ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಂ. ವೀರಪ್ಪ ಮೊಯ್ಲಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ವಂಚಿತರಿಗೆ ಅವಕಾಶ ಸಿಗಬೇಕು: ಸಿಎಂ

ಅವಕಾಶ ವಂಚಿತರಿಗೆ ಅವಕಾಶ ಸಿಗಬೇಕು ಹಾಗೂ ಕೆಳವರ್ಗಕ್ಕೆ ನ್ಯಾಯ ದೊರೆಯಬೇಕು ಎನ್ನುವುದೇ ಎಂ. ವೀರಪ್ಪ ಮೊಯ್ಲಿ ಅವರ ಸಾಹಿತ್ಯದ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು...

ಬೆಂಗಳೂರು: ಅವಕಾಶ ವಂಚಿತರಿಗೆ ಅವಕಾಶ ಸಿಗಬೇಕು ಹಾಗೂ ಕೆಳವರ್ಗಕ್ಕೆ ನ್ಯಾಯ ದೊರೆಯಬೇಕು ಎನ್ನುವುದೇ ಎಂ. ವೀರಪ್ಪ ಮೊಯ್ಲಿ ಅವರ ಸಾಹಿತ್ಯದ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಸರಸ್ವತಿ ಸಮ್ಮಾನ್ ಪುರಸ್ಕೃತ ಸಂಸದ ಎಂ.ವೀರಪ್ಪ ಮೊಯ್ಲಿ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮೊಯ್ಲಿ ಅವರು ಸಾಮಾನ್ಯರ ನಡುವಿನಿಂದ ಬಂದವರು. 10 ವರ್ಷ ತಪಸ್ಸಿನಂತೆ ಕೆಲಸ ಮಾಡಿದ ಅವರು ಮಹಾಕಾವ್ಯ ರಚಿಸಿ ಸಾಹಿತ್ಯಕ್ಕೆ ಹೆಸರು ತಂದಿದ್ದಾರೆ. ಸಾಹಿತ್ಯ ಹಾಗೂ ರಾಜಕೀಯದಲ್ಲಿ ನಿಪುಣರಾದ ಅವರು ಬದುಕಿನಲ್ಲಿ ಅಭಿವ್ಯಕ್ತಿಯನ್ನು ಸಾಹಿತ್ಯದ ಮೂಲಕ ಹೇಳಿದ್ದಾರೆ ಎಂದು ಶ್ಲಾಘಿಸಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ವೀರಪ್ಪ ಮೊಯ್ಲಿ, ಶ್ರೀರಾಮ ವನವಾಸಕ್ಕೆ ತೆರಳಿದ್ದ ಸಂದರ್ಭದಲ್ಲೇ ಪ್ರಜಾಪ್ರಭುತ್ವ ಕಾಣಸಿಗುತ್ತದೆ. ಆ ಸಮಯದಲ್ಲಿ 14 ವರ್ಷಗಳ ಕಾಲ ಶ್ರೀರಾಮ ಅಥವಾ ಭರತ ರಾಜ್ಯವಾಳಲಿಲ್ಲ. ಆಕ್ರಮಣಶೀಲ ಅಥವಾ ವಸಾಹತುಶಾಹಿಯ ಪ್ರವೃತ್ತಿ ರಾಮಾಯಣದಲ್ಲಿಲ್ಲ. ಕಾವ್ಯದಲ್ಲಿ ಬರುವ ಸೇತುಬಂಧನ ಎನ್ನುವುದು ಸೌಹಾರ್ದದ ಸಂಕೇತವಾಗಿದೆ ಎಂದರು. ವಿಧಾನಪರಿಷತ್ತು ಸಭಾಪತಿ ಡಿ. ಎಚ್.ಶಂಕರಮೂರ್ತಿ, ವಿಮರ್ಶಕ ಪ್ರೊ.ಎಂ.ಎಚ್.ಕೃಷ್ಣಯ್ಯ, ಸಚಿವ ಕೆ. ಜೆ.ಜಾರ್ಜ್, ಮೇಯರ್ ಮಂಜುನಾಥ ರೆಡ್ಡಿ ಹಾಜರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT