ಸೋಲಾರ್ ವಿದ್ಯುತ್ ಮಾದರಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಸೋಲಾರ್ ಯೋಜನೆಗೆ ಕೇಂದ್ರದಿಂದ ಪ್ರಶಂಸೆ

ಭಾರಿ ಅವ್ಯವಹಾರ ನಡೆದಿದೆ ಎಂದು ಜೆಡಿಎಸ್ ಮುಖಂಡರ ತೀವ್ರ ಟೀಕೆಗೆ ಗುರಿಯಾಗಿದ್ದ ರಾಜ್ಯ ಸರ್ಕಾರದ ಸೋಲಾರ್ ವಿದ್ಯುತ್ ಯೋಜನೆಯ...

ಬೆಂಗಳೂರು: ಭಾರಿ ಅವ್ಯವಹಾರ ನಡೆದಿದೆ ಎಂದು ಜೆಡಿಎಸ್ ಮುಖಂಡರ ತೀವ್ರ ಟೀಕೆಗೆ ಗುರಿಯಾಗಿದ್ದ ರಾಜ್ಯ ಸರ್ಕಾರದ ಸೋಲಾರ್ ವಿದ್ಯುತ್ ಯೋಜನೆಯ ಅನುಷ್ಠಾನ ಮಾದರಿಗೆ  ಈಗ ಕೇಂದ್ರ ಸರ್ಕಾರವೇ ಸರ್ಟಿಫಿಕೇಟ್ ನೀಡಿದೆ.

ಸೋಲಾರ್ ವಿದ್ಯುತ್ ಉತ್ಪಾದನೆಗೆ ಪ್ರೋತ್ಸಾಹ ನೀಡುವುದಕ್ಕೆ ಕರ್ನಾಟಕ ಅನುಷ್ಠಾನ  ಮಾಡುತ್ತಿರುವ ಮಾದರಿಯೇ ಸೂಕ್ತ ಎಂದು ಕೇಂದ್ರ ಇಂಧನ ಇಲಾಖೆ ಎರಡನೇ ಬಾರಿಗೆ  ಪ್ರಶಂಸೆ ವ್ಯಕ್ತಪಡಿಸಿದೆ.

ಈ ಯೋಜನೆಯ ಇತರೆ ಫಲಾನುಭವಿ ರಾಜ್ಯಗಳು ಕರ್ನಾಟಕಕ್ಕೆ ಭೇಟಿ ನೀಡಿ ಅಧ್ಯಯನ  ನಡೆಸಬೇಕೆಂಬ ಟಿಪ್ಪಣಿಯನ್ನು ಕಳುಹಿಸಿಕೊಡಲಾಗಿದೆ.  ಜೊತೆಗೆ, ಕೇಂದ್ರದ ಅಧಿಕಾರಿಗಳ  ತಂಡ ರಾಜ್ಯಕ್ಕೆ ಭೇಟಿ ನೀಡಿ ಸೋಲಾರ್ ಯೋಜನೆಯ ಅನುಷ್ಠಾನ ವಿಧಾನದ ಬಗ್ಗೆ ಅಧ್ಯಯನ ನಡೆಸಿದೆ.

ಕುತೂಹಲಕಾರಿ ಸಂಗತಿ ಎಂದರೆ, ಹಗರಣ ನಡೆದಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ವಿಧಾನವೂ ಈ ಅಧ್ಯಯನದಲ್ಲಿ ಸೇರಿಸಲಾಗಿದೆ. 

ಆನ್‍ಲೈನ್ ಅರ್ಜಿ ವಿತರಣೆ:
ಆನ್‍ಲೈನ್ ಅರ್ಜಿ ವಿತರಣೆ ವಿಧಾನ ಹಾಗೂ ಟೆಂಡರ್ ಪ್ರಕ್ರಿಯೆ   ಪಾರದರ್ಶಕವಾಗಿದ್ದು, ಭೂಮಾಲೀಕರು, ವಿಶ್ವವಿದ್ಯಾಲಯಗಳು, ಚಾರಿಟೇಬಲ್ ಸಂಸ್ಥೆಗಳು  ಹಾಗೂ ಖಾಸಗಿ ಪಾಲುದಾರಿಕೆಗೆ ತೆಗೆದುಕೊಂಡ ನಿರ್ಧಾರ ಸಮರ್ಪಕವಾಗಿದೆ' ಎಂದು ಕೇಂದ್ರ ಇಂಧನ ಇಲಾಖೆ ಅಧಿಕಾರಿಗಳು ರಾಜ್ಯಕ್ಕೆ ಕಳುಹಿಸಿರುವ ಶ್ಲಾಘನಾ ಪತ್ರದಲ್ಲಿ ಮತ್ತು ಇತರೆ  ರಾಜ್ಯಗಳಿಗೆ ಕಳುಹಿಸಿರುವ ಟಿಪ್ಪಣಿಯಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೋದಿ ನಡೆ 'ಹೇಡಿತನದ ಪರಮಾವಧಿ'; ನರವಾಣೆ ಪುಸ್ತಕ 56 ಇಂಚಿನ ಎದೆಯೊಳಗಿನ ಪುಕ್ಕಲುತನ ಬಯಲು ಮಾಡಿದೆ!

ಮಾಜಿ ಸೇನಾ ಮುಖ್ಯಸ್ಥ ನರವಾಣೆ ಅಪ್ರಕಟಿತ ಪುಸ್ತಕ ಪ್ರಸಾರ: ದೆಹಲಿ ಪೊಲೀಸರಿಂದ FIR, ರಾಹುಲ್ ಗಾಂಧಿ ವಿಚಾರಣೆ?

ನರವಾಣೆ ಪುಸ್ತಕಕ್ಕೆ ಹೆದರಿ ಮೋದಿ ಲೋಕಸಭೆಗೆ ಗೈರು, ಭದ್ರತಾ ಕಾರಣದಿಂದ ಅಲ್ಲ: ರಾಹುಲ್ ಗಾಂಧಿ

ನಮ್ಮ ಮುಂದೆ ನಡೆಯಲ್ಲ ಬಹಿಷ್ಕಾರದ ಆಟ: ಪಾಕಿಸ್ತಾನದ ಷರತ್ತುಗಳನ್ನು ತಿರಸ್ಕರಿಸಿದ ICC; ಅಡಕತ್ತರಿಯಲ್ಲಿ ಬಾಂಗ್ಲಾ!

ಕ್ಯಾಂಪಸ್‌ನಲ್ಲಿ ಮರ-ಗಿಡಗಳ ಕೊರತೆ ಇರುವ ಕಾಲೇಜುಗಳಿಗೆ ದಂಡ! ಎಲ್ಲಿ..? ಹೇಗೆ?

SCROLL FOR NEXT