ಪರಮೇಶ್ವರ್ 
ಜಿಲ್ಲಾ ಸುದ್ದಿ

ಪ್ರಚೋದನಾ ಭಾಷಣ ಮಾಡಿದರೆ ಕಠಿಣ ಕ್ರಮ

ಸಾಹಿತಿಗಳು ಹಾಗೂ ಹಿರಿಯರು ಜನರ ಭಾವನೆಗಳನ್ನು ಪ್ರಚೋದಿಸುವಂತಹ ಭಾಷಣ ಮಾಡಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ಗೃಹ...

ಹಾಸನ: ಸಾಹಿತಿಗಳು ಹಾಗೂ ಹಿರಿಯರು ಜನರ ಭಾವನೆಗಳನ್ನು ಪ್ರಚೋದಿಸುವಂತಹ ಭಾಷಣ ಮಾಡಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ. ಸಾಹಿತಿಗಳು ನಾನಾ ಸಮುದಾಯಗಳಲ್ಲಿ ಗೊಂದಲ ಸೃಷ್ಟಿಸುವಂತ ಭಾಷೆ ಬಳಸಬಾರದು ಅಥವಾ ಆ ರೀತಿ ಭಾಷಣ ಮಾಡಬಾರದು. ಯಾರೇ ಪ್ರಚೋದನಾಕಾರಿ ಭಾಷಣ ಮಾಡಿದರೂ ಕ್ರಮ ಕೈಗೊಳ್ಳಲಾಗುವುದು ಎಂದು ಶನಿವಾರ ಗೊರೂರು ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಸಮಾಜದಲ್ಲಿ ಸಾಮರಸ್ಯ ಕಾಪಾಡುವುದು ಎಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಚಿಂತನೆ ಮಾಡಬೇಕೇ ಹೊರತು ಜನಾಂಗ, ಸಮುದಾಯಗಳನ್ನು ಕೆರಳಿಸುವ ಕೆಲಸ ಮಾಡಬಾರದು. ಅದನ್ನು ಯಾವುದೇ ರೀತಿಯಲ್ಲೂ ಒಪ್ಪಲಿಕ್ಕೆ ಸರ್ಕಾರ ತಯಾರಿಲ್ಲ. ಮುಂದಿನ ದಿನಗಳಲ್ಲಿ ಮಡಿಕೇರಿ, ಮಂಗಳೂರಿನಲ್ಲಿ ಆದಂತಹ ಘಟನೆಗಳನ್ನು ನಡೆಯಬಾರದೆಂದು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ಟಿಪ್ಪು ಜಯಂತಿ ಆಚರಣೆ ನಿರ್ಧಾರ ಮರು ಪರಿಶೀಲಿಸುವ ಪ್ರಸ್ತಾವ ಸರಕಾರದ ಮುಂದಿಲ್ಲ. ಸಮಾಜ ಸುಧಾರಕರ ಪುತ್ಥಳಿ, ಜಯಂತಿ ಆಚರಣೆಗಳಿಂದ ಸಾಮಾಜಿಕ ಬದಲಾವಣೆ ಸಾಧ್ಯವಿಲ್ಲ ಎಂಬುದು ಸರಿಯಲ್ಲ. ಗಾಂಧಿಜೀ, ಬಸವಣ್ಣ, ಅಂಬೇಡ್ಕರ್ ಅವರಂತಹವರ ತತ್ವಾದರ್ಶಗಳನ್ನು ಯುವ ಜನಾಂಗಕ್ಕೆ ತಿಳಿಸುವುದು ಅಗತ್ಯವಾಗಿದೆ. ಆದ್ದರಿಂದ ಅಂಥವರ ಪುತ್ಥಳಿ ಸ್ಥಾಪನೆ ಮತ್ತು ಜಯಂತಿ ಆಚರಣೆಗಳು ಅವಶ್ಯ ಎಂದರು. ಈ ನೆಲದ ಕಾನೂನಿನ ರಕ್ಷಣೆಗೆ ರಾಜ್ಯ ಸರ್ಕಾರ ಸಮರ್ಥವಾಗಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಉತ್ತಮ ರೀತಿಯಲ್ಲೇ ಇದೆ. ಕರಾವಳಿ ಪ್ರದೇಶದಲ್ಲಿ ನೈತಿಕ ಪೊಲೀಸ್ ಗಿರಿ ಎಂದು ಕರೆಯುವುದು ಸರಿಯಲ್ಲ. ಇನ್ನೊಬ್ಬರ ನಡವಳಿಕೆಯನ್ನು ನಿಯಂತ್ರಿಸುವುದು ನೈತಿಕ ಗುರಿಯಲ್ಲ. ಅದಕ್ಕೆ ರಾಜ್ಯದಲ್ಲಿ ಅವಕಾಶವೂ ಇಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT