ನಾಗೇಶ್ ಪ್ರೀತಂ 
ಜಿಲ್ಲಾ ಸುದ್ದಿ

ಮಾಜಿ ಶಾಸಕ ಶಂಕರಲಿಂಗೇ ಗೌಡರ ಪುತ್ರ ಆತ್ಮಹತ್ಯೆಗೆ ಯತ್ನ

ಮಾಜಿ ಶಾಸಕ ಶಂಕರಲಿಂಗೇಗೌಡ ಅವರ ಪುತ್ರ ನಾಗೇಶ್ ಪ್ರೀತಂ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಶನಿವಾರ ನಡೆದಿದೆ.

ಮೈಸೂರು: ಮಾಜಿ ಶಾಸಕ ಶಂಕರಲಿಂಗೇಗೌಡ ಅವರ ಪುತ್ರ ನಾಗೇಶ್ ಪ್ರೀತಂ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಶನಿವಾರ ನಡೆದಿದೆ.

ಇಂದು ಬೆಳಗ್ಗೆ ವಾಯು ವಿಹಾರಕ್ಕೆ ವೇಳೆ ನಾಗೇಶ್ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ಥಳೀಯರು ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಯದಿಂದ ಪಾರಾಗಿದ್ದಾರೆ. ಈ ಸಂಬಂಧ ಕುವೆಂಪು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನಾಗೇಶ್ ಅವರು ಆತ್ಮಹತ್ಯೆ ಯತ್ನಿಸಿರಬಹುದು ಎಂದು ಶಂಕಿಸಲಾಗಿದೆ.

ಚಾಮರಾಜ ಕ್ಷೇತ್ರದ ಮಾಜಿ ಶಾಸಕ ಎಚ್‌.ಎಸ್‌. ಶಂಕರಲಿಂಗೇಗೌಡ ಅವರು 2014ರ ಏಪ್ರಿಲ್‌ನಲ್ಲಿ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ರಾಜಕೀಯ ಕ್ಷೇತ್ರದಿಂದ ದೂರವಿದ್ದ ನಾಗೇಶ್ ಪ್ರೀತಂ ಉದ್ಯಮ ನಡೆಸುತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇದೆಲ್ಲಾ ಒಂದೆರಡು ತಿಂಗಳಷ್ಟೆ, ಭಾರತ ಮತ್ತೆ ಮಾತುಕತೆಗೆ ಬರಲಿದೆ, ಕ್ಷಮೆಯಾಚಿಸುತ್ತದೆ: ಅಮೆರಿಕ ವಾಣಿಜ್ಯ ಸಚಿವ ಲುಟ್ನಿಕ್

'ಇಸ್ಲಾಂಗೆ ವಿರುದ್ಧ': ದರ್ಗಾದ ಫಲಕದಲ್ಲಿನ ಅಶೋಕ ಲಾಂಛನ ವಿರೂಪಗೊಳಿಸಿದ ಸ್ಥಳೀಯರು!: Video

ಕರಾಳ ಚೀನಾಕ್ಕೆ ಭಾರತವನ್ನು ಕಳೆದುಕೊಂಡಂತೆ ಅನಿಸಿದೆ: ಜಗತ್ತಿನ ಗಮನ ಸೆಳೆದ ಡೊನಾಲ್ಡ್ ಟ್ರಂಪ್ ಪೋಸ್ಟ್!

GST ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್ ಏಕಿಲ್ಲ?: GST 3.0 ಬಗ್ಗೆ Nirmala Sitharaman ಹೇಳಿದ್ದೇನು?

"GST ಇಳಿಕೆಯ ಲಾಭ ಗ್ರಾಹಕರಿಗೆ ತಲುಪಿಸಲು ಬದ್ಧ": TATA ಕಾರುಗಳ ಬೆಲೆಯಲ್ಲಿ ಭಾರಿ ಇಳಿಕೆ: ವಿವರ ಇಂತಿದೆ..

SCROLL FOR NEXT