ನಾಗೇಶ್ ಪ್ರೀತಂ 
ಜಿಲ್ಲಾ ಸುದ್ದಿ

ಮಾಜಿ ಶಾಸಕ ಶಂಕರಲಿಂಗೇ ಗೌಡರ ಪುತ್ರ ಆತ್ಮಹತ್ಯೆಗೆ ಯತ್ನ

ಮಾಜಿ ಶಾಸಕ ಶಂಕರಲಿಂಗೇಗೌಡ ಅವರ ಪುತ್ರ ನಾಗೇಶ್ ಪ್ರೀತಂ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಶನಿವಾರ ನಡೆದಿದೆ.

ಮೈಸೂರು: ಮಾಜಿ ಶಾಸಕ ಶಂಕರಲಿಂಗೇಗೌಡ ಅವರ ಪುತ್ರ ನಾಗೇಶ್ ಪ್ರೀತಂ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಶನಿವಾರ ನಡೆದಿದೆ.

ಇಂದು ಬೆಳಗ್ಗೆ ವಾಯು ವಿಹಾರಕ್ಕೆ ವೇಳೆ ನಾಗೇಶ್ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ಥಳೀಯರು ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಯದಿಂದ ಪಾರಾಗಿದ್ದಾರೆ. ಈ ಸಂಬಂಧ ಕುವೆಂಪು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನಾಗೇಶ್ ಅವರು ಆತ್ಮಹತ್ಯೆ ಯತ್ನಿಸಿರಬಹುದು ಎಂದು ಶಂಕಿಸಲಾಗಿದೆ.

ಚಾಮರಾಜ ಕ್ಷೇತ್ರದ ಮಾಜಿ ಶಾಸಕ ಎಚ್‌.ಎಸ್‌. ಶಂಕರಲಿಂಗೇಗೌಡ ಅವರು 2014ರ ಏಪ್ರಿಲ್‌ನಲ್ಲಿ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ರಾಜಕೀಯ ಕ್ಷೇತ್ರದಿಂದ ದೂರವಿದ್ದ ನಾಗೇಶ್ ಪ್ರೀತಂ ಉದ್ಯಮ ನಡೆಸುತ್ತಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದ.ಕೊರಿಯಾದಲ್ಲಿ Donald Trump-Xi Jinping ಭೇಟಿ, ಉಭಯ ನಾಯಕರು ಹೇಳಿದ್ದೇನು?

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ ಬಣ ಮೇಲುಗೈ, ಉತ್ಸಾಹ ಕಳೆದುಕೊಳ್ಳುತ್ತಿರುವ ಡಿಕೆಶಿ ಬಣ !

ಥರ್ಡ್‌ ಕ್ಲಾಸ್‌ ವಂಚಕನಿಂದ ನಾವು ಇನ್ನೇನು ನಿರೀಕ್ಷಿಸಲು ಸಾಧ್ಯ: ಅಸ್ಸಾಂ CM ಹಿಮಂತ ಶರ್ಮಾಗೆ ಪ್ರಿಯಾಂಕ್ ತಪರಾಕಿ

ರಾಹುಲ್‌ ಗಾಂಧಿಯಂತೆ ರಾಜ್ಯಕ್ಕೆ ಸಿದ್ದರಾಮಯ್ಯ ನಾಯಕತ್ವ ಅಗತ್ಯ- ಅನಿವಾರ್ಯ: ಸಂತೋಷ್ ಲಾಡ್‌

ಕಲಿಯುಗದಲ್ಲಿ ಪಾಪ ನಿವಾರಣೆಗೆ ಮಂತ್ರ ಜಪವೇ ಯೋಗ್ಯ: 'ಪಠಣ ದೋಷ'ದಿಂದ ಮುಕ್ತಿ ಹೇಗೆ? 'ಕುಂಡಲಿನಿ ಶಕ್ತಿ' ಜಾಗೃತಗೊಳಿಸುವ ಉಪಾಯ ತಿಳಿದುಕೊಳ್ಳಿ!

SCROLL FOR NEXT