ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಂ. ವೀರಪ್ಪ ಮೊಯ್ಲಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ವಂಚಿತರಿಗೆ ಅವಕಾಶ ಸಿಗಬೇಕು: ಸಿಎಂ

ಅವಕಾಶ ವಂಚಿತರಿಗೆ ಅವಕಾಶ ಸಿಗಬೇಕು ಹಾಗೂ ಕೆಳವರ್ಗಕ್ಕೆ ನ್ಯಾಯ ದೊರೆಯಬೇಕು ಎನ್ನುವುದೇ ಎಂ. ವೀರಪ್ಪ ಮೊಯ್ಲಿ ಅವರ ಸಾಹಿತ್ಯದ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು...

ಬೆಂಗಳೂರು: ಅವಕಾಶ ವಂಚಿತರಿಗೆ ಅವಕಾಶ ಸಿಗಬೇಕು ಹಾಗೂ ಕೆಳವರ್ಗಕ್ಕೆ ನ್ಯಾಯ ದೊರೆಯಬೇಕು ಎನ್ನುವುದೇ ಎಂ. ವೀರಪ್ಪ ಮೊಯ್ಲಿ ಅವರ ಸಾಹಿತ್ಯದ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಸರಸ್ವತಿ ಸಮ್ಮಾನ್ ಪುರಸ್ಕೃತ ಸಂಸದ ಎಂ.ವೀರಪ್ಪ ಮೊಯ್ಲಿ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮೊಯ್ಲಿ ಅವರು ಸಾಮಾನ್ಯರ ನಡುವಿನಿಂದ ಬಂದವರು. 10 ವರ್ಷ ತಪಸ್ಸಿನಂತೆ ಕೆಲಸ ಮಾಡಿದ ಅವರು ಮಹಾಕಾವ್ಯ ರಚಿಸಿ ಸಾಹಿತ್ಯಕ್ಕೆ ಹೆಸರು ತಂದಿದ್ದಾರೆ. ಸಾಹಿತ್ಯ ಹಾಗೂ ರಾಜಕೀಯದಲ್ಲಿ ನಿಪುಣರಾದ ಅವರು ಬದುಕಿನಲ್ಲಿ ಅಭಿವ್ಯಕ್ತಿಯನ್ನು ಸಾಹಿತ್ಯದ ಮೂಲಕ ಹೇಳಿದ್ದಾರೆ ಎಂದು ಶ್ಲಾಘಿಸಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ವೀರಪ್ಪ ಮೊಯ್ಲಿ, ಶ್ರೀರಾಮ ವನವಾಸಕ್ಕೆ ತೆರಳಿದ್ದ ಸಂದರ್ಭದಲ್ಲೇ ಪ್ರಜಾಪ್ರಭುತ್ವ ಕಾಣಸಿಗುತ್ತದೆ. ಆ ಸಮಯದಲ್ಲಿ 14 ವರ್ಷಗಳ ಕಾಲ ಶ್ರೀರಾಮ ಅಥವಾ ಭರತ ರಾಜ್ಯವಾಳಲಿಲ್ಲ. ಆಕ್ರಮಣಶೀಲ ಅಥವಾ ವಸಾಹತುಶಾಹಿಯ ಪ್ರವೃತ್ತಿ ರಾಮಾಯಣದಲ್ಲಿಲ್ಲ. ಕಾವ್ಯದಲ್ಲಿ ಬರುವ ಸೇತುಬಂಧನ ಎನ್ನುವುದು ಸೌಹಾರ್ದದ ಸಂಕೇತವಾಗಿದೆ ಎಂದರು. ವಿಧಾನಪರಿಷತ್ತು ಸಭಾಪತಿ ಡಿ. ಎಚ್.ಶಂಕರಮೂರ್ತಿ, ವಿಮರ್ಶಕ ಪ್ರೊ.ಎಂ.ಎಚ್.ಕೃಷ್ಣಯ್ಯ, ಸಚಿವ ಕೆ. ಜೆ.ಜಾರ್ಜ್, ಮೇಯರ್ ಮಂಜುನಾಥ ರೆಡ್ಡಿ ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?