ಜಿಲ್ಲಾ ಸುದ್ದಿ

ಸಣ್ಣ ಉದ್ದಿಮೆಗಳ ಪ್ರಗತಿಗೆ ಕೇಂದ್ರದ ಒತ್ತು

Manjula VN

ಬೆಳ್ತಂಗಡಿ: ತಾಲೂಕಿನ ಲಾಯಿಲದಲ್ಲಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕೇಂದ್ರ ಕಚೇರಿಯನ್ನು ಕೇಂದ್ರ ಸರ್ಕಾರದ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಉದ್ದಿಮೆ ಸಚಿವ ಕಲ್‍ರಾಜ್ ಮಿಶ್ರಾ ಶನಿವಾರ ಸಂಜೆ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಕಲ್‍ರಾಜ್ ಮಿಶ್ರಾ, ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣ ಉದ್ದಿಮೆಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚು ಒತ್ತು
ನೀಡುತ್ತಿದೆ. ಸ್ಥಳೀಯ ಉದ್ಯೋಗಾವಕಾಶಗಳಿಗೆ ಪೂರಕವಾದ ತರಬೇತಿಗಳನ್ನು ಸ್ಥಳೀಯವಾಗಿಯೇ ಒದಗಿಸಲು ಕೇಂದ್ರಗಳಿಗೆ ಉತ್ತೇಜನ ನೀಡಲಾಗುವುದು. ಸರ್ಕಾರವು ಅಂತರ್ಜಾಲದ ಮೂಲಕ ಉದ್ಯೋಗಗಳನ್ನು ಗುರುತಿಸಿ ಪಡೆದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

ಯುವಜನತೆಗೆ ಪದವಿಯ ನಂತರ ಉದ್ಯೋಗಗಳನ್ನು ಆರಂಬಿsಸಲು, ಅದಕ್ಕೆ ಪೂರಕವಾದ ಯಂತ್ರೋಪಕರಣಗಳನ್ನು ಖರೀದಿಸಲು ಉತ್ತೇಜನ ನೀಡಲಾಗುವುದು ಎಂದರು. ಸಣ್ಣ ಉದ್ದಿಮೆಗಳನ್ನು ನಡೆಸುವಾಗ ಬರುವ ಕಠಿಣ ಸಮಸ್ಯೆಗಳನ್ನು ನಿವಾರಿಸಲು ಸರ್ಕಾರ ವಿಶೇಷ ಯೋಜನೆ ಸಿದ್ಧಪಡಿಸಿದೆ. ಅಲ್ಲದೆ ಉದ್ದಿಮೆಗಳ ನೋಂದಣಿಗೂ ಸುಲಲಿತ ವ್ಯವಸ್ಥೆಯನ್ನು ಮಾಡಿದೆ ಎಂದರು. ಸಂಸ್ಥೆ ಅಧ್ಯಕ್ಷ ಧರ್ಮಾಧಿಕಾರಿ ಡಾ.ಡಿ. ವಿರೇಂದ್ರ ಹೆಗ್ಗಡೆ, ಆಡಳಿತ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ್, ನಿರ್ದೇಶಕಿ ಮನೋರಮಾ ಭಟ್ ಉಪಸ್ಥಿತರಿದ್ದರು.

SCROLL FOR NEXT