಾಳಿಗೆ ಇಬ್ಬರು ಮೃತಪಟ್ಟಿದ್ದರೆ, ಕಾಡಾನೆ ದಾಳಿಗೆ ಕಾರ್ಮಿಕರೊಬ್ಬರಿಗೆ ಗಾಯವಾಗಿದೆ. ಇನ್ನು ಹುಲಿ ದಾಳಿಗೆ ಹಸುವೊಂದು ಬಲಿಯಾಗಿದೆ...

ಬೆಂಗಳೂರು: ಪ್ರತ್ಯೇಕ ಕಡೆ ಬುಧವಾರ ಕರಡಿ ಹಾಗೂ ಚಿರತೆ ದಾಳಿಗೆ ಇಬ್ಬರು ಮೃತಪಟ್ಟಿದ್ದರೆ, ಕಾಡಾನೆ ದಾಳಿಗೆ ಕಾರ್ಮಿಕರೊಬ್ಬರಿಗೆ ಗಾಯವಾಗಿದೆ. ಇನ್ನು ಹುಲಿ ದಾಳಿಗೆ ಹಸುವೊಂದು ಬಲಿಯಾಗಿದೆ.

ಕರಡಿ ದಾಳಿ: ಹೊಸದುರ್ಗ ತಾಲೂಕಿನ ತಣಿಗೆಕಲ್ಲು ಗ್ರಾಮದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಧರಣೇಶಪ್ಪ ಎಂಬುವರ ಮೇಲೆ ಮೂರು ಕರಡಿಗಳು ದಾಳಿ ನಡೆಸಿ ಕೊಂದು ಹಾಕಿವೆ. ಗ್ರಾಮಸ್ಥರು ಓಡಿಸಲು ಮುಂದಾದರೂ ಒಂದು ಕರಡಿ ಶವದ ಮುಂದೆಯೇ ಇತ್ತು. ಕೊನೆಗೆ ಗ್ರಾಮಸ್ಥರು ಬಡಿದುಕೊಂದಿದ್ದಾರೆ.

ಕೊಂದ ಚಿರತೆ: ಸಂಡೂರು ತಾಲೂಕಿನ ಸಿದ್ದಾಪುರ ಗ್ರಾಮದ ಅರಣ್ಯ ಪ್ರದೇಶದಲ್ಲಿ ಆಡು ಮೇಯಿಸುತ್ತಿದ್ದ ಕರಡಿ ಭರಮಲಿಂಗಪ್ಪ (70) ಎಂಬುವರ ಮೇಲೆ ಚಿರತೆ ದಾಳಿ ನಡೆಸಿ ಕೊಂದಿದೆ. ಆಡು ಮೇಯಿಸುತ್ತಾ ಊಟಕ್ಕೆ ಕುಳಿತಿದ್ದಾಗ ದಾಳಿ ನಡೆಸಿದೆ. ಸಕಲೇಶಪುರ ತಾಲೂಕಿನ ದಬ್ಬಳ್ಳಿಯಲ್ಲಿ ಕುಮಾರ್ (42) ಎಂಬುವರ ಮೇಲೆ ಕಾಡಾನೆ ದಾಳಿ ನಡೆಸಿ ಗಾಯಗೊಳಿಸಿದೆ. ಅವರನ್ನು ಹಾಸನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಡಗು ಜಿಲ್ಲೆಯ ಸಿದ್ದಾಪುರದ ಚೆಟ್ಟಳ್ಳಿಯಲ್ಲಿ ಹುಲಿ ದಾಳಿಗೆ ಹಸುವೊಂದು ಬಲಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT