ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಂ. ವೀರಪ್ಪ ಮೊಯ್ಲಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ವಂಚಿತರಿಗೆ ಅವಕಾಶ ಸಿಗಬೇಕು: ಸಿಎಂ

ಅವಕಾಶ ವಂಚಿತರಿಗೆ ಅವಕಾಶ ಸಿಗಬೇಕು ಹಾಗೂ ಕೆಳವರ್ಗಕ್ಕೆ ನ್ಯಾಯ ದೊರೆಯಬೇಕು ಎನ್ನುವುದೇ ಎಂ. ವೀರಪ್ಪ ಮೊಯ್ಲಿ ಅವರ ಸಾಹಿತ್ಯದ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು...

ಬೆಂಗಳೂರು: ಅವಕಾಶ ವಂಚಿತರಿಗೆ ಅವಕಾಶ ಸಿಗಬೇಕು ಹಾಗೂ ಕೆಳವರ್ಗಕ್ಕೆ ನ್ಯಾಯ ದೊರೆಯಬೇಕು ಎನ್ನುವುದೇ ಎಂ. ವೀರಪ್ಪ ಮೊಯ್ಲಿ ಅವರ ಸಾಹಿತ್ಯದ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಸರಸ್ವತಿ ಸಮ್ಮಾನ್ ಪುರಸ್ಕೃತ ಸಂಸದ ಎಂ.ವೀರಪ್ಪ ಮೊಯ್ಲಿ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮೊಯ್ಲಿ ಅವರು ಸಾಮಾನ್ಯರ ನಡುವಿನಿಂದ ಬಂದವರು. 10 ವರ್ಷ ತಪಸ್ಸಿನಂತೆ ಕೆಲಸ ಮಾಡಿದ ಅವರು ಮಹಾಕಾವ್ಯ ರಚಿಸಿ ಸಾಹಿತ್ಯಕ್ಕೆ ಹೆಸರು ತಂದಿದ್ದಾರೆ. ಸಾಹಿತ್ಯ ಹಾಗೂ ರಾಜಕೀಯದಲ್ಲಿ ನಿಪುಣರಾದ ಅವರು ಬದುಕಿನಲ್ಲಿ ಅಭಿವ್ಯಕ್ತಿಯನ್ನು ಸಾಹಿತ್ಯದ ಮೂಲಕ ಹೇಳಿದ್ದಾರೆ ಎಂದು ಶ್ಲಾಘಿಸಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ವೀರಪ್ಪ ಮೊಯ್ಲಿ, ಶ್ರೀರಾಮ ವನವಾಸಕ್ಕೆ ತೆರಳಿದ್ದ ಸಂದರ್ಭದಲ್ಲೇ ಪ್ರಜಾಪ್ರಭುತ್ವ ಕಾಣಸಿಗುತ್ತದೆ. ಆ ಸಮಯದಲ್ಲಿ 14 ವರ್ಷಗಳ ಕಾಲ ಶ್ರೀರಾಮ ಅಥವಾ ಭರತ ರಾಜ್ಯವಾಳಲಿಲ್ಲ. ಆಕ್ರಮಣಶೀಲ ಅಥವಾ ವಸಾಹತುಶಾಹಿಯ ಪ್ರವೃತ್ತಿ ರಾಮಾಯಣದಲ್ಲಿಲ್ಲ. ಕಾವ್ಯದಲ್ಲಿ ಬರುವ ಸೇತುಬಂಧನ ಎನ್ನುವುದು ಸೌಹಾರ್ದದ ಸಂಕೇತವಾಗಿದೆ ಎಂದರು. ವಿಧಾನಪರಿಷತ್ತು ಸಭಾಪತಿ ಡಿ. ಎಚ್.ಶಂಕರಮೂರ್ತಿ, ವಿಮರ್ಶಕ ಪ್ರೊ.ಎಂ.ಎಚ್.ಕೃಷ್ಣಯ್ಯ, ಸಚಿವ ಕೆ. ಜೆ.ಜಾರ್ಜ್, ಮೇಯರ್ ಮಂಜುನಾಥ ರೆಡ್ಡಿ ಹಾಜರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT