ಮೇಯರ್ ಬಿ.ಎನ್.ಮಂಜುನಾಥ ರೆಡ್ಡಿ(ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಹೋಟೆಲ್ ತ್ಯಾಜ್ಯ ವಿಂಗಡಣೆ ಕಡ್ಡಾಯ

ನಗರದ ಹೋಟೆಲ್‍ಗಳಲ್ಲಿ ಉತ್ಪತ್ತಿಯಾಗುವ ಹಸಿ ತ್ಯಾಜ್ಯವನ್ನು ಕಡ್ಡಾಯವಾಗಿ ವಿಂಗಡಿಸಬೇಕೆಂದು ಮೇಯರ್ ಬಿ.ಎನ್.ಮಂಜುನಾಥ ರೆಡ್ಡಿ ಅವರು ಹೋಟೆಲ್ ಸಂಘಕ್ಕೆ ಸೂಚಿಸಿದರು...

ಬೆಂಗಳೂರು: ನಗರದ ಹೋಟೆಲ್‍ಗಳಲ್ಲಿ ಉತ್ಪತ್ತಿಯಾಗುವ ಹಸಿ ತ್ಯಾಜ್ಯವನ್ನು ಕಡ್ಡಾಯವಾಗಿ ವಿಂಗಡಿಸಬೇಕೆಂದು ಮೇಯರ್ ಬಿ.ಎನ್.ಮಂಜುನಾಥ ರೆಡ್ಡಿ ಅವರು ಹೋಟೆಲ್ ಸಂಘಕ್ಕೆ ಸೂಚಿಸಿದರು.

ಬೆಂಗಳೂರು ಹೋಟೆಲ್ ಅಸೋಸಿಯೇಷನ್, ನೋಬಲ್ ಎಕ್ಸ್ ಚೇಂಜ್ ಸಂಸ್ಥೆ ಹಾಗೂ ಆರೋಗ್ಯ ಅಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿದ ಅವರು, ಹಸಿ ಕಸವನ್ನು ಯಾವ
ರೀತಿ ವಿಂಗಡಿಸಲಾಗುತ್ತಿದೆ ಹಾಗೂ ವಿಂಗಡಿಸಿದ ಕಸವನ್ನು ನೋಬಲ್ ಎಕ್ಸ್ ಚೇಂಜ್ ಸಂಸ್ಥೆಗೆ ನೀಡಲಾಗುತ್ತಿದೆಯಾ ಎಂಬುದರ ಬಗ್ಗೆ ಮಾಹಿತಿ ಪಡೆದರು.

ನೋಬಲ್ ಎಕ್ಸ್‍ಚೇಂಜ್ ಸಂಸ್ಥೆಯವರು ಸಮಯಕ್ಕೆ ಸರಿಯಾಗಿ ಕಸ ಸಂಗ್ರಹಿಸಲು ಬರುವುದಿಲ್ಲ ಎಂದು ಹೋಟೆಲ್ ಸಂಘದವರು ದೂರಿದರು. ಈ ವೇಳೆ ಮಾತನಾಡಿದ ಮೇಯರ್, ಹೋಟೆಲ್‍ಗಳಿಂದ ನಿತ್ಯ ನಿಗದಿತ ಸಮಯಕ್ಕೆ ತ್ಯಾಜ್ಯ ತೆಗೆದುಕೊಂಡು ಹೋಗಬೇಕು. ಯಾವುದಾದರೂ ಹೋಟೆಲ್‍ನವರು ಕಸ ವಿಂಗಡಣೆ ಮಾಡದಿದ್ದರೆ, ಸಂಬಂಧಪಟ್ಟವರಿಗೆ ಮಾಹಿತಿ ನೀಡಬೇಕು. ಇದರಿಂದ ಸಂಸ್ಥೆ ಮೇಲೆ ಭರವಸೆ ಮೂಡಿಸಲಿದ್ದು, ಕಸ ವಿಲೇವಾರಿ ಸಮಸ್ಯೆ ಸಾಕಷ್ಟು ಬಗೆಹರಿಯಲಿದೆ ಎಂದು ಹೇಳಿದರು.

ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಸತ್ಯನಾರಾಯಣ ಮಾತನಾಡಿ, ಸರ್ಕಾರ ಪ್ಲಾಸ್ಟಿಕ್ ನಿಷೇಧಿಸಿದ್ದು, ಅದರಂತೆ ಎಲ್ಲ ಹೋಟೆಲ್‍ಗಳಲ್ಲಿ ಪ್ಲಾಸ್ಟಿಕ್ ಬಳಸದಂತೆ ಕ್ರಮ ವಹಿಸಬೇಕು
ಎಂದರು. ಉಪಮೇಯರ್ ಹೇಮಲತಾ, ಪದ್ಮನಾಭರೆಡ್ಡಿ ಇದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT